ಉಗ್ರರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಿ: ಪಾಕಿಸ್ಥಾನಕ್ಕೆ ಅಮೆರಿಕ ತಾಕೀತು
Team Udayavani, Jun 10, 2019, 4:41 PM IST
ವಾಷಿಂಗ್ಟನ್ : ಭಾರತದೊಂದಿಗಿನ ಸಂಬಂಧ ಸುಧಾರಿಸಬೇಕೆಂದಿದ್ದರೆ ಪಾಕಿಸ್ಥಾನ ಸರ್ವಪ್ರಥಮವಾಗಿ ಭಯೋತ್ಪಾದನೆ ವಿರುದ್ದ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ಅಮೆರಿಕ, ಪಾಕಿಸ್ಥಾನಕ್ಕೆ ಕಟ್ಟುನಿಟ್ಟಾಗಿ ಹೇಳಿದೆ.
‘ಪಾಕಿಸ್ಥಾನ ತನ್ನಲ್ಲಿನ ಉಗ್ರರನ್ನು ಬಂಧಿಸಬೇಕು; ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವರನ್ನು ಹಿಡಿದು ಶಿಕ್ಷಿಸಬೇಕು; ಉಗ್ರ ಕೃತ್ಯಗಳಿಗಾಗಿ ಮುಕ್ತವಾಗಿ ಶಸ್ತ್ರಾಸ್ತ್ರ ಗಳನ್ನು ಸಂಗ್ರಹಿಸುತ್ತಿರುವ ಉಗ್ರ ಸಂಘಟನೆಗಳನ್ನು ಮಟ್ಟ ಹಾಕಬೇಕು; ಭಾರತದಲ್ಲಿ ಉಗ್ರ ಕೃತ್ಯ ನಡೆಸುವುದಕ್ಕಾಗಿ ಭಾರತದ ಗಡಿಯೊಳಗೆ ಉಗ್ರರು ನುಸುಳುವುದನ್ನು ಪಾಕಿಸ್ಥಾನ ತಡೆಯಬೇಕು’ ಎಂದು ಶ್ವೇತಭವನ ಪಾಕಿಸ್ಥಾನಕ್ಕೆ ಅಪ್ಪಣೆ ಕೊಡಿಸಿದೆ. ಈ ವಿಷಯವನ್ನು ಪಾಕಿಸ್ಥಾನದ ಡಾನ್ ನ್ಯೂಸ್ ಬಹಿರಂಗಪಡಿಸಿದೆ.
‘ಭಾರತ ಮಾತ್ರವಲ್ಲ ಅಮೆರಿಕ ಕೂಡ, ಪಾಕಿಸ್ಥಾನ ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರರ ಚಟುವಟಿಕೆಗಳನ್ನು ಶಾಶ್ವತವಾಗಿ ಕೊನೆಗೊಳಿಸುವ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಪೇಕ್ಷಿಸುತ್ತದೆ’ ಎಂದು ಶ್ವೇತ ಭವನ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಸ್ಪಷ್ಟಪಡಿಸಿದೆ.
ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಚೆಗೆ ಪತ್ರ ಬರೆದು ಉಭಯ ದೇಶಗಳ ನಡುವಿನ ಮಾತುಕತೆಯನ್ನು ಪುನರಾರಂಭಿಸುವಂತೆ ಕೋರಿದ್ದರು. ಅದರ ಬೆನ್ನಿಗೆ ಅಮೆರಿಕ ಪಾಕಿಸ್ಥಾನಕ್ಕೆ ಈ ಬುದ್ಧಿವಾದ ಹೇಳಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್