ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್ ಜಾನ್ಸನ್
ಬೋರಿಸ್ಗೆ ಬೈ ಎಂದ 11 ಸಚಿವರು
Team Udayavani, Jul 7, 2022, 7:15 AM IST
ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಸಂಪುಟಕ್ಕೆ ಬುಧವಾರ ಹಲವರು ರಾಜೀನಾಮೆ ನೀಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ ಒಟ್ಟು 11 ಮಂದಿ ಹುದ್ದೆ ತ್ಯಜಿಸಿದ್ದಾರೆ. ಮಕ್ಕಳು ಮತ್ತು ಕುಟುಂಬ ಖಾತೆ ಸಚಿವ ವಿಲ್ ಕ್ವಿನ್ಸ್, ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಲಾರಾ ಟ್ರಾಟ್, ಶಿಕ್ಷಣ ಸಚಿವ ರಾಬಿನ್ ವಾಕರ್ ಸಂಪುಟದಿಂದ ಹೊರಬಂದವರಲ್ಲಿ ಪ್ರಮುಖರು.
ಮಂಗಳವಾರ ವಿತ್ತ ಸಚಿವ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿಯವರ ಅಳಿಯ ರಿಷಿ ಸುನಕ್, ಪಾಕಿಸ್ತಾನ ಮೂಲದ ಆರೋಗ್ಯ ಸಚಿವ ಸಾಜಿದ್ ನವೀದ್ ಸೇರಿದಂತೆ ಎಂಟು ಮಂದಿ ಸಚಿವರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪ್ರಧಾನಿ ಬೋರಿಸ್ ಜಾನ್ಸನ್ ನೇತೃತ್ವದ ಸರ್ಕಾರದ ಭವಿಷ್ಯ ಹೊಯ್ದಾಡುವಂತಾಗಿದೆ. ಸುನಕ್ ರಾಜೀನಾಮೆಯಿಂದ ತೆರವಾಗಿರುವ ವಿತ್ತ ಸಚಿವ ಸ್ಥಾನಕ್ಕೆ ಇರಾನ್ ಮೂಲದ ನದೀಂ ಜಹಾವಿ ಅವರನ್ನು ನೇಮಿಸಲಾಗಿದೆ.
ರಾಜೀನಾಮೆ ಇಲ್ಲ: ಹಲವು ಸಚಿವರು ಹುದ್ದೆಯಿಂದ ನಿರ್ಗಮಿಸಿದ್ದರೂ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸ್ಪಷ್ಟಪಡಿಸಿದ್ದಾರೆ. ಅಧಿಕೃತ ನಿವಾಸದಲ್ಲಿ ಕೊರೊನಾ ಲಾಕ್ಡೌನ್ನಲ್ಲಿ ಪಾರ್ಟಿ ಮಾಡಿದ್ದರ ವಿರುದ್ಧ ಮೇನಲ್ಲಿ ಜಾನ್ಸನ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ಸೋಲು ಅನುಭವಿಸಿತ್ತು. ಹೀಗಾಗಿ, ಮುಂದಿನ ಒಂದು ವರ್ಷ ಕಾಲ ಅವರ ವಿರುದ್ಧ ಮತ್ತೂಂದು ಬಾರಿ ಗೊತ್ತುವಳಿ ಮಂಡಿಸುವಂತೆ ಇಲ್ಲ.
ಮುಂದಿನ ಪ್ರಧಾನಿ ರಿಷಿ ?
ಒಂದು ವೇಳೆ ಹಾಲಿ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದರೆ ರಿಷಿ ಸುನಕ್ರನ್ನು ಆ ಹುದ್ದೆಗೆ ನೇಮಕ ಮಾಡುವ ಸಾಧ್ಯತೆಗಳು ಇವೆ. ಇದೇ ವೇಳೆ, ಸುನಕ್ ತಮ್ಮ ರಾಜೀನಾಮೆ ಪತ್ರದಲ್ಲಿ ಬೋರಿಸ್ ಜಾನ್ಸನ್ ನಾಯಕತ್ವದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೇಶ ಹಲವು ಸವಾಲುಗಳನ್ನು ಎದುರಿಸುತ್ತಿದೆ. ನಾಗರಿಕರಿಗೆ ಕಡಿಮೆ ಪ್ರಮಾಣದಲ್ಲಿ ತೆರಿಗೆ ವಿಧಿಸುವುದು ಮತ್ತು ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಸಾಧಿಸಲು ಬಯಸುತ್ತೇನೆ. ಈ ಉದ್ದೇಶ ಈಡೇರಲು ಒಂದು ಸದೃಢ ಮತ್ತು ಸಮರ್ಥ ಸರ್ಕಾರದ ಅಗತ್ಯ ಇದೆ. ಈ ಸತ್ಯವನ್ನು ಕೇಳಲು ದೇಶದ ಜನರು ಕಾತರರಾಗಿದ್ದಾರೆ’ ಎಂದು ರಾಜೀನಾಮೆ ಪತ್ರದಲ್ಲಿ ಸುನಕ್ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ