ತೈಲ ಬಿಟ್ಟು , ಮಂಗಳನತ್ತ ಅರಬ್‌ ಲಗ್ಗೆ?


Team Udayavani, Oct 23, 2017, 6:35 AM IST

mangala.jpg

ದುಬಾೖ: ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ) ಎಂದರೆ ತೈಲೋದ್ಯಮಕ್ಕೆ ಹೆಸರುವಾಸಿ. ಜತೆಗೆ ಅದ್ದೂರಿ ಮತ್ತು ವೈಭವೋಪೇತ ಕಟ್ಟಡಗಳ ನಿರ್ಮಾಣಕ್ಕೂ ಎತ್ತಿದ ಕೈ. ಬದಲಾಗಿರುವ ಕಾಲ ಸ್ಥಿತಿಯಲ್ಲಿ ಅರಬ್‌ ರಾಷ್ಟ್ರ ಯುಎಇ ತೈಲೋದ್ಯಮ ಕ್ಷೇತ್ರದ ಬಗ್ಗೆ ಈಗಾಗಲೇ ಪೂರಕವಲ್ಲದ ವರದಿಗಳು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ಆಯ್ಕೆಯ ಕ್ಷೇತ್ರವನ್ನು ಬದಲಾವಣೆ ಮಾಡಿಕೊಂಡಿದೆ. 

ವಿಶ್ವದಲ್ಲಿಯೇ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ ಖಾತೆಯನ್ನು ಸೃಷ್ಟಿಸಿ, ಅದಕ್ಕೆ ಸಚಿವರನ್ನೇ ನೇಮಕ ಮಾಡಿದೆ. ಅಮೆರಿಕ ಮತ್ತಿತರ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಈ ಕ್ಷೇತ್ರದಲ್ಲಿ ಸಂಶೋಧನೆ ನಡೆಯುತ್ತಿದ್ದರೂ ಸರಕಾರದ ಮಟ್ಟದಲ್ಲಿ ಅಧಿಕೃತವಾಗಿ ಬೆಂಬಲ ನೀಡಿದ್ದು ವಿಶ್ವದಲ್ಲಿ ಇದೇ ಮೊದಲು.

ಅಮೆರಿಕದ ನಾಸಾ ಮಂಗಳ ಗ್ರಹದ ಮೇಲ್ಮೆ„ಯಲ್ಲಿ ಮಾನ ವನ ವಾಸಕ್ಕೆ ಯೋಗ್ಯವಾದ ಅಂಶಗಳ ಬಗ್ಗೆ ಸಂಶೋಧನೆ ನಡೆಸುತ್ತಿರುವಂತೆಯೇ 2117ರ ವೇಳೆಗೆ ಅಲ್ಲಿ 6 ಲಕ್ಷ ಮಂದಿಗೆ ಅನು ಕೂಲವಾಗುವಂಥ ನಗರ ನಿರ್ಮಾಣದ ಗುರಿಯನ್ನು ಯುಎಇ ಹಾಕಿಕೊಂಡಿದೆ. ಅದಕ್ಕಾಗಿಯೇ ಒಮರ್‌ ಬಿನ್‌ ಸುಲ್ತಾನ್‌ ಅಲ್‌ ಒಲಾಮ (27) ಅವರನ್ನು ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌) ಖಾತೆಯ ಸಚಿವರನ್ನಾಗಿ ನೇಮಿಸಿದೆ.

ಮಂಗಳನಲ್ಲಿ ನೆಲೆಯೂರಲು ಅಮೆರಿಕ, ಚೀನ, ರಷ್ಯಾ, ಐರೋಪ್ಯ ಒಕ್ಕೂಟ ರಾಷ್ಟ್ರಗಳು ಈಗಾಗಲೇ ಪ್ರಯತ್ನ ನಡೆಸುತ್ತಿವೆ. ಅದಕ್ಕಿಂತ ಭಿನ್ನವಾಗಿ ಅಲ್ಲಿ ತನ್ನ ಛಾಪು ಮೂಡಿಸಲು ಮುಂದಾಗಿದೆ ಯುಎಇ. ಸ್ಪೇಸ್‌ ಎಕ್ಸ್‌ನ ಮುಖ್ಯ ತಾಂತ್ರಿಕ ಅಧಿಕಾರಿ ಮತ್ತು ಅಮೆರಿಕದ ಶ್ರೀಮಂತ ಉದ್ಯಮಿ ಎಲಾನ್‌ ಮಸ್ಕ್ನ ಸಂಸ್ಥೆಯೂ ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಿದೆ.

ತೈಲದಿಂದ ಮಂಗಳನತ್ತ: ತೈಲೋದ್ಯಮ ಕ್ಷೇತ್ರದಲ್ಲಿ 2014ರಲ್ಲಿ ಉಂಟಾದ ತಾತ್ಕಾಲಿಕ ಹಿನ್ನಡೆ ಅರಬ್‌ ರಾಷ್ಟ್ರ ಹಾಕಿಕೊಂಡಿರುವ ಮಂಗಳನಲ್ಲಿ ನಗರ ನಿರ್ಮಾಣ ಯೋಜನೆಗೆ ಕೊಂಚ ಬ್ರೇಕ್‌ ನೀಡಿತ್ತು. ತೈಲ ಕ್ಷೇತ್ರದಲ್ಲಿ ಉಂಟಾದ ಬೆಲೆ ಕುಸಿತದ ಬಿಕ್ಕಟ್ಟು ಅಲ್ಲಿನ ಆರ್ಥಿಕತೆ ಮೇಲೆ ಬೀರಿರುವ ನೇತ್ಯಾತ್ಮಕ ಪರಿಣಾಮ ಇನ್ನೂ ಮುಕ್ತಾಯ ಕಂಡಿಲ್ಲ. ಇದರ ಹೊರತಾಗಿಯೂ ಅರಬ್‌ ರಾಷ್ಟ್ರವು ಮಂಗಳ ಗ್ರಹದಲ್ಲಿನ ಪ್ರಸ್ತಾವಿತ ಯೋಜನೆ ಬಗ್ಗೆ ವಿವಿಧ ಕಂಪೆನಿಗಳಲ್ಲಿ ಹೂಡಿಕೆ ಮಾಡುತ್ತಿದೆ. 

ಬಾಹ್ಯಾಕಾಶ ಕ್ಷೇತ್ರವನ್ನು ಒಂದು ಕೈಗಾರಿಕೆ ಎಂದು ಪರಿಗಣಿಸಿರುವ ಯುಎಇ ಸರಕಾರ, ಇದುವರೆಗೆ ಈ ಉದ್ದೇಶಕ್ಕಾಗಿ 32,500 ಕೋಟಿ ರೂ.ಗಳಿಗಿಂತಲೂ ಹೆಚ್ಚಿನ ಮೊತ್ತವನ್ನು ವಿನಿಯೋಗ ಮಾಡಿದೆ. ಅದರಲ್ಲಿ ನಾಲ್ಕು ಉಪಗ್ರಹಗಳನ್ನು ಈಗಾಗಲೇ ಉಡಾಯಿಸಿದೆ. ಇದೇ ಉದ್ದೇಶಕ್ಕಾಗಿ 2018ರಲ್ಲಿ ಮತ್ತೂಂದು ಉಪಗ್ರಹವನ್ನು ಹಾರಿ ಬಿಡಲಾಗುತ್ತದೆ.

ಬಾಹ್ಯಾಕಾಶದಲ್ಲಿ ಹೂಡಿಕೆ ಅಥವಾ ಸ್ಪೇಸ್‌ ಮೈನಿಂಗ್‌ ಎಂಬ ಹೊಸ ಕ್ಷೇತ್ರದಲ್ಲಿ ಅಮೆರಿಕದ ಶ್ರೀಮಂತ ಕುಳಗಳಾದ ಸ್ಪೇಸ್‌ ಎಕ್ಸ್‌ನ ಎಲಾನ್‌ ಮಸ್ಕ್ ಮತ್ತು ಅಮೆಜಾನ್‌ನ ಜೆಫ್ ಬೆಜೋಸ್‌ ಕೂಡ ಆಸಕ್ತಿ ತೋರಿಸಿ, ಅಲ್ಲಿನ ಸರಕಾರದ ಜತೆಗೆ ಪಾಲುದಾರಿಕೆ ಪಡೆದುಕೊಳ್ಳುವತ್ತ ಮುಂದಾಗಿದ್ದಾರೆ. ಅಮೆರಿಕದ ಮಾರುಕಟ್ಟೆ ಸಂಶೋಧನಾ ಸಂಸ್ಥೆ ಗೋಲ್ಡ್‌ಮನ್‌ ಸ್ಯಾಶ್‌ ಈ ಕ್ಷೇತ್ರದ ಬಗ್ಗೆ ಸಿದ್ಧಪಡಿಸಿರುವ ಟಿಪ್ಪಣಿ ಪ್ರಕಾರ “ಈ ಕ್ಷೇತ್ರ ಊಹಿಸಿದ್ದಕ್ಕಿಂತಲೂ ವಾಸ್ತವಿಕವಾಗಿರಬಹುದು. ನೀರನ್ನು ಇಂಧನವನ್ನಾಗಿಸಿಕೊಳ್ಳುವ ಪ್ರಸ್ತಾವ ಕೂಡ ಕ್ರಾಂತಿಯನ್ನು ಎಬ್ಬಿಸಬಹುದು’ ಎಂದು ಪ್ರತಿಪಾದಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.