H-1B ವೀಸಾ ನೀತಿ ಇನ್ನಷ್ಟು ಕಠಿಣ : ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ


Team Udayavani, Oct 30, 2019, 2:54 PM IST

H-1B-Visa-730

ವಾಷಿಂಗ್ಟನ್: 2019-20ರ ತ್ರೈಮಾಸಿಕ ಅವಧಿಯಲ್ಲಿ ಅಮೆರಿಕಾ ಆಡಳಿತವು ಅತೀ ಹೆಚ್ಚಿನ ಸಂಖ್ಯೆಯ H-1B ವಿಸಾ ಅರ್ಜಿಗಳನ್ನು ತಿರಸ್ಕರಿಸಿರುವುದು ಭಾರತೀಯ ಸಾಫ್ಟ್ವೇರ್ ಎಂಜಿನಿಯರ್ ಗಳಿಗೆ ಹೊಡೆತ ನೀಡಿದೆ.

ಈ ವಿಚಾರವನ್ನು ಅಧ್ಯಯನ ವರದಿಯೊಂದು ಬಹಿರಂಗಗೊಳಿಸಿದ್ದು ಅದರ ಪ್ರಕಾರ ಅಮೆರಿಕಾ ಪೌರತ್ವ ಮತ್ತು ವಲಸೆ ಸೇವಾ ಇಲಾಖೆಯು ಅತೀ ಹೆಚ್ಚಿನ ಸಂಖ್ಯೆಯಲ್ಲಿ H-1B ಕೋರಿಕೆ ಅರ್ಜಿಗಳನ್ನು ತಿರಸ್ಕರಿಸಿರುವುದು ಬಹಿರಂಗಗೊಂಡಿದೆ.

ಅಮೆರಿಕಾ ನೀತಿಯ ರಾಷ್ಟ್ರೀಯ ವೇದಿಕೆಯು ಸಿದ್ಧಪಡಿಸಿರುವ ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ H-1B ವೀಸಾ ದೂರುಗಳ ವಿಲೇವಾರಿ ನಿರಾಕರಣೆಯ ಪ್ರಮಾಣವು 2015ರಲ್ಲಿ ಕೇವಲ 06 ಪ್ರತಿಶತವಿದ್ದರೆ 2019ರಲ್ಲಿ ಈ ಪ್ರಮಾಣ 24 ಪ್ರತಿಶತಕ್ಕೆ ಏರಿಕೆಯಾಗಿದೆ. ಆರ್ಥಿಕ ವರ್ಷ 10 ರಿಂದ ಆರ್ಥಿಕ ವರ್ಷ 15ಕ್ಕೆ H-1B ವೀಸಾ ಅರ್ಜಿಗಳ ನಿರಾಕರಣೆ ಪ್ರಮಾಣವು ಮೂರು ಪಟ್ಟು ಹೆಚ್ಚಾಗಿರುವುದು ಈ ವರದಿಯಲ್ಲಿ ಬಹಿರಂಗವಾಗಿದೆ.

ಈ ಅರ್ಜಿಗಳಲ್ಲಿ ಬಹುತೇಕ ಅರ್ಜಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುವ ವಿದೇಶಿಯರ ಅರ್ಜಿಗಳೇ ಹೆಚ್ಚಾಗಿದೆ. ಒಟ್ಟು 27 ಕಂಪೆನಿಗಳನ್ನು ಒಳಗೊಂಡಂತೆ ಈ ವಿಶ್ಲೇಷಣೆಯನ್ನು ತಯಾರಿಸಲಾಗಿದ್ದು ಇವುಗಳಲ್ಲಿ 12 ಕಂಪೆನಿಗಳು ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ್ದೇ ಆಗಿವೆ.

ಈ ಎಲ್ಲಾ 12 ಐಟಿ ಕಂಪೆನಿಗಳಲ್ಲೂ ಸಹ ಮೊದಲ ಮೂರು ತ್ರೈಮಾಸಿಕ ಅವಧಿಯಲ್ಲಿ ವಿಸಾ ಮನವಿ ನಿರಾಕರಣೆಯ ಪ್ರಮಾಣ 30 ಪ್ರತಿಶತ ಇರುವುದು ಈ ವರದಿಯಲ್ಲಿ ಬಹಿರಂಗವಾಗಿದೆ. 2015-16ರ ಅವಧಿಯಲ್ಲಿ ಇದೇ ಕಂಪೆನಿಗಳ ಮೂಲಕ ಸಲ್ಲಿಸಲಾದ ವೀಸಾ ಅರ್ಜಿಗಳ ನಿರಾಕರಣೆಯ ಪ್ರಮಾಣ 07 ಪ್ರತಿಶತವನ್ನೂ ದಾಟಿರಲಿಲ್ಲ ಎನ್ನುವುದು ಇನ್ನೊಂದು ಗಮನಾರ್ಹ ಅಂಶವಾಗಿದೆ.

ಅಮೆರಿಕಾ ಪೌರತ್ವ ಮತ್ತು ವಲಸೆ ಸೇವಾ ಇಲಾಖೆಯು ವಿಸಾ ಮನವಿ ಅರ್ಜಿಗಳ ವಿಲೇವಾರಿಗಾಗಿ ಅನುಸರಿಸುತ್ತಿರುವ ಕಾನೂನಾತ್ಮಕ ಮಾನದಂಡಗಳನ್ನು ಹೆಚ್ಚಿಸಿರುವುದೇ ಇಷ್ಟು ಪ್ರಮಾಣದ H-1B ವೀಸಾ ಅರ್ಜಿಗಳ ನಿರಾಕರಣೆಗೆ ಕಾರಣ ಎನ್ನುವ ವಿಚಾರವು ಈ ವರದಿಯಲ್ಲಿದೆ.

ಒಟ್ಟಾರೆ H-1B ವೀಸಾದಲ್ಲಿ 70 ಪ್ರತಿಶತ ಭಾರತೀಯ ಟೆಕ್ಕಿಗಳದ್ದೇ ಆಗಿರುವುದರಿಂದ ಈ ಬೆಳವಣಿಗೆ ನೇರವಾಗಿ ಭಾರತೀಯ ಟೆಕ್ಕಿಗಳ ಮೆಲೆಯೇ ಪರಿಣಾಮವನ್ನು ಬೀರಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಇನ್ನು ಅಮೆರಿಕಾದಲ್ಲಿ ತಮ್ಮ ಕಛೇರಿಯನ್ನು ಹೊಂದಿರುವ ಕಾಗ್ನಿಜೆಂಟ್, ಆಕ್ಸೆಂಚರ್, ವಿಪ್ರೋ ಮತ್ತು ಇನ್ಫೋಸಿಸ್ ಸಹಿತ ಪ್ರಮುಖ ಸಾಫ್ಟ್ವೇರ್ ಕಂಪೆನಿಗಳಿಂದ ಸಲ್ಲಿಕೆಯಾಗಿದ್ದ H-1B ವೀಸಾ ಅರ್ಜಿಗಳು ತಿರಸ್ಕೃತಗೊಂಡಿವೆ.

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.