ವಿಶ್ವ ದಾಖಲೆ ಬರೆದ ಮುಗಿಲೆತ್ತರದ ಅರಬ್‌ ರಾಷ್ಟ್ರ ಧ್ವಜ

48ನೇ ರಾಷ್ಟ್ರೀಯ ದಿನದ ಸಂಭ್ರಮದಲ್ಲಿ ಸಂಯುಕ್ತ ಅರಬ್‌ ಸಂಸ್ಥಾನ

Team Udayavani, Dec 1, 2019, 9:04 PM IST

Gulf-New-730

ದುಬೈ: ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ರಾಷ್ಟ್ರೀಯ ದಿನದ ಸಂಭ್ರಮ ಮೇಳೈಸಿದೆ. 1971ರ ವರ್ಷದ ಡಿಸೆಂಬರ್‌ 2ರಂದು ಆಗಿನ ಸ್ಥಾಪಕಧ್ಯಕ್ಷ ಶೇಕ್‌ ಝಾಯಿದ್‌ ಬಿನ್‌ ಸುಲ್ತಾನ್‌ ಅಲ್‌ ನಹಿಯಾನ್‌ ಮುಂದಾಳುತ್ವದಲ್ಲಿ ಸಂಯುಕ್ತ ಅರಬ್‌ ಸಂಸ್ಥಾನ ರೂಪುಗೊಂಡಿತ್ತು. ಇದು ಏಳು ರಾಜ್ಯಗಳನ್ನೊಳಗೊಂಡ ಒಕ್ಕೂಟವಾಗಿದೆ.

ಆಗ ಈ ಯುಎಇಯನ್ನು ಅಬುಧಾಬಿ, ಅಜ್ಮಾನ್‌, ಫುಜೆರ,ದುಬೈ, ಶಾರ್ಜಾ, ರಾಸ್‌ ಅಲ್‌ ಖೈಮಾ, ಉಮ್ಮಲ್‌ ಖೈಮ್‌ ಎಂಬ ಏಳು ಸಂಸ್ಥಾನಗಳಾಗಿ ವಿಂಗಡಣೆಯಾಯಿತು. ಆ ದಿನವನ್ನು ಸಂಯುಕ್ತ ಅರಬ್‌ ಸಂಸ್ಥಾನದ ರಾಷ್ಟ್ರೀಯ ದಿನವನ್ನಾಗಿ ಆಚರಿಸಲಾಗುತ್ತದೆ.

ವರ್ಷ ಡಿಸೆಂಬರ್‌ 1-3ರ ವರೆಗೆ ಸಂಯುಕ್ತ ಅರಬ್‌ ಸಂಸ್ಥಾನದ ರಾಷ್ಟ್ರೀಯ ದಿನ ಎಂದು ಆಚರಿಸಲಾಗುತ್ತದೆ. ಅಂದು ದೇಶವ್ಯಾಪ್ತಿ ಸರಕಾರಿ ಕಛೇರಿ, ಕಟ್ಟಡ ಹಾಗೂ ರಸ್ತೆಗಳ ಎರಡೂ ಬದಿಗಳಲ್ಲಿ ಬಣ್ಣ ಬಣ್ಣದ ವಿದ್ಯುತ್‌ ದೀಪಾಲಂಕಾರ ಮಾಡಲಾಗುತ್ತದೆ.

ಮಾತ್ರವಲ್ಲದೇ ಈ ಮೂರು ದಿನವನ್ನು ಸರಕಾರಿ ರಜಾ ದಿನವಾಗಿ ಪಾಲನೆ ಮಾಡಲಾಗುತ್ತದೆ. ಚತುರ್ವರ್ಣ ಪತಾಕೆ ಕೊಲ್ಲಿ ರಾಷ್ಟ್ರದ ಬೀದಿ ಬೀದಿಗಳಲ್ಲಿ ರಾರಾಜಿಸುತ್ತವೆ. ಯುಎಇ ಜನತೆ ಸಂಭ್ರಮದಲ್ಲಿ ಈ ದಿನವನ್ನು ಕಳೆಯುತ್ತಾರೆ. ಯುಎಇಯಾ ನಾನಾ ಭಾಗಗಳಲ್ಲಿ ಇಲ್ಲಿನ ಕಲೆ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತದೆ.

ದಾಖಲೆ ನಿರ್ಮಿಸಿದ ರಾಷ್ಟ್ರಧ್ವಜ

ರಾಷ್ಟ್ರೀಯ ದಿನದ ಹಿನ್ನೆಲೆಯಲ್ಲಿ ಅರಬ್‌ನಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಗಳು ರಂಗೇರುತ್ತಿದೆ. ಅಬುಧಾಬಿ ಯುಎಇ ರಾಷ್ಟ್ರದ ರಾಜ್ಯಧಾನಿಯಾಗಿದ್ದು ಎತ್ತ ನೋಡಿದರೂ ಸಂಭ್ರಮಗಳೇ ಕಾಣುತ್ತಿವೆ. ರಜಾದಿನವಾದ ಕಾರಣ ಕೋಟ್ಯಾಂತರ ಮಂದಿ ತಮ್ಮನ್ನು ಸಂಭ್ರಮದ ಕಡಲಿನಲ್ಲಿ ಒಂದಾಗಿಸಕೊಂಡಿದ್ದಾರೆ.

ಮೊದಲ ದಿನ ಸ್ಕೈಡೈವರ್ಸ್‌ ಮುಗಿಲೆತ್ತರದಿಂದ ಅರಬ್‌ನ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸಾವಿರಾರು ಅಡಿ ಎತ್ತರವಿರುವ ಈ ಧ್ವಜವನ್ನು ಹಿಡಿದು ಬಾನಿನಿಂದ ಜಿಗಿದಿದ್ದಾರೆ. ಇದು ವಿಶ್ವದ ಅತೀ ದೊಡ್ಡ ಮತ್ತು ಮುಗಿಲೆತ್ತರದಿಂದ ಹಾರಾಡಿದ ಮೊದಲ ರಾಷ್ಟ್ರಧ್ವಜವಾಗಿದೆ.

ನಾಲ್ಕು ಬಣ್ಣಗಳಿಂದ ಕೂಡಿದ ಅಲ್ಲಿನ ರಾಷ್ಟ್ರಧ್ವಜ ಸಿದ್ಧಪಡಿಸಲಾಗಿದೆ. ಹಸಿರು, ಬಿಳಿ, ಕಪ್ಪು, ಕೆಂಪು ಬಣ್ಣದಿಂದ ತಯಾರಿಸಲಾಗಿದೆ. ಹಸಿರು-ಫ‌ಲವತ್ತತೆ, ಬಿಳಿ-ತಟಸ್ಥ ನೀತಿ (ಧೋರಣೆ), ಕಪ್ಪು-ತೈಲ ಸಂಪತ್ತು, ಕೆಂಪು-ರಕ್ತ ಮತ್ತು ಖಡ್ಗ ಎಂಬ ಸಂಕೇತದಿಂದ ಅದನ್ನು ವರ್ಣಿಸಲಾಗುತ್ತದೆ.


ಸಂಭ್ರಮದಲ್ಲಿ ಭಾರತೀಯರು

ಅರಬ್‌ ರಾಷ್ಟ್ರಗಳಿಗೆ ಉದ್ಯೋಗ ನಿಮಿತ್ತ ನಾನಾ ದೇಶಗಳ ಜನರು ತೆರಳುತ್ತಾರೆ. ಅಲ್ಲಿ ಭಾರತೀಯರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದು, ಬಹುತೇಕರು ಕೇರಳದವರಾಗಿದ್ದಾರೆ.

ಹೇಗಿದೆ ಸಂಭ್ರಮ
ಇಡೀ ಅರಬ್‌ ಸಂಯುಕ್ತ ರಾಷ್ಟ್ರವನ್ನೇ ವಿದ್ಯುತ್‌ ದೀಪ ಅಲಂಕಾರದಿಂದ ಸಿದ್ದಪಡಿಸಲಾಗಿದೆ. ಬಣ್ಣ ಬಣ್ಣದ ದೀಪಗಳು, ನಗರದ ಪ್ರತಿ ಕಟ್ಟವನ್ನು ಆವರಿಸಿದೆ. ಜತೆಗೆ ದೀಪಾವಳಿಯಂತೆ ಅಲ್ಲಿಯೂ ಮುಗಿಲೆತ್ತರದಲ್ಲಿ ಬಣ್ಣದ ಬೆಳಕಿನ ಚಿತ್ತಾರ ಮನಸೂರೆಗೊಂಡಿದೆ.

ರಜಾದಿನವಾದ ಕಾರಣ ಶಾಲೆ, ಕಾಲೇಜಿನ ಮಕ್ಕಳು, ಉದ್ಯೋಗಸ್ಥರು ಸೇರಿದಂತೆ ಎಲ್ಲರೂ ರಾಷ್ಟ್ರೀಯ ಭಾವೈಕ್ಯತೆಯನ್ನು ಸಾರುವ ಉಡುಗೆ ಮತ್ತು ಕೈಯಲ್ಲಿ 4 ಬಣ್ಣದ ಧ್ವಜ ಹಿಡಿದುಕೊಂಡು ರಸ್ತೆಯ ಇಕ್ಕೆಳಗಳಲ್ಲಿ ಓಡಾಡುತ್ತಿದ್ದಾರೆ.

ನಗರದಾದ್ಯಂತ ವಿವಿಧೆಡೆ ಸಾಂಸ್ಕೃತಿಕ ಪ್ರದರ್ಶನಗಳು ನಡೆಯುತ್ತಿದ್ದು, ರಾಷ್ಟ್ರೀಯತೆಯ ಪ್ರದರ್ಶನಗೊಳ್ಳಲಿದೆ. ಕಳೆದ ವರ್ಷದಂತೆ ಈ ವರ್ಷವೂ ದೇಶಾದ್ಯಂತ ಅತೀ ದೊಡ್ಡ ಕೇಕ್‌ ಸಿದ್ಧಪಡಿಸಲಾಗಿದ್ದು, ಕ್ರೀಮ್‌ಗಳ ಸಹಾಯದಿಂದ 4 ಬಣ್ಣಗಳುಳ್ಳ ರಾಷ್ಟ್ರದ ಧ್ವಜವನ್ನು ಬಿಡಿಸಿ ಹುಟ್ಟು ಹಬ್ಬದ ಮಾದರಿಯಲ್ಲಿ ಕೇಕ್‌ ಕತ್ತರಿಸಿ ಜನರು ಸಂಭ್ರಮಿಸುತ್ತಿದ್ದಾರೆ. ಸ್ವದೇಶಿಯರ ಸಂಭ್ರಮಕ್ಕೆ ವಿದೇಶಿಗರು ನೀರೆರೆಯುತ್ತಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.