ಅಮೆರಿಕ: ಅಟ್ಲಾಂಟಾ ಪೊಲೀಸ್ ಗುಂಡಿಗೆ ಮತ್ತೊಬ್ಬ ಕಪ್ಪು ವರ್ಣೀಯ ಸಾವು, ಭುಗಿಲೆದ್ದ ಆಕ್ರೋಶ
ರೇಶಾರ್ಡ್ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರು ಇಂಟರ್ ಸ್ಟೇಟ್ ಹೈವೇಯನ್ನು ಬಂದ್ ಮಾಡಿದ್ದಾರೆ.
Team Udayavani, Jun 14, 2020, 1:07 PM IST
ವಾಷಿಂಗ್ಟನ್:ಇತ್ತೀಚೆಗಷ್ಟೇ ಕಪ್ಪು ಜನಾಂಗದ ಜಾರ್ಜ್ ಫ್ಲಾಯ್ಡ್ ಹತ್ಯೆಯ ಆಕ್ರೋಶ, ಪ್ರತಿಭಟನೆ ನಡೆಯುತ್ತಿರುವ ನಡುವೆಯೇ ಅಮೆರಿಕದ ಅಟ್ಲಾಂಟಾ ಪೊಲೀಸ್ ಗುಂಡಿಗೆ ಮತ್ತೊಬ್ಬ ಕಪ್ಪು ವರ್ಣದ ವ್ಯಕ್ತಿ ಸಾವನ್ನಪ್ಪಿದ್ದು, ಆಕ್ರೋಶ ಭುಗಿಲೆದ್ದಿರುವುದಾಗಿ ವರದಿ ತಿಳಿಸಿದೆ.
ಸ್ಥಳೀಯ ಮಾಧ್ಯಮದ ವರದಿ ಪ್ರಕಾರ, ಶನಿವಾರ ತಡರಾತ್ರಿ 27 ವರ್ಷದ ರೇಶಾರ್ಡ್ ಬ್ರೂಕ್ಸ್ ಎಂಬ ಕಪ್ಪು ವರ್ಣೀಯನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ಪ್ರಕರಣದ ಬೆನ್ನಲ್ಲೇ ಅಟ್ಲಾಂಟಾ ಪೊಲೀಸ್ ವರಿಷ್ಠ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮೇಯರ್ ತಿಳಿಸಿದ್ದಾರೆ.
ರೇಶಾರ್ಡ್ ಹತ್ಯೆಗೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನಾಕಾರರು ಇಂಟರ್ ಸ್ಟೇಟ್ ಹೈವೇಯನ್ನು ಬಂದ್ ಮಾಡಿದ್ದಾರೆ. ಅಲ್ಲದೇ ಬ್ರೂಕ್ಸ್ ಹತ್ಯೆ ನಡೆದ ವೆಂಡಿ ರೆಸ್ಟೋರೆಂಟ್ ಗೆ ಪ್ರತಿಭಟನಾಕಾರರ ಬೆಂಕಿ ಹಚ್ಚಿರುವುದಾಗಿ ವರದಿ ವಿವರಿಸಿದೆ.
ಶುಕ್ರವಾರ ತಡರಾತ್ರಿ ವೆಂಡಿ ಫಾಸ್ಟ್ ಫುಡ್ ರೆಸ್ಟೋರೆಂಟ್ ಪಾರ್ಕಿಂಗ್ ಸ್ಥಳದ ಪ್ರವೇಶ ದ್ವಾರದಲ್ಲಿ ತನ್ನ ಕಾರಿನಲ್ಲಿ ಬ್ರೂಕ್ಸ್ ಮಲಗಿದ್ದ. ಇದನ್ನು ಗಮನಿಸಿದ ರೆಸ್ಟೋರೆಂಟ್ ಸಿಬ್ಬಂದಿ, ಕಾರನ್ನು ಮಧ್ಯೆ ನಿಲ್ಲಿಸಿ ಇತರ ಗ್ರಾಹಕರಿಗೆ ತೊಂದರೆ ಕೊಡುತ್ತಿದ್ದಾನೆ ಎಂದು ಬ್ರೂಕ್ಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರು ಸ್ಥಳಕ್ಕೆ ಆಗಮಿಸಿ ಮದ್ಯಪಾನ ಮಾಡಿರುವ ಶಂಕೆ ವ್ಯಕ್ತಪಡಿಸಿ ಪರೀಕ್ಷೆಗೆ ಒಳಗಾಗಲು ಸೂಚನೆ ನೀಡಿದ್ದರು. ಆದರೆ ಬ್ರೂಕ್ಸ್ ನಿರಾಕರಿಸಿದ್ದ.ಈ ವೇಳೆ ಬ್ರೂಕ್ಸ್ ನನ್ನು ಬಂಧಿಸಲು ಯತ್ನಿಸಿದ್ದರು. ಅಲ್ಲದೇ ಆತ ಅಲ್ಲಿಂದ ಓಡಲು ಆರಂಭಿಸಿದಾಗ ಪೊಲೀಸರು ಗುಂಡು ಹಾರಿಸಿರುವುದಾಗಿ ವರದಿ ತಿಳಿಸಿದೆ.
ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರು. ಆದರೆ ಸರ್ಜರಿ ನಡೆಸಿದ ನಂತರ ಆತ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ಘರ್ಷಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!