26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಬಗ್ಗೆ ಮಾಹಿತಿ ಕೊಟ್ಟರೆ 50 ಲಕ್ಷ ಬಹುಮಾನ: ಅಮೆರಿಕ
10 ಮಂದಿ ಉಗ್ರರು 2008ರ ನವೆಂಬರ್ 26ರಂದು ಮುಂಬೈನ ಹಲವು ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.
Team Udayavani, Nov 28, 2020, 1:17 PM IST
ವಾಷಿಂಗ್ಟನ್: ಹನ್ನೆರಡು ವರ್ಷಗಳ ನಂತರ ಮುಂಬೈ(26/11) ದಾಳಿಯ ಮಾಸ್ಟರ್ ಮೈಂಡ್ ಉಗ್ರ, ಲಷ್ಕರ್ ಎ ತೊಯ್ಬಾದ ಸದಸ್ಯ ಸಾಜಿದ್ ಮೀರ್ ಬಗ್ಗೆ ಮಾಹಿತಿ ನೀಡಿದರೆ 5 ಮಿಲಿಯನ್ ಡಾಲರ್ ಬಹುಮಾನ ಕೊಡುವುದಾಗಿ ಅಮೆರಿಕ ಘೋಷಿಸಿದೆ.
ಅಮೆರಿಕದ ಜಸ್ಟೀಸ್ ಪ್ರೋಗ್ರಾಂ ಈ ಬಹುಮಾನ ಘೋಷಿಸಿದ್ದು, ಸಾಜಿದ್ ಮೀರ್ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ ತೊಯ್ಬಾದ ಹಿರಿಯ ಸದಸ್ಯ. 2008ರಲ್ಲಿ ಮುಂಬೈನಲ್ಲಿ ನಡೆದ ದಾಳಿಯಲ್ಲಿ ಶಾಮೀಲಾಗಿದ್ದು, ಈತ ಭಾರತಕ್ಕೆ ಮೋಸ್ಟ್ ವಾಂಟೆಡ್ ಉಗ್ರನಾಗಿದ್ದಾನೆ.
ಮುಂಬೈ ದಾಳಿಯಲ್ಲಿ ಪ್ರಮುಖ ಪಾತ್ರವಹಿಸಿರುವ ಸಾಜಿದ್ ಮೀರ್ ಯಾವ ದೇಶದಲ್ಲಿ ಅಥವಾ ಯಾವ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಬಗ್ಗೆ ಮಾಹಿತಿ ನೀಡಿದಲ್ಲಿ 5 ಲಕ್ಷ ಮಿಲಿಯನ್ ಡಾಲರ್(50 ಲಕ್ಷ) ಬಹುಮಾನ ನೀಡುವುದಾಗಿ ಅಮೆರಿಕ ಘೋಷಿಸಿದೆ.
ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾದ ಹತ್ತು ಮಂದಿ ಉಗ್ರರು 2008ರ ನವೆಂಬರ್ 26ರಂದು ಮುಂಬೈನ ಹಲವು ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿದ್ದರು. ಪ್ರತಿಷ್ಠಿತ ತಾಜ್ ಹೋಟೆಲ್, ಒಬೆರಾಯ್ ಹೋಟೆಲ್, ದ ಲಿಯೋಪೋಲ್ಡ್ ಕೆಫೆ, ದ ನಾರಿಮನ್ ಹೌಸ್ ಹಾಗೂ ಚತ್ರಪತಿ ಶಿವಾಜಿ ಟರ್ಮಿನಸ್ ನಲ್ಲಿ ದಾಳಿ ನಡೆಸಿದ ಪರಿಣಾಮ ವಿದೇಶಿಯರು, ಪೊಲೀಸ್ ಅಧಿಕಾರಿಗಳು ಸೇರಿ 166 ಮಂದಿ ಸಾವನ್ನಪ್ಪಿದ್ದರು.
ಇದನ್ನೂ ಓದಿ:ವಿದೇಶದಲ್ಲಿರುವ ಕನ್ನಡಿಗರಿಂದ ಮಾತೃ ಭಾಷೆಯ ಶುದ್ಧೀಕರಣ: ಡಾ| ಡಿ. ವೀರೇಂದ್ರ ಹೆಗ್ಗಡೆ
ಭಯೋತ್ಪಾದಕ ಘಟನೆಯಲ್ಲಿ ಒಂಬತ್ತು ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಜೀವಂತವಾಗಿ ಸೆರೆಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಗೆ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2012ರ ನವೆಂಬರ್ 21ರಂದು ಕಸಬ್ ನನ್ನು ಪುಣೆಯ ಯರವಾಡಾ ಜೈಲಿನಲ್ಲಿ ನೇಣಿಗೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ