ಭಾರತ ಮತ್ತು ಪಾಕಿಸ್ಥಾನ ನಡುವೆ ಮಧ್ಯಸ್ಥಿಕೆ ವಹಿಸುವೆ: ಟ್ರಂಪ್‌


Team Udayavani, Jan 23, 2020, 2:33 AM IST

Donald-Trump-02-730

ದಾವೋಸ್‌: ಭಾರತ ಮತ್ತು ಪಾಕಿಸ್ಥಾನ ನಡುವೆ ಕಾಶ್ಮೀರ ವಿಚಾರ ಬಗೆಹರಿಸುವ ನಿಟ್ಟಿನಲ್ಲಿ ಮಧ್ಯಸ್ಥಿಕೆ ವಹಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಂಗಳವಾರ ಮತ್ತೂಮ್ಮೆ ಹೇಳಿಕೆ ನೀಡಿದ್ದಾರೆ. ದಾವೋಸ್‌ನಲ್ಲಿ ವಿಶ್ವ ಆರ್ಥಿಕ ಶೃಂಗ ಸಮ್ಮೇಳನದ ಸಂದರ್ಭದಲ್ಲಿ ಪಾಕಿಸ್ಥಾನ ಪ್ರಧಾನಿ ಇಮ್ರಾನ್‌ ಖಾನ್‌ ಜತೆಗೆ ಭೇಟಿಯಾಗಿದ್ದ ವೇಳೆ ಅವರು ಈ ಅಂಶ ಸ್ಪಷ್ಟಪಡಿಸಿದ್ದಾರೆ. ಜತೆಗೆ ಕೇಂದ್ರಾಡಳಿತ ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವುದಾಗಿ ಹೇಳಿದ್ದಾರೆ.

ಕೇಂದ್ರ ಸರಕಾರ ಹಿಂದೆ ಹಲವು ಬಾರಿ ಅಂಥ ನೆರವನ್ನು ಟ್ರಂಪ್‌ ನೀಡಲು ಮುಂದಾಗಿದ್ದರೂ ಅದನ್ನು ಒಪ್ಪಿಕೊಂಡಿರಲಿಲ್ಲ ಮತ್ತು ದ್ವಿಪಕ್ಷೀಯ ವಿಚಾರವಾದ್ದರಿಂದ ಎರಡೂ ರಾಷ್ಟ್ರಗಳೇ ಅವು ಗಳನ್ನು ಬಗೆಹರಿಸಿಕೊಳ್ಳುವುದಾಗಿ ಹೇಳಿತ್ತು. ಪಾಕ್‌ ಪ್ರಧಾನಿ ಜತೆಗೆ ವೈಯಕ್ತಿಕ ಭೇಟಿ ನಡೆಸುವುದಕ್ಕೆ ಮುನ್ನ ಇಬ್ಬರು ನಾಯಕರು ಸುದ್ದಿಗೋಷ್ಠಿ ನಡೆಸಿದರು.

‘ಪಾಕ್‌ ಪ್ರಧಾನಿ ನನ್ನ ಸ್ನೇಹಿತ’ ಎಂದು ಬಣ್ಣಿಸಿದ ಅಧ್ಯಕ್ಷ ಟ್ರಂಪ್‌ ವಾಣಿಜ್ಯ ಮತ್ತು ಗಡಿಯಲ್ಲಿನ ಪರಿಸ್ಥಿತಿ ಪ್ರಧಾನ ಚರ್ಚೆಯ ಅಂಶ ಎಂದು ಹೇಳಿದ್ದಾರೆ.
‘ನಮ್ಮ ಮತ್ತು ಭಾರತದ ನಡುವಿನ ಬಾಂಧವ್ಯ ಪಾಕಿಸ್ಥಾನಕ್ಕೆ ಪ್ರಮುಖ ವಿಚಾರವಾಗಿದೆ. ಅಮೆರಿಕ ಈ ಬಗ್ಗೆ ನೆರವು ನೀಡಲಿದೆ’ ಎಂದು ಇಮ್ರಾನ್‌ ಖಾನ್‌ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೂರನೆಯವರು ಬೇಡ: ಕೇಂದ್ರ
ಕಾಶ್ಮೀರ ವಿವಾದವನ್ನು ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಹ್ವಾನವನ್ನು, ಕೇಂದ್ರ ಸರಕಾರ ಸ್ಪಷ್ಟವಾಗಿ ತಿರಸ್ಕರಿಸಿದೆ. ಕಾಶ್ಮೀರ ವಿಚಾರದಲ್ಲಿ ಮೂರನೇ ವ್ಯಕ್ತಿಯ ಪ್ರವೇಶಕ್ಕೆ ಆಸ್ಪದವೇ ಇಲ್ಲ ಎಂದು ಖಂಡತುಂಡವಾಗಿ ಹೇಳಿದೆ. ಕಳೆದ 5 ತಿಂಗಳಲ್ಲಿ ನಾಲ್ಕನೇ ಬಾರಿಗೆ ಅವರು ಹೀಗೆ ಹೇಳುತ್ತಿರುವುದು ಗಮನಾರ್ಹ. ವಿಶೇಷವೆಂದರೆ ಅಷ್ಟೂ ಬಾರಿ ಭಾರತ ಟ್ರಂಪ್‌ ಮಾತಿಗೆ ತಿರಸ್ಕಾರ ಸೂಚಿಸಿದೆ.

ಫೆ. 24, 25ಕ್ಕೆ ಟ್ರಂಪ್‌ ಭೇಟಿ?
ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆ. 24, 25ರಂದು ತಮ್ಮ ಮೊತ್ತ ಮೊದಲ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಅದಕ್ಕೆ ಪೂರಕವಾಗಿ ಅಮೆರಿಕದ ವಿದೇಶಾಂಗ ಖಾತೆ ಸಹಾಯಕ ಸಚಿವೆ ಅಲಿಸ್‌ ವೆಲ್ಸ್‌ ಕಳೆದ ವಾರ ಹೊಸದಿಲ್ಲಿಗೆ ಭೇಟಿ ನೀಡಿದ್ದರು.

ಹ್ಯೂಸ್ಟನ್‌ನಲ್ಲಿ ನಡೆದಿದ್ದ ‘ಹೌಡಿ ಮೋದಿ’ ಕಾರ್ಯ ಕ್ರಮದಂತೆಯೇ ಅಹಮದಾಬಾದ್‌ನಲ್ಲಿ ಟ್ರಂಪ್‌ಗಾಗಿ ಅದ್ದೂರಿ ಕಾರ್ಯಕ್ರಮ ಏರ್ಪಡಿಸುವ ಬಗ್ಗೆ ಮಾತುಕತೆ – ಸಿದ್ಧತೆಗಳು ನಡೆಯುತ್ತಿವೆ. ಈ ಭೇಟಿಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರ ಸರಕಾರದ ನಿರ್ಧಾರಕ್ಕೆ ಸಮರ್ಥನೆ ದೊರೆತಂತಾಗುತ್ತದೆ ಎಂಬ ವಿಶ್ಲೇಷಣೆ ನಡೆದಿದೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.