ಇಬ್ಬರು ಭಾರತೀಯರ ಸಾವು: ಹೌತಿ ಬಂಡುಕೋರರ 2 ಕ್ಷಿಪಣಿ ಹೊಡೆದುರುಳಿಸಿದ ಯುಎಇ
ಕ್ಷಿಪಣಿಯ ಅವಶೇಷಗಳು ಅಬುಧಾಬಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಳಕ್ಕೆ ಬಿದ್ದಿರುವುದಾಗಿ ವರದಿ ವಿವರಿಸಿದೆ.
Team Udayavani, Jan 24, 2022, 12:37 PM IST
ಅಬುಧಾಬಿ: ಯೆಮೆನ್ ನ ಹೌತಿ ಬಂಡುಕೋರರು ರಾಜಧಾನಿ ಅಬುಧಾಬಿಯನ್ನು ಗುರಿಯಾಗಿರಿಸಿಕೊಂಡು ಹಾರಿಸಿದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ತಡೆ ಹಿಡಿದು ಹೊಡೆದುರುಳಿಸಲಾಗಿದೆ ಎಂದು ಯುಎಇ ರಕ್ಷಣಾ ಸಚಿವಾಲಯ ಸೋಮವಾರ (ಜನವರಿ 24) ತಿಳಿಸಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಕಾಲದ ಹಗರಣ ಪ್ರಶ್ನೆಗೆ ಎಚ್ ಡಿಕೆ ಸಿದ್ದತೆ: ಮತ್ತೆ ಅರ್ಕಾವತಿ ಸದ್ದು?
ಯೆಮೆನ್ ಬಂಡುಕೋರರ ದಾಳಿಗೆ ಯುಎಇ ಗಡಿಯಲ್ಲಿ ಇಬ್ಬರು ಭಾರತೀಯರು, ಒರ್ವ ಪಾಕಿಸ್ತಾನಿ ಪ್ರಜೆ ಸೇರಿದಂತೆ ಮೂವರು ಸಾವನ್ನಪ್ಪಿದ್ದು, ಈ ದಾಳಿಯ ಹೊಣೆಯನ್ನು ಯೆಮೆನ್ ಬಂಡುಕೋರರು ಹೊತ್ತಕೊಂಡ ಬಳಿಕ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.
ಸೋಮವಾರ ಹೌತಿ ಬಂಡುಕೋರರು ನಡೆಸಿದ ದಾಳಿಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ. ಬಂಡುಕೋರರು ಗುರಿಯಾಗಿರಿಸಿಕೊಂಡು ಹಾರಿಸಿದ ಕ್ಷಿಪಣಿಯನ್ನು ಹೊಡೆದುರುಳಿಸಿದ್ದು, ಕ್ಷಿಪಣಿಯ ಅವಶೇಷಗಳು ಅಬುಧಾಬಿ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಳಕ್ಕೆ ಬಿದ್ದಿರುವುದಾಗಿ ವರದಿ ವಿವರಿಸಿದೆ.
ಹೌತಿ ಬಂಡುಕೋರರ ಎಲ್ಲಾ ರೀತಿಯ ದಾಳಿಗಳನ್ನು ಎದುರಿಸಲು ಯುಎಇ ಸಿದ್ಧವಾಗಿದೆ ಎಂದು ಸಚಿವಾಲಯ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಿದ್ದು, ದೇಶವನ್ನು ಎಲ್ಲಾ ರೀತಿಯ ದಾಳಿಗಳಿಂದ ರಕ್ಷಿಸಲು ಸೇನೆ ಎಲ್ಲಾ ವಿಧದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಡಬ್ಲ್ಲುಎಎಂ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.
ಯುಎಇ ಕುರಿತ ಅಧಿಕೃತ ಸುದ್ದಿಯನ್ನು ಮಾತ್ರ ಜನರು ನಂಬಬೇಕಾಗಿದ್ದು, ಊಹಾಪೋಹದ ವರದಿಗೆ ಕಿವಿಗೊಡಬಾರದೆಂದು ಸಚಿವಾಲಯ ಮನವಿ ಮಾಡಿಕೊಂಡಿದೆ.
ಕಳೆದ ಶುಕ್ರವಾರ ಯೆಮೆನ್ ನ ಉತ್ತರಪ್ರಾಂತ್ಯದ ಸದ್ದಾದಲ್ಲಿರುವ ತಾತ್ಕಾಲಿಕ ಬಂಧನ ಕೇಂದ್ರದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ 60 ಮಂದಿ ಸಾವನ್ನಪ್ಪಿದ್ದರು. ಮಂಗಳವಾರ ಹೌತಿ ಬಂಡುಕೋರರ ಹಿಡಿತದಲ್ಲಿರುವ ಸನಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 20 ಮಂದಿ ಸಾವನ್ನಪ್ಪಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”
ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ
Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್, ಸಾವಿನ ಸಂಖ್ಯೆ 90ಕ್ಕೆ ಏರಿಕೆ
Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್ ಪಡೆ
ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!
MUST WATCH
ಹೊಸ ಸೇರ್ಪಡೆ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ
Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”