ಭಾರತ ಬಾಂಧವ್ಯ ಸುಧಾರಿಸಲು ಅಮೆರಿಕ ಉ.ಪ್ರ. ಕಡೆಗಣಿಸುವಂತಿಲ್ಲ: ನಿಯೋಗ
Team Udayavani, May 4, 2018, 11:24 AM IST
ವಾಷಿಂಗ್ಟನ್ : ಅಮೆರಿಕಕ್ಕೆ ಭಾರತದೊಂದಿಗಿನ ಬಾಂಧವ್ಯವನ್ನು ಸುಧಾರಿಸಬೇಕು ಎಂದಿದ್ದರೆ ಅದು ಉತ್ತರ ಪ್ರದೇಶವನ್ನು ಕಡೆಗಣಿಸುವಂತಿಲ್ಲ ಎಂದು ಉತ್ತರ ಪ್ರದೇಶದ ಆರೋಗ್ಯ ಸಚಿವ ಸಿದ್ಧಾರ್ಥ ನಾಥ್ ಸಿಂಗ್ ನೇತೃತ್ವದಲ್ಲಿ ಇಲ್ಲಿಗೆ ಭೇಟಿ ನೀಡಿರುವ ಬಿಜೆಪಿ ನಿಯೋಗವು ಹೇಳಿದೆ.
ಸಚಿವ ಸಿದ್ಧಾರ್ಥ ನಾಥ್ ಸಿಂಗ್ ವರು ಉನ್ನತಾಧಿಕಾರದ ಬಿಜೆಪಿ ನಿಯೋಗವನ್ನು ಅಮೆರಿಕಕ್ಕೆ ತಂದಿದ್ದಾರೆ ಮತು ಅಮೆರಿಕದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದಾರೆ.
ಉತ್ತರ ಪ್ರದೇಶದ ಭಾರತ ಅತ್ಯಂತ ಗರಿಷ್ಠ ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ. ಭಾರತದೊಂಗಿನ ಬಾಂಧವ್ಯವನ್ನು ಸುಧಾರಿಸಬೇಕು ಎಂದಿದ್ದರೆ ಅಮೆರಿಕ ಉತ್ತರ ಪ್ರದೇಶದಂತಹ ರಾಜ್ಯಗಳನ್ನು ಕಡೆಗಣಿಸುವಂತಿಲ್ಲ ಎಂದು ಸಿದ್ಧಾರ್ಥ ನಾಥ್ ಸಿಂಗ್ ಹೇಳಿದರು.
ಭಾರತದ ಆರೋಗ್ಯ ಸೂಚ್ಯಂಕ ಸುಧಾರಿಸಬೇಕು ಎಂದು ನೀವು ಬಯಸುವಿರಾದರೆ ಉತ್ತರ ಪ್ರದೇಶದಲ್ಲಿ ಸ್ವಾಸ್ಥ್ಯ ಮಟ್ಟವನ್ನು ಸುಧಾರಿಸುವುದು ಅತೀ ಅಗತ್ಯ. ಅದು ಸುಧಾರಿಸದಿದ್ದರೆ ಭಾರತದ ಆರೋಗ್ಯ ಸೂಚ್ಯಂಕ ಸುಧಾರಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಿದ್ಧಾರ್ಥ ನಾಥ್ ಸಿಂಗ್ ಹೇಳಿದರು.
ಸಿದ್ಧಾರ್ಥ್ ನಾಥ್ ಸಿಂಗ್ ಅವರ ನಿಯೋಗ ಕ್ಯಾಲಿಫೋರ್ನಿಯದಲ್ಲಿನ ಸಿಲಿಕಾನ್ ವ್ಯಾಲಿಗೆ ಭೇಟಿ ನೀಡುವ ತನ್ನ ಅಮೆರಿಕ ಭೇಟಿಯನ್ನು ಮುಗಿಸಿದೆ. ನಿನ್ನೆ ಗುರುವಾರ ಅವರ ನಿಯೋಗವು ವಾಷಿಂಗ್ಟನ್ ಡಿಸಿಯಲ್ಲಿತ್ತು ಮತ್ತು ಅಮೆರಿಕ ಸರಕಾರದ ಅನೇಕ ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿತು.
ಅಮೆರಿಕದ ವಾಣಿಜ್ಯ ಇಲಾಖೆ ಮತ್ತು ಯುಎಸ್ಎಐಡಿ ಹಿರಿಯ ಅಧಿಕಾರಿಗಳನ್ನು ಕೂಡ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ