ವಿಶ್ವಸಂಸ್ಥೆಯ ಉಗ್ರ ನಿಷೇಧದ ರಾಜಕೀಕರಣಕ್ಕೆ ಸೌದಿ, ಪಾಕ್ ವಿರೋಧ
Team Udayavani, Feb 19, 2019, 5:49 AM IST
ಇಸ್ಲಾಮಾಬಾದ್ : ನಿಕಟ ಮಿತ್ರರಾಗಿರುವ ಸೌದಿ ಅರೇಬಿಯ ಮತ್ತು ಪಾಕಿಸ್ಥಾನ ವಿಶ್ವಸಂಸ್ಥೆಯ ಉಗ್ರ ನಿಷೇಧ ಪಟ್ಟಿಯ ರಾಜಕೀಕರರಣವನ್ನು ವಿರೋಧಿಸಿದ್ದು ಇದು ಭಾರತಕ್ಕೆ ಅಪಥ್ಯವೆನಿಸಿದೆ.
ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ವಿಶ್ವ ಸಂಸ್ಥೆಯು ಜಾಗತಿಕ ಉಗ್ರನೆಂದು ಘೋಷಿಸಬೇಕೆಂದು ಪಟ್ಟು ಹಿಡಿಯುತ್ತಿರುವ ಭಾರತದ ಯತ್ನವನ್ನು ಸೌದಿ ಅರೇಬಿಯ ಮತ್ತು ಪಾಕಿಸ್ಥಾನ ಈ ಮೂಲಕ ಪರೋಕ್ಷವಾಗಿ ವಿರೋಧಿಸಿವೆ.
ಸೌದಿ ಅರೇಬಿಯ ಮತ್ತು ಪಾಕಿಸ್ಥಾನ ಹೊರಡಿಸಿರುವ ಜಂಟಿ ಹೇಳಿಕೆಯಲ್ಲಿ ಭಾರತ ತನ್ನೆಲ್ಲ ಸಂಘರ್ಷದ ವಿಷಯಗಳನ್ನು ಬಗೆಹರಿಸಿಕೊಳ್ಳಲು ಮಾತುಕತೆಗೆ ಮುಂದಾಗಬೇಕು ಎಂದು ಕರೆ ನೀಡಿವೆ.
ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ಥಾನದೊಂದಿಗಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಭಾರತ ಭೇಟಿಗೆ ಬರುತ್ತಿರುವ ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಅವರು “ಭಾರತ-ಪಾಕ್ ಸಂಬಂಧ ಸುಧಾರಣೆಗೆ ಮಾತುಕತೆಯೊಂದೇ ಪರಿಹಾರ’ ಎಂದು ಹೇಳಿದರು.
ಪಾಕ್ ಜತೆಗೆ ಇತ್ಯರ್ಥಕ್ಕೆ ಬಾಕಿ ಇರುವ ಯಾವುದೇ ವಿಷಯವನ್ನು ಭಾರತ ಮಾತುಕತೆ ಮೂಲಕವೇ ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಿದರು.
ಸೌದಿ ಕ್ರೌನ್ ಪ್ರಿನ್ಸ್ ಸಲ್ಮಾನ್ ಅವರು ಇಂದು ಫೆ.19 ಮತ್ತು ನಾಳೆ 20ರಂದು ಭಾರತ ಭೇಟಿ ಕೈಗೊಳ್ಳುತ್ತಿದ್ದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ. ಪಾಕ್ ಪ್ರೇರಿತ ಭಯೋತ್ಪಾದನೆಯ ವಿಷಯವೇ ಸೌದಿ ಪ್ರಿನ್ಸ್ ಜತೆಗಿನ ಮಾತುಕತೆಯಲ್ಲಿ ಮುಖ್ಯವಾಗುವ ಸಕಲ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ