ಮಲ್ಯಗೆ ಮೇಲ್ಮನವಿಯ ಅವಕಾಶ
Team Udayavani, Jul 3, 2019, 1:18 AM IST
ಲಂಡನ್: ತಮ್ಮನ್ನು ಭಾರತಕ್ಕೆ ಹಸ್ತಾಂತರಗೊಳಿಸುವಂತೆ ಲಂಡನ್ನ ವೆಸ್ಟ್ಮಿನಿಸ್ಟರ್ ನ್ಯಾಯಾಲಯ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಬ್ಯಾಂಕ್ ವಂಚನೆ ಆರೋಪಿ ವಿಜಯ ಮಲ್ಯಗೆ ರಾಯಲ್ ಕೋರ್ಟ್ ಆಫ್ ಜಸ್ಟಿಸ್ ಅನುಮತಿ ನೀಡಿದ್ದು, ಅದಕ್ಕೆ ಯು.ಕೆ. ಸರ್ಕಾರದ ಗೃಹ ಸಚಿವ ಸಾಜಿದ್ ಜಾವಿದ್ ಅವರ ಮೊಹರೂ ಬಿದ್ದಿದೆ.
ಮೇಲ್ಮನವಿಗೆ ಅನುಮತಿ ಕೋರಿ ಮಲ್ಯ ಐದು ಕಾರಣಗಳನ್ನು ನ್ಯಾಯಾಲಯದ ಮುಂದಿಟ್ಟಿದ್ದರು. ಕೆಳ ನ್ಯಾಯಾಲಯವು ತಮ್ಮ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ರೀತಿ ಹಾಗೂ ಅವನ್ನು ಅರ್ಥೈಸಿದ ಬಗೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಆ ಐದು ಕಾರಣಗಳಲ್ಲೊಂ ದಾಗಿತ್ತು. ತೀರಾ ವಿರಳವೆನಿಸುವ ಈ ಕಾರಣದ ಔಚಿತ್ಯವನ್ನು ಮಾನ್ಯ ಮಾಡಿದ ನ್ಯಾ. ಜಾರ್ಜ್ ಲೆಗೆಟ್ ಹಾಗೂ ನ್ಯಾ. ಆ್ಯಂಡ್ರ್ಯೂ ಪಾಪೆಲ್ವೆಲ್ ಅವರುಳ್ಳ ದ್ವಿಸದಸ್ಯ ಪೀಠ, ಪ್ರಕರಣದಲ್ಲಿ ಮಲ್ಯ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿತು. ಈಗ, ರಾಯಲ್ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ, ಮಲ್ಯ ಪ್ರಕರಣದ ವಿಚಾರಣೆ ಪೂರ್ಣ ಪ್ರಮಾಣದ ವಿಚಾರಣೆಯಾಗಿ ಪುನಃ ಶುರುವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ