ಪಿಒಕೆಯಲ್ಲಿ ‘ಬ್ಲ್ಯಾಕ್ ಡೇ’ ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದ ಪಾಕ್ ಪೊಲೀಸರು; ಇಬ್ಬರ ಸಾವು


Team Udayavani, Oct 22, 2019, 8:58 PM IST

Gilgit-Protest-22-10

ಮುಝಾಫರಾಬಾದ್ (ಪಿ.ಒ.ಕೆ.): ಪಾಕಿಸ್ಥಾನ ತಮ್ಮ ನೆಲವನ್ನು ಆಕ್ರಮಿಸಿಕೊಂಡು 72 ವರ್ಷಗಳು ಸಂದ ಹಿನ್ನಲೆಯಲ್ಲಿ ‘ಬ್ಲ್ಯಾಕ್ ಡೇ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾಗದ ಹೋರಾಟಗಾರರ ವಿರುದ್ಧ ಪಾಕಿಸ್ಥಾನ ಪೊಲೀಸರು ಲಾಠೀ ಚಾರ್ಜ್ ನಡೆಸಿದ ಪರಿಣಾಮ ಇಬ್ಬರು ಹೋರಾಟಗಾರರು ಪ್ರಾಣತ್ಯಾಗ ಮಾಡಿದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ 80ಕ್ಕೂ ಹೆಚ್ಚು ಹೋರಾಟಗಾರರಿಗೆ ಗಾಯಗಳಾಗಿವೆ.

ಪಾಕ್ ಆಕ್ರಮಿತ ಕಾಶ್ಮೀರದ ಮುಝಾಫರಾಬಾದ್ ನಲ್ಲಿ ವಿವಿಧ ರಾಜಕೀಯ ಪಕ್ಷಗಳು ಸರ್ವ ಸ್ವತಂತ್ರ ಪಕ್ಷಗಳ ಮೈತ್ರಿಕೂಟದಡಿಯಲ್ಲಿ ಸ್ವಾತಂತ್ರ್ಯ ಪರ ಜಾಥಾ ಒಂದನ್ನು ಮಂಗಳವಾರದಂದು ಆಯೋಜಿಸಿದ್ದವು. ಪಾಕಿಸ್ಥಾನ ಸೇನೆ 1947ರ ಅಕ್ಟೋಬರ್ 22ರಂದು ಜಮ್ಮುಕಾಶ್ಮೀರದ ಮೇಲೆ ಆಕ್ರಮಣ ಮಾಡಿದ ಈ ದಿನವನ್ನು ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಗಿಲ್ಗಿಟ್ ಭಾಗದ ಜನತೆ ‘ಕರಾಳ ದಿನ’ವನ್ನಾಗಿ ಆಚರಿಸುತ್ತಿದ್ದಾರೆ. ಮತ್ತು ಕಳೆದ 72 ವರ್ಷಗಳಿಂದ ಈ ಭಾಗದ ಜನತೆ ಸ್ವತಂತ್ರ ಭೂಭಾಗಕ್ಕಾಗಿ ಆಗ್ರಹಿಸುತ್ತಿದ್ದಾರೆ.


ಸಾವಿರಾರು ಸಂಖ್ಯೆಯಲ್ಲಿದ್ದ ಜನರು ಪಾಕಿಸ್ಥಾನದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಬೀದಿಗಿಳಿದು ಪ್ರತಿಭಟಿಸುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಟಿಯರ್ ಗ್ಯಾಸ್ ಮತ್ತು ಲಾಠೀ ಚಾರ್ಚ್ ಅಸ್ತ್ರಗಳನ್ನು ಬಳಸಿದರು. ಈ ಸಂದರ್ಭದಲ್ಲಿ ಇಬ್ಬರು ಪ್ರತಿಭಟನಾಕಾರರು ಮೃತಪಟ್ಟರೆ ಹಲವರು ಪೊಲೀಸರ ಲಾಠೀ ಏಟಿಗೆ ಗಾಯಗೊಂಡರು.

‘ಪಾಕಿಸ್ಥಾನ ಸರಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುವುದು ನಮ್ಮ ಉದ್ದೇಶ ಆದರೆ ಸರಕಾರ ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪ್ರಯೋಗಕ್ಕೆ ಮುಂದಾದರೆ ನಮ್ಮ ಧ್ವನಿ ಪಾಕ್ ಸರಕಾರಕ್ಕೆ ತಲುಪುವವಂತೆ ಮಾಡಲು ನಾವು ಏನು ಮಾಡಲೂ ಸಿದ್ಧ’ ಎಂದು ಹೋರಾಟಗಾರರ ಮುಖಂಡರೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

1947ನೇ ಇಸವಿಯ ಅಕ್ಟೋಬರ್ 22ರಂದು ಪಾಕಿಸ್ಥಾನಿ ಪಡೆಗಳು ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವನ್ನು ಮಾಡಿದ್ದವು. ಮತ್ತು ಈ ಸಂದರ್ಭದಲ್ಲಿ ಭಾರತದ ಸೇನಾ ಪ್ರತಿರೋಧಕ್ಕೆ ಶರಣಾಗಿ ಪಾಕ್ ಪಡೆಗಳು ಜಮ್ಮು ಕಾಶ್ಮೀರದಿಂದ ಹಿಂದೆ ಸರಿದಿದ್ದವಾದರೂ ಕಣಿವೆ ರಾಜ್ಯದ ಕೆಲ ಭಾಗಗಳನ್ನು ತಮ್ಮ ವಶದಲ್ಲಿರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದವು. ಇದನ್ನು ಈ ಭಾಗದ ಜನರು ಮತ್ತು ಭಾರತ ಪಾಕ್ ಆಕ್ರಮಿತ ಕಾಶ್ಮೀರ ಎಂದು ಕರೆದರೆ, ಪಾಕಿಸ್ಥಾನ ಈ ಭೂಪ್ರದೇಶವನ್ನು ‘ಆಝಾದ್ ಪಾಕಿಸ್ಥಾನ’ ಎಂಬ ಹೆಸರಿನಿಂದ ಗುರುತಿಸುತ್ತಿದೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.