ಪಾಕ್‌ಗೆ ಮತ್ತೆ ಜಾಗತಿಕ ಮುಖಭಂಗ

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸಲು ವಿಶ್ವಸಂಸ್ಥೆ ನಕಾರ

Team Udayavani, Sep 12, 2019, 5:02 AM IST

e-38

ವಿಶ್ವಸಂಸ್ಥೆ: ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಲು ವಿಶ್ವಸಂಸ್ಥೆ ಸ್ಪಷ್ಟವಾಗಿ ನಿರಾಕರಿಸಿದ್ದು, ಸಮಸ್ಯೆಯನ್ನು ಭಾರತ ಮತ್ತು ಪಾಕಿಸ್ತಾನವೇ ಖುದ್ದು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದು ಖಡಾಖಂಡಿತವಾಗಿ ಹೇಳಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟಾನಿಯೋ ಗುಟೆರೆಸ್‌ ಅವರ ವಕ್ತಾರ ಸ್ಟೀಫ‌ನ್‌ ಡ್ಯುರಾಜಿಕ್‌, ”ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಯಾವುದೇ ಇರಾದೆ ಗುಟೆರೆಸ್‌ ಅವರಿಗಿಲ್ಲ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವೆ ಆಗಾಗ ಭುಗಿಲೇಳುವ ಗಡಿ ಸಂಬಂಧಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಅವರು ಆತಂಕಗೊಂಡಿದ್ದಾರೆ. ಆದಾಗ್ಯೂ, ಆ ಸಮಸ್ಯೆಯನ್ನು ಉಭಯ ರಾಷ್ಟ್ರಗಳೇ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕೆಂದೂ ಅಪೇಕ್ಷಿಸಿದ್ದಾರೆ” ಎಂದು ಹೇಳಿದ್ದಾರೆ.

ಪಾಕ್‌ಗೆ ದೊಡ್ಡ ಮುಖಭಂಗ: ಡ್ಯುರಾಜಿಕ್‌ ಅವರ ಈ ಹೇಳಿಕೆ, ಕಾಶ್ಮೀರ ವಿಚಾರದಲ್ಲಿ ವಿಶ್ವಸಂಸ್ಥೆ ಮಧ್ಯಪ್ರವೇಶಿಸುವಂತೆ ಮಾಡಲು ಹರಸಾಹಸ ಪಡುತ್ತಿದ್ದ ಪಾಕಿಸ್ತಾನಕ್ಕೆ ಭಾರೀ ಹಿನ್ನಡೆ ಉಂಟು ಮಾಡಿದೆ. ಸಮಸ್ಯೆ ಇತ್ಯರ್ಥಕ್ಕೆ ಮಧ್ಯಪ್ರವೇಶಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಸೇರಿದಂತೆ ಅನೇಕ ವಿಶ್ವನಾಯಕರ ಸಹಾಯ ಕೋರುತ್ತಿದ್ದ ಪಾಕಿಸ್ತಾನ, ತನ್ನ ಎಲ್ಲಾ ಯತ್ನದಲ್ಲೂ ವಿಫ‌ಲವಾಗಿದೆ. ಜಿನಿವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ 42ನೇ ಮಹಾ ಸಮ್ಮೇಳನದಲ್ಲಿ ಇಂಥದ್ದೇ ಪ್ರಯತ್ನಕ್ಕೆ ಕೈ ಹಾಕಿದ್ದ ಪಾಕ್‌, 47 ರಾಷ್ಟ್ರಗಳ ಪ್ರತಿನಿಧಿಗಳ ಮುಂದೆ ಭಾರತವನ್ನು ಖಳನಾಯಕನನ್ನಾಗಿ ಚಿತ್ರಿಸಿ, ಜಾಗತಿಕ ಸಮುದಾಯವನ್ನು ಕಾಶ್ಮೀರದತ್ತ ಸೆಳೆಯುವ ಯತ್ನ ಮಾಡಿತ್ತು. ಕಾಶ್ಮೀರ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿತ್ತು. ಆದರೆ, ಬುಧವಾರ ಹೊರಬಿದ್ದಿರುವ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿಯವರ ಮನದಿಂಗಿತ ಪಾಕಿಸ್ತಾನದ ಪ್ರಯತಕ್ಕೆ ತಣ್ಣೀರೆರೆಚಿದೆ. ಈ ನಡುವೆ, ಪಿಒಕೆಯಲ್ಲಿ ಇಮ್ರಾನ್‌ ಖಾನ್‌ ಬುಧ ವಾರ ಬೃಹತ್‌ ರ್ಯಾಲಿ ನಡೆಸಿದ್ದು, ಕಾಶ್ಮೀರ ಜನತೆಗೆ ನೈತಿಕ ಬೆಂಬಲ ನೀಡಬೇಕೆಂದು ಕರೆ ನೀಡಿದ್ದಾರೆ.

ನೂರ್‌ಗೆ ಜಾಗತಿಕ ಉಗ್ರನ ಪಟ್ಟ: ಪಾಕಿಸ್ತಾನದ ತೆಹ್ರೀಕ್‌-ಎ-ತಾಲಿಬಾನ್‌ ಪಾಕಿಸ್ತಾನ್‌ (ಟಿಟಿಪಿ) ಸಂಘಟನೆಯ ಮುಖ್ಯಸ್ಥ ನೂರ್‌ ವಾಲಿಯನ್ನು ‘ಜಾಗತಿಕ ಮಟ್ಟದ ವಿಶೇಷ ಉಗ್ರ’ನೆಂದು ಅಮೆರಿಕ ಘೋಷಿಸಿದೆ. ನ್ಯೂಯಾರ್ಕ್‌ನ ವಿಶ್ವ ವಾಣಿಜ್ಯ ಕೇಂದ್ರ ಕಟ್ಟಡಗಳ ಮೇಲಿನ ದಾಳಿಗೆ 18 ವರ್ಷ ತುಂಬಿದ ಸಂದರ್ಭದಲ್ಲೇ ಅಮೆರಿಕ ಈ ಹೊಸ ನಿರ್ಧಾರ ಪ್ರಕಟಿಸಿದೆ.

ಸುಪ್ರೀಂ ಮೆಟ್ಟಿಲೇರಿದ ವೈಕೋ: ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾರನ್ನು ಹಾಜರು ಪಡಿಸುವಂತೆ ಕೇಂದ್ರ ಹಾಗೂ ಜಮ್ಮು- ಕಾಶ್ಮೀರ ಸರ್ಕಾರಕ್ಕೆ ಸೂಚಿಸುವಂತೆ ಕೋರಿ ರಾಜ್ಯಸಭೆ ಸದಸ್ಯ, ಎಂಡಿಎಂಕೆ ಸ್ಥಾಪಕ ವೈಕೋ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಗೃಹಬಂಧನದಲ್ಲಿ ಇರಿಸುವ ಮೂಲಕ ಸಾಂವಿಧಾನಿಕ ಹಕ್ಕುಗಳಿಂದ ಅವರನ್ನು ವಂಚಿಸಲಾಗುತ್ತಿದೆ ಎಂದು ವೈಕೋ ಆರೋಪಿಸಿದ್ದಾರೆ.

ಉಗ್ರರ ರವಾನೆಗೆ ಸಜ್ಜಾದ ಪಾಕ್‌
ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ತಾನು ಹೊಂದಿರುವ ಉಗ್ರರ ಶಿಬಿರಗಳನ್ನು ಪುನರಾರಂಭಿಸಿರುವ ಪಾಕಿಸ್ತಾನ, ಉಗ್ರರ ಒಳನುಸುಳುವಿಕೆಯ ಏಳು ಗುಪ್ತ ಮಾರ್ಗಗಳನ್ನು ಮತ್ತೆ ಸನ್ನದ್ಧಗೊಳಿಸಿದೆ. ಈ ಮೂಲಕ, ಸದ್ಯದಲ್ಲೇ ಭಾರತದೊಳಕ್ಕೆ 275 ಉಗ್ರರನ್ನು ಕಳುಹಿಸಲು ಯೋಜನೆ ರೂಪಿಸಲಾಗಿದೆ ಎಂದು ಭಾರತೀಯ ಗುಪ್ತಚರ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಈ ಉಗ್ರರಲ್ಲಿ ಆಫ‌್ಗನ್‌ ಮೂಲದ ಜಿಹಾದಿಗಳು ಹಾಗೂ ಪಶ್ತುನ್‌ ಪ್ರಾಂತ್ಯದಲ್ಲಿರುವ ಬಾಡಿಗೆ ಸೈನಿಕರಿದ್ದಾರೆ ಎಂದು ಹೇಳಲಾಗಿದೆ. ಅಂದಹಾಗೆ, ಬಾಡಿಗೆ ಸೈನಿಕರನ್ನು ಒಗ್ಗೂಡಿಸಿ ಅವರನ್ನು ಭಾರತದ ಕಡೆಗೆ ಛೂ ಬಿಡುವುದು ಹೊಸ ವಿಚಾರವೇನಲ್ಲ ಎಂದು ಮೂಲಗಳು ತಿಳಿಸಿವೆ.

ಲಷ್ಕರ್‌ ಉಗ್ರನ ಹತ್ಯೆ
ಇತ್ತೀಚೆಗೆ, ಜಮ್ಮು ಕಾಶ್ಮೀರದ ಸಪೋರೆ ಜಿಲ್ಲೆಯ ಹಣ್ಣು ವ್ಯಾಪಾರಿಯೊಬ್ಬರ ಮನೆಯಲ್ಲಿದ್ದ ಐದು ವರ್ಷದ ಹೆಣ್ಣು ಮಗುವಿನ ಮೇಲೆ ಗುಂಡು ಹಾರಿಸಿ ಆಕೆಯನ್ನು ಗಾಯಗೊಳಿಸಿದ್ದ ಲಷ್ಕರ್‌-ಎ-ತೊಯ್ಬಾ ಉಗ್ರ ಆಸಿಫ್ ಮಕ್ಬೂಲ್ ಬಟ್‌ನನ್ನು ಭದ್ರತಾ ಪಡೆಗಳು ಬುಧವಾರ, ಗುಂಡಿಕ್ಕಿ ಹತ್ಯೆಗೈದಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.