ಅಮೆರಿಕ ಚುನಾವಣೆ: ಕಮಲಾ ದೇವಿ ಹೆಸರು ಸೂಚಿಸಲು ಒಬಾಮಾ ಕಾರಣ!


Team Udayavani, Aug 12, 2020, 7:25 PM IST

kamala haris

ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಕಾವು ಹೆಚ್ಚಾಗುತ್ತಿದೆ.

ಅಧ್ಯಕ್ಷೀಯ ಚುನಾವಣೆಯ ಮೊದಲು ಡೆಮಾಕ್ರಟಿಕ್‌ ಪಕ್ಷವು ಭಾರತೀಯ-ಆಫ್ರಿಕನ್‌ ಮೂಲದ ಕಮಲಾ ದೇವಿ ಹ್ಯಾರಿಸ್‌ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ.

ಈ ಮೂಲಕ ಡೆಮಾಕ್ರಟ್‌ ಮತ್ತು ರಿಪಬ್ಲಿಕ್‌ ನಡುವೆ ಚುನಾವಣೆಯ ಟ್ರಂಪ್‌ ಕಾರ್ಡ್‌ ಹೊರಬಿದ್ದಿದೆ.

ಕೆಳವು ದಿನಗಳ ಹಿಂದೆ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್‌ ಅವರು ಕಮಲಾ ದೇವಿ ಅವರ ಈ ಘೋಷಣೆಯ ಸುಳಿವನ್ನು ನೀಡಿದ್ದರು. ಚುನಾವಣೆಯ ತಯಾರಿಯಲ್ಲಿರುವ ಬಿಡೆನ್‌ ಕೈಯಲ್ಲಿ ಇದಕ್ಕೆ ಸಂಬಂಧಿಸಿದಂತಹ ಕಾಗದ ಪತ್ರಗಳಿದ್ದವು. ಬಳಿಕ ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಬಿಡೆನ್‌ ಬಳಿಯಿದ್ದ ಕಾಗದದಲ್ಲಿ ಐದು ಹೆಸರುಗಳಿತ್ತು ಎನ್ನಲಾಗಿತ್ತು. ಅದರಲ್ಲಿ ಇಂದು ಘೋಷಣೆಯಾದ ಕಮಲಾ ದೇವಿ ಅವರ ಹೆಸರು ಪಟ್ಟಿಯ ಮೇಲ್ಭಾಗದಲ್ಲಿತ್ತು.

ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಪ್ರಮಾಣದಲ್ಲಿ ಹರಿದಾಡಿತ್ತು. ಅಂದಿನಿಂದ, ಕಮಲಾ ದೇವಿ ಡೆಮಾಕ್ರಟಿಕ್‌ ಪಕ್ಷದ ಉಪಾಧ್ಯಕ್ಷರ ಹುದ್ದೆಗೆ ಮೊದಲ ಆಯ್ಕೆ ಎಂದೇ ಹೇಳಲಾಗಿತ್ತು. ದಿನಗಳ ಹಿಂದೆ ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಅವರು ಕಮಲಾ ದೇವಿ ಅವರ ಹೆಸರನ್ನು ಬಹಿರಂಗವಾಗಿ ಪ್ರಸ್ತಾವಿಸಿದ್ದರು. ಬಳಿಕ ಇದನ್ನು ಒಪ್ಪಿಕೊಂಡ ಪಕ್ಷ ಇದೀಗ ಕಮಲಾ ಅವರನ್ನು ಈ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಡೆಮಾಕ್ರಟಿಕ್‌ ಪಕ್ಷವು ಎರಡು ಸಂದೇಶಗಳನ್ನು ನೀಡಲು ಬಯಸಿದೆ.

ಕ್ಯಾಲಿಫೋರ್ನಿಯಾ ಸೆನೆಟರ್‌ ಆಗಿರುವ ಕಮಲಾ ಹ್ಯಾರಿಸ್‌ ಅವರನ್ನು ಉಪಾಧ್ಯಕ್ಷೆ ಸ್ಥಾನದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಮೊದಲ ಕಪ್ಪು ಮಹಿಳೆ ಹಾಗೂ ಮೊದಲ ಏಷ್ಯನ್‌ ಅಮೆರಿಕ ಮಹಿಳೆಯನ್ನು ಉಪಾಧ್ಯಕ್ಷೆ ಸ್ಥಾನಕ್ಕೆ ಆಯ್ಕೆ ಮಾಡುವ ಐತಿಹಾಸಿಕ ನಿರ್ಧಾರ ತೆಗೆದುಕೊಂಡಂತಾಗಿದೆ. ಇದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಒಂದು ಕಲ್ಲಿನಿಂದ ಎರಡು ಹೊಡೆತ
ಕಮಲಾ ಅವರು ಡೆಮಾಕ್ರಟಿಕ್‌ ಪಕ್ಷವನ್ನು ಜನಾಂಗೀಯ ಸಮಾನತೆಯ ಸಂಕೇತವೆಂದು ಬಣ್ಣಿಸಿದ್ದರು. ಇದರ ತಯಾರಿ ಕಳೆದ ವರ್ಷ ವಿಸ್ಕೋಸಿನ್‌ನಲ್ಲಿ ಪ್ರಾರಂಭವಾಗಿತ್ತು. ಬಳಿಕದ ದಿನಗಳಲ್ಲಿ ಡೆಮಾಕ್ರಟಿಕ್‌ ಪಕ್ಷದ ಸಮಾವೇಶದಲ್ಲಿ ಬಿಡೆನ್‌ ಅವರು ಕಮಲಾ ಅವರ ಕುರಿತು ತುಟಿ ಬಿಚ್ಚಿದ್ದರು. ಕಮಲಾ ಅವರು ಆಫ್ರಿಕನ್‌ ಹಾಗೂ ಭಾರತೀಯ ಮೂಲದವರಾಗಿದ್ದಾರೆ ಎಂದಿದ್ದರು. ಇಲ್ಲಿ ಬಿಡೆನ್‌ ಅವರು ಜನಾಂಗೀಯ ಘರ್ಷಣೆ ಸಂಭವಿಸುವುದಿಲ್ಲ ಎಂದು ಹೇಳಲು ಇದನ್ನು ಅವಕಾಶವಾಗಿ ಬಳಸಿಕೊಂಡಿದ್ದರು.

ಹಾಗೆ ನೋಡಿದರೆ ಅಮೆರಿಕದಲ್ಲಿ ಭಾರತೀಯ ಮೂಲದ ಜನರನ್ನು ಸಾಮಾನ್ಯವಾಗಿ ಡೆಮಾಕ್ರಟಿಕ್‌ ಬೆಂಬಲಿಗರೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಬರಾಕ್‌ ಒಬಾಮ, ಜೋ ಬಿಡನ್‌, ಹಿಲರಿ ಕ್ಲಿಂಟನ್‌ ಮೊದಲಾದವರು. ಭಾರತೀಯರತ್ತ ಗಮನ ಹರಿಸಿದ್ದರು. ಟ್ರಂಪ್‌ ಇತ್ತೀಚೆಗೆ ಎಚ್‌ -1 ಬಿ ವೀಸಾಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದಾಗಿ ಘೋಷಿಸಿದಾಗ ಈ ಕ್ರಮದಲ್ಲಿ ಬದಲಾವಣೆ ಮಾಡಬೇಕೆಂದು ಆಗ್ರಹಿಸಿದವರಲ್ಲಿ ಡೆಮಾಕ್ರಟಿಕ್‌ಗಳು ಮೊದಲಿದ್ದರು. ಡೆಮಾಕ್ರಟ್ಸ್‌ಗಳ ವಿರೋಧಕ್ಕೆ ಟ್ರಂಪ್‌ ತಲೆಬಾಗಬೇಕಾಯಿತು. ಇಲ್ಲಿ ಟ್ರಂಪ್‌ ತಲೆಬಾಗದೇ ಹೋಗಿದ್ದರೆ ಅದು ಚುನಾವಣೆಯಲ್ಲಿ ಟ್ರಂಪ್‌ಗೆ ಭಾರೀ ಹಿನ್ನಡೆಯಾಗುತ್ತಿತ್ತು. ಯಾಕೆಂದರೆ ಅದು ಬಿಡೆನ್‌ ಅವರಿಗೆ ಸುಲಭವಾಗುತ್ತಿತ್ತು.

ಈಗ ಮುಂದುವರಿದು ಕಮಲಾ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಡೆಮಾಕ್ರಟಿಕ್‌ಗಳು ಭಾರತೀಯರಿಗೆ ಮತ್ತು ಆಫ್ರಿಕನ್‌ ಮೂಲದ ನಾಗರಿಕರಿಗೆ ರಿಪಬ್ಲಿಕನ್‌ ಪಕ್ಷಕ್ಕಿಂತ ನಾವು ಸಂಪೂರ್ಣವಾಗಿ ಭಿನ್ನವೆಂದು ಸಾರುವ ಸಂದೇಶವನ್ನು ಕಳುಹಿಸಲು ಮುಂದಾಗಿದ್ದಾರೆ. ಜಾರ್ಜ್‌ ಫ್ಲಾಯ್ಡ್ ಅವರ ಹತ್ಯೆಯ ಬಳಿಕ ಕರಿಯರು ಮತ್ತು ರಿಪಬ್ಲಿಕನ್‌ರಿಗೆ ಸರಿ ಹೊಂದುತ್ತಿಲ್ಲ. ಈ ಹಿನ್ನೆಲೆಯಲ್ಲಿ ಡೆಮೋಕ್ರಟ್ಸ್‌ ಇದರ ಲಾಭ ಪಡೆಯಲು ಮುಂದಾಗಿದೆ.

ಜೋ ಬಿಡೆನ್‌ರನ್ನು ಟೀಕಿಸಿದ್ದ ಕಮಲಾ
ಡೆಮಾಕ್ರಟಿಕ್‌ ಪಕ್ಷದ ಕೆಲವು ಸಭೆಗಳಲ್ಲಿ ಜೋ ಬಿಡೆನ್‌ ಅವರನ್ನು ಕಮಲಾ ದೇವಿ ಅವರು ಹಲವಾರು ಬಾರಿ ಟೀಕಿಸಿದ್ದಾರೆ. “ನಿಮ್ಮ ಬಗ್ಗೆ ಯೋಚಿಸುವ ಮೊದಲು ನೀವು ರಾಷ್ಟ್ರದ ಬಗ್ಗೆ ಚಿಂತಿಸಬೇಕು. ಟ್ರಂಪ್‌ ಅವರನ್ನು ವಿರೋಧಿಸುವಾಗ ನಾವು ವಿದೇಶಾಂಗ ನೀತಿಯ ಬಗ್ಗೆ ತುಂಬಾ ಮೃದುವಾದ ಮನೋಭಾವವನ್ನು ಹೊಂದಬಾರದು ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಅಮೆರಿಕವನ್ನು ಉತ್ತುಂಗದಲ್ಲಿಡಲು ಕಟ್ಟುನಿಟ್ಟಾದ ಮತ್ತು ಕೆಲವು ಮೃದುವಾದ ನೀತಿಗಳನ್ನು ಇಟ್ಟುಕೊಳ್ಳುವುದು ಅವಶ್ಯಕ’ ಎಂದು ಸಭೆಯಲ್ಲಿ ಜೋ ಬಿಡೆನ್‌ ಅವರ ಕುರಿತು ಕಮಲಾ ಅವರು ಹೇಳಿದ್ದರು. ವಿಶೇಷ ಎಂದರೆ ಕಮಲಾ ಅವರು ಜೋ ಬಿಡೆನ್‌ ಅವರ ಪುತ್ರನ ಉತ್ತಮ ಸ್ನೇಹಿತೆಯಾಗಿದ್ದಾರೆ. ಆದರೆ ಜೋ ಅವರೊಂದಿಗೆ ಕೆಲವು ನೀತಿಗಳ ಕುರಿತಾಗಿ ಅಸಮಧಾನ ಇದೆ.

ಮಲಾ ಹ್ಯಾರಿಸ್ (55ವರ್ಷ) ಅವರ ತಂದೆ ಜಮೈಕಾ ವಲಸಿಗ, ತಾಯಿ ಭಾರತೀಯ ಮೂಲದವರು. ಕಮಲಾ ಅವರು ಸ್ಯಾನ್ ಫ್ರಾನ್ಸಿಸ್ಕೋ ಜಿಲ್ಲಾ ಅಟಾರ್ನಿ ಆಗಿ ಹಾಗೂ ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದವರಾಗಿದ್ದಾರೆ.

ಇದೀಗ ಕಮಲಾ ಅವರನ್ನು ಉಪಾಧ್ಯಕರ ಹುದ್ದೆಯ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಜೋ ಬಿಡನ್‌ ಮತ್ತು ಡೆಮಾಕ್ರಟಿಕ್‌ ಪಕ್ಷವು ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದೆ. ಎಲ್ಲ ಅಭಿಪ್ರಯಾಗಳನ್ನು ನಾವು ಗೌರವಿಸಿ ಮುನ್ನಡೆಯುತ್ತೇವೆ ಎಂದು ಹೇಳಲು ಹೊರಟಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಜೋ ಬಿಡೆನ್‌ ಮತ್ತು ಕಮಲಾ ನಡುವಿನ ಪೈಪೋಟಿ ಕಡಿಮೆಯಾಗಿದೆ. ಇಲ್ಲಿ ಕಮಲಾ ಮತ್ತು ಜೊ ಬಿಡೆನ್‌ ನಡುವಿನ ವೈಚಾರಿಕ ಅಂತರವನ್ನು ರಿಪಬ್ಲಿಕನ್‌ ಪಕ್ಷವು ಸಮಸ್ಯೆಯನ್ನಾಗಿ ಚಿತ್ರಿಸಲು ಮುಂದಾಗಿದೆ. ಈ ಹಿಂದೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಪ್ರಚಾರ ಸಭೆಯಲ್ಲಿ ಡೆಮಾಕ್ರಟಿಕ್‌ ಪಕ್ಷದಲ್ಲಿನ ಈ ವೈಚಾರಿಕ ಅಂತರಗಳು ಚರ್ಚೆಯಾಗಿದ್ದವು. ಡೆಮಾಕ್ರಟ್ಸ್‌ ಗೆದ್ದರೆ ಅಮೆರಿಕವು ಈ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗುತ್ತದೆ ಎಂದು ಟ್ರಂಪ್‌ ಹಲವು ಬಾರಿ ಜನರ ಮುಂದಿಟ್ಟಿದ್ದರು. ಈ ಕಾರಣಕ್ಕೆ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಗೊಂದಲಕ್ಕೆ ತೆರೆ ಎಳೆಯಲು ಡೆಮಾಕ್ರಟ್ಸ್‌ ಮುಂದಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.