ಇರಾನ್‌ಗೆ ಪಾಕ್‌ ಯುರೇನಿಯಂ: ಲಂಡನ್‌ ವಿಮಾನ ನಿಲ್ದಾಣದಲ್ಲಿತ್ತು ಕಂಟೈನರ್‌


Team Udayavani, Jan 13, 2023, 6:40 AM IST

ಇರಾನ್‌ಗೆ ಪಾಕ್‌ ಯುರೇನಿಯಂ: ಲಂಡನ್‌ ವಿಮಾನ ನಿಲ್ದಾಣದಲ್ಲಿತ್ತು ಕಂಟೈನರ್‌

ಲಂಡನ್‌/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡಿ ಚಂದ ನೋಡುವ ಪಾಕಿಸ್ತಾನ ಸರ್ಕಾರ ಮತ್ತೂಮ್ಮೆ ಜಗತ್ತಿನ ಮುಂದೆ ಬೆತ್ತಲಾಗಿದೆ. ಯುನೈಟೆಡ್‌ ಕಿಂಗ್‌ಡಮ್‌ನಲ್ಲಿ ಇರುವ ಇರಾನ್‌ನ ಕಂಪನಿಗೆ ಬೃಹತ್‌ ಪ್ರಮಾಣದ ಕಂಟೈನರ್‌ನಲ್ಲಿ ಯುರೇನಿಯಂ ಪೂರೈಕೆ ಮಾಡುವ ಪಾಕಿಸ್ತಾನದ ಕಳ್ಳಜಾಲ ಅನಾವರಣಗೊಂಡಿದೆ. ಅದನ್ನು ಪರಮಾಣು ಬಾಂಬ್‌ ತಯಾರಿಸಲು ಪೂರೈಕೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.

ಲಂಡನ್‌ನ ಹೀಥ್ರೂ ವಿಮಾನ ನಿಲ್ದಾಣದಲ್ಲಿ ಒಮಾನ್‌ನಿಂದ ಆಗಮಿಸಿದ ವಿಮಾನದಲ್ಲಿ ಬೃಹತ್‌ ಕಂಟೈನರ್‌ ಬಗ್ಗೆ ಸಂಶಯದ ಗೆರೆಗಳು ಎದ್ದಿತ್ತು. ಈ ಹಿನ್ನೆಲೆಯಲ್ಲಿ ಯು.ಕೆ. ಉಗ್ರ ನಿಗ್ರಹ ದಳಕ್ಕೆ ಕೂಡಲೇ ಸ್ಥಳಕ್ಕೆ ಆಗಮಿಸಲು ಸೂಚನೆ ನೀಡಲಾಯಿತು. ಅಧಿಕಾರಿಗಳ ಸಮಕ್ಷಮದಲ್ಲಿ ಅತ್ಯಾಧುನಿಕ ಸ್ಕ್ಯಾನರ್‌ಗಳ ಮೂಲಕ ಕಂಟೈನರ್‌ ಅನ್ನು ಶೋಧಿಸಿದಾಗ ಅದರಲ್ಲಿ ಯುರೇನಿಯಂ ಇದ್ದದ್ದು ಖಚಿತವಾಯಿತು. 2022 ಡಿ.29ರಂದೇ ಈ ಪ್ರಕರಣ ನಡೆದಿದ್ದರೂ,  ತಡವಾಗಿ ಪಾಕಿಸ್ತಾನದ ಕುತ್ಸಿತ ಬುದ್ಧಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಯು.ಕೆ.ಯಲ್ಲಿ ಇರುವ ಇರಾನ್‌ನ ಕೆಲವರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ.

ನೋಂದಣಿ ಮಾಡಿರಲಿಲ್ಲ:

ಪ್ರಯಾಣಿಕ ವಿಮಾನದಲ್ಲಿ ಸಾಗಣೆ ಮಾಡಲಾಗಿದ್ದ ಕಂಟೈನರ್‌ ಅನ್ನು ನೋಂದಣಿ ಮಾಡಿರಲಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ. 2004ರಲ್ಲಿ  ಪಾಕಿಸ್ತಾನದ ವಿಜ್ಞಾನಿ ಅಬ್ದುಲ್‌ ಖಾದಿರ್‌ ಖಾನ್‌ ಅವರು ಇರಾನ್‌ಗೆ ಪರಮಾಣು ತಂತ್ರಜ್ಞಾನವನ್ನು ನೀಡಿದ್ದ ಆಘಾತಕಾರಿ ಅಂಶ ಬಯಲಾಗಿತ್ತು. ಆದರೆ, ಪಾಕಿಸ್ತಾನ ಸರ್ಕಾರ ಯು.ಕೆ.ಗೆ ಯುರೇನಿಯಂ ಸಾಗಿಸಿಲ್ಲ ಎಂದು ಹೇಳಿಕೊಂಡಿದೆ.

ಪಿಒಕೆಯಲ್ಲೂ ಆಹಾರಕ್ಕೆ ಹಾಹಾಕಾರ:

ಭಾರತಕ್ಕೇ ಸೇರಬೇಕಾಗಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿಯೂ ಆಹಾರದ ಕೊರತೆ ಉಂಟಾಗಿದೆ. ಬಂದೂಕಿನ ಬಂದೋಬಸ್ತ್ ಮೂಲಕ ಗೋಧಿ ಹಿಟ್ಟು, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳನ್ನು ವಿತರಿಸಲಾಗುತ್ತದೆ. ಆದರೆ, ವಾಣಿಜ್ಯ ಮಳಿಗೆಗಳಿಗೆ ಆಹಾರ ವಸ್ತುಗಳ  ಪೂರೈಕೆಯಲ್ಲಿಯೂ ಕೂಡ ವ್ಯತ್ಯಯ ಉಂಟಾಗಿದೆ. ವಿಶೇಷವಾಗಿ ಭಾಗ್‌ ಮತ್ತು ಮುಜಾಫ‌ರಾಬಾದ್‌ನಲ್ಲಿ ಆಹಾರಕ್ಕಾಗಿ ಹಾಹಾಕಾರ ಉಂಟಾಗಿದೆ. ರಿಯಾಯಿತಿ ದರದಲ್ಲಿ ಸರ್ಕಾರ ವಿತರಿಸುತ್ತಿರುವ ಗೋಧಿ ಸಂಪೂರ್ಣಯಾಗಿ ಸ್ಥಗಿತಗೊಂಡಿದೆ. ಬೇಡಿಕೆಗೆ ತಕ್ಕಂತೆ ಗೋಧಿ ಹಿಟ್ಟು ಪೂರೈಕೆಯಾಗುತ್ತಿಲ್ಲದೇ ಇರುವುದರಿಂದ ಅದರ ಬೆಲೆಯಲ್ಲಿಯೂ ಏರಿಕೆಯಾಗಿದೆ.

“ಸರ್ಕಾರ ನಮಗೆ ಸೂಕ್ತ ರೀತಿಯಲ್ಲಿ ಆಹಾರ ವಿತರಿಸಲು ಕ್ರಮ ಕೈಗೊಳ್ಳುತ್ತಿಲ್ಲ. ಸ್ಥಳೀಯಲಾಗಿ ಪ್ರತಿಭಟನೆ ಶುರು ಮಾಡಿದ್ದೇವೆ. ಇಡೀ ಪ್ರದೇಶಕ್ಕೆ ಅದನ್ನು ನಾವು ವಿಸ್ತರಿಸುತ್ತೇವೆ. ಸರ್ಕಾರ ಭಾರೀ ಸವಾಲುಗಳನ್ನು ಎದುರಿಸಲಿದೆ’ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ವರ್ತಕರೂ ಕೂಡ ಅಸಹಾಯಕತೆ ಪ್ರದರ್ಶಿಸಿದ್ದಾರೆ. ಅಗತ್ಯ ವಸ್ತುಗಳ ದರಗಳು ಕೈಗಟಕುವ ಮಟ್ಟಕ್ಕಿಂತ ಏರಿಕೆಯಾಗಿದೆ. ಸರ್ಕಾರವೂ ಕೂಡ ಅಗತ್ಯಕ್ಕೆ ತಕ್ಕಂತೆ ವಸ್ತುಗಳನ್ನು ಪೂರೈಕೆ ಮಾಡುತ್ತಿಲ್ಲ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.