ಸಿರಿಯಾ ಮೇಲೆ ಅಮೆರಿಕ ದಾಳಿ: ರಾಸಾಯನಿಕ ಅಸ್ತ್ರ ನಾಶ


Team Udayavani, Apr 15, 2018, 6:00 AM IST

41.jpg

ವಾಷಿಂಗ್ಟನ್‌: ಬಂಡುಕೋರರನ್ನು ಸದೆಬಡಿಯಲು ಸಿರಿಯಾದ ಅಧ್ಯಕ್ಷ ಬಶರ್‌ ಅಲ್‌ ಅಸ್ಸಾದ್‌ ರಾಸಾಯನಿಕ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಸಿರಿಯಾ ಸೇನಾ ನೆಲೆಗಳ ಮೇಲೆ ಅಮೆರಿಕ, ಬ್ರಿಟನ್‌ ಹಾಗೂ ಫ್ರಾನ್ಸ್‌ನ ಯುದ್ಧ ವಿಮಾನಗಳು ಬಾಂಬ್‌ ದಾಳಿ ನಡೆಸಿವೆ. ಇದು ಸಿರಿಯಾದ ಕಳೆದ ಏಳು ವರ್ಷಗಳ ಆಂತರಿಕ ಸಂಘರ್ಷಕ್ಕೆ ಹೊಸ ಆಯಾಮ ನೀಡಿದೆ.

ಅಮೆರಿಕದ ಶ್ವೇತಭವನದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಈ ಬಗ್ಗೆ ಘೋಷಣೆ ಮಾಡುತ್ತಿದ್ದಂತೆಯೇ, ಸಿರಿಯಾ ರಾಜಧಾನಿ ಡಮಾಸ್ಕಸ್‌ನಲ್ಲಿ ಸಿಡಿಲಬ್ಬರದ ಶಬ್ದದೊಂದಿಗೆ ಭಾರೀ ಸ್ಫೋಟಗಳು ಸಂಭವಿಸಿವೆ. ಮೂಲಗಳ ಪ್ರಕಾರ ಶನಿವಾರ ಬೆಳಗಿನ ಜಾವ 4 ಗಂಟೆಗೆ ದಾಳಿ ನಡೆದಿದೆ. ರಾಜಧಾನಿಯ ಉತ್ತರ ಮತ್ತು ಪೂರ್ವ ಭಾಗದಲ್ಲಿ ಸ್ಫೋಟದಿಂದಾಗಿ ಆಕಾಶ ದೆತ್ತರಕ್ಕೆ ಹೊಗೆ ಏಳುವುದು ಕಂಡುಬಂತು. ದಾಳಿಗೆ ಪ್ರತಿರೋಧವಾಗಿ ಡಮಾಸ್ಕಸ್‌ನಲ್ಲಿ ದೇಶದ ಧ್ವಜವನ್ನು ಎಲ್ಲ ಕಚೇರಿಗಳಲ್ಲೂ ಅರ್ಧಕ್ಕೆ ಇಳಿಸಲಾಗಿತ್ತು. ಸ್ಫೋಟದಿಂದ ಕೆಲವರಿಗೆ ಗಾಯ ಗಳಾಗಿದ್ದು, ಸಾವಿನ ಬಗ್ಗೆ ಮಾಹಿತಿ ಲಭಿಸಿಲ್ಲ.

ಬಶರ್‌ ಅಲ್‌ ಅಸ್ಸಾದ್‌ ಸಂಗ್ರಹಿಸಿದ್ದಾರೆ ಎನ್ನಲಾದ ರಾಸಾಯನಿಕ ಅಸ್ತ್ರಗಳ ಮೇಲೆ ನಿಗದಿತ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ವೈಜ್ಞಾನಿಕ ಸಂಶೋಧನಾ ಕೇಂದ್ರ, ಶಸ್ತ್ರಾಸ್ತ್ರ ದಾಸ್ತಾನು ಕೇಂದ್ರ ಮತ್ತು ಕಮಾಂಡ್‌ ಪೋಸ್ಟ್‌ ಮೇಲೆ ದಾಳಿ ನಡೆದಿದೆ ಎಂದು ಅಮೆರಿಕದ ಸೇನಾ ಮುಖ್ಯಸ್ಥ ಜೋಸೆಫ್ ಡನ್‌ಫೋರ್ಡ್‌ ತಿಳಿಸಿದ್ದಾರೆ. 

ಈ ದಾಳಿಯಲ್ಲಿ ಬ್ರಿಟನ್‌ ಹಾಗೂ ಫ್ರಾನ್ಸ್‌ ಕೂಡ ಅಮೆರಿಕಕ್ಕೆ ಜತೆಯಾಗಿದೆ. ಡಮಾಸ್ಕಸ್‌ ಮತ್ತು ಹಾಮ್ಸ್‌ ಭಾಗದಲ್ಲಿ ಮಾತ್ರವೇ ದಾಳಿ ನಡೆಸಲಾಗಿದೆ. ಆರಂಭದಲ್ಲಿ ಸಿರಿಯಾದ ಕ್ಷಿಪಣಿಗಳು ಪ್ರತಿದಾಳಿ ನಡೆಸಿವೆ ಎಂದು ಹೇಳಲಾಗಿತ್ತಾದರೂ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಲಭ್ಯವಿಲ್ಲ. ಸಿರಿಯಾ ಮಾಧ್ಯಮಗಳು ಹೇಳುವಂತೆ ಅಮೆರಿಕದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದರಿಂದ ಭಾರೀ ಪ್ರಮಾಣದ ಹೊಗೆ ಎದ್ದಿದೆ.

ದಾಳಿ ಮುಂದುವರಿಕೆ ಇಲ್ಲ: ಸದ್ಯದ ಮಟ್ಟಿಗೆ ದಾಳಿ ಮುಂದುವರಿಸುವ ಯಾವುದೇ ಪ್ರಸ್ತಾವವಿಲ್ಲ. ಇದು ಒಂದು ಬಾರಿಯ ದಾಳಿಯಾಗಿತ್ತು. ಹೀಗಾಗಿ ಇತರ ಪ್ರದೇಶಗಳ ಮೇಲೆ ದಾಳಿ ನಡೆಸುವ ಸಾಧ್ಯತೆ ಇಲ್ಲ ಎಂದು ರಕ್ಷಣಾ ಸಚಿವ ಜಿಮ್‌ ಮ್ಯಾಟಿಸ್‌ ತಿಳಿಸಿದ್ದಾರೆ. ಆದರೆ ಈ ದಾಳಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಅಮೆರಿಕದ ಕೆಲವು ಸಂಸದರು ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಸ್ಪಷ್ಟ ಕಾರ್ಯತಂತ್ರ ಅಥವಾ ಸಂಸತ್ತಿನ ಅನುಮತಿ ಇಲ್ಲದೇ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಈ ದಾಳಿಯು ಬಶರ್‌ ಸರಕಾರವನ್ನು ಉರುಳಿಸುವ ಕ್ರಮವಲ್ಲ. ಮಾತ್ರವಲ್ಲದೆ ಸಿರಿಯಾ ಬಗ್ಗೆ ಅಮೆರಿಕದ ನೀತಿಯಲ್ಲಿ ಬದಲಾವಣೆಯೂ ಇಲ್ಲ. ಆದರೆ ಅಮೆರಿಕವು ಯಾವುದೇ ರೀತಿಯಲ್ಲೂ ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯನ್ನು ಅನುಮೋದಿಸುವುದಿಲ್ಲ ಎಂದು ಅಮೆರಿಕ ರಕ್ಷಣಾ ಸಚಿವಾಲಯದ ವಕ್ತಾರೆ ಡಾನಾ ವೈಟ್‌ ಹೇಳಿದ್ದಾರೆ.

100ಕ್ಕೂ ಹೆಚ್ಚು ಕ್ಷಿಪಣಿ ಧ್ವಂಸ: ಇನ್ನೊಂದೆಡೆ ಅಮೆರಿಕ ಪ್ರಯೋಗಿಸಿರುವ 100ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾ ಹೇಳಿಕೊಂಡಿದೆ. ರಷ್ಯಾದ ವಾಯುನೆಲೆ ಹಮೀಮಿಮ್‌ ಸಮೀಪದ ಯಾವ ಪ್ರದೇಶದಲ್ಲೂ ವಿದೇಶಿ ದಾಳಿ ಯಶಸ್ವಿಯಾಗಿಲ್ಲ ಎಂದು ರಷ್ಯಾ ಹೇಳಿಕೊಂಡಿದೆ. ಇದೇ ವೇಳೆ ಚೀನ ಕೂಡ ಪ್ರತಿಕ್ರಿಯಿಸಿದ್ದು, ಅಮೆರಿಕವು ಅಂತಾರಾಷ್ಟ್ರೀಯ ಕಾನೂನನ್ನು ಉಲ್ಲಂ ಸಿದೆ ಎಂದು ಆರೋಪಿಸಿದೆ.

ತನಿಖೆ ಮುಂದುವರಿಕೆ: ಕಳೆದ ವರ್ಷ ಸಿರಿಯಾದ ಡೌಮಾ ನಗರದಲ್ಲಿ ಬಶರ್‌ ಸರಕಾರ ನಡೆಸಿದ ರಾಸಾಯನಿಕ ದಾಳಿಗೆ ಸಂಬಂಧಿಸಿ ಜಾಗತಿಕ ತನಿಖಾ ಸಂಸ್ಥೆ ಒಪಿಸಿಡಬ್ಲೂé ತನಿಖೆ ಮುಂದುವರಿಸಿದೆ. ಅಮೆರಿಕದ ದಾಳಿಯ ಅನಂತರವೂ ತನಿಖೆ ಮುಂದುವರಿಯಲಿದ್ದು, ಶೀಘ್ರದಲ್ಲೇ ವರದಿ ನೀಡಲಾಗುವುದು ಎಂದು ಹೇಳಲಾಗಿದೆ. ಏತನ್ಮಧ್ಯೆ ರಷ್ಯಾ ಕೋರಿಕೆ ಮೇರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಶನಿವಾರ ರಾತ್ರಿ ಸಿರಿಯಾ ಮೇಲಿನ ದಾಳಿ ಕುರಿತು ಸಭೆ ನಡೆಸಿ, ಚರ್ಚಿಸಿದೆ.

ಕಳೆದ ರಾತ್ರಿ ಯಶಸ್ವಿ 
ದಾಳಿ ನಡೆಸಲಾಗಿದೆ. ಫ್ರಾನ್ಸ್‌ , ಇಂಗ್ಲೆಂಡ್‌ಗೆ ಧನ್ಯವಾದಗಳು. ಯೋಜನೆ ಯಶಸ್ವಿಯಾಗಿದೆ.
ಡೊನಾಲ್ಡ್‌ ಟ್ರಂಪ್‌, ಅಮೆರಿಕ ಅಧ್ಯಕ್ಷ

ರಷ್ಯಾಗೆ ಎಚ್ಚರಿಕೆ 
ಸಿರಿಯಾದ ಬಶರ್‌ ಪರ ನಿಲುವು ತಳೆಯದಂತೆ ರಷ್ಯಾ, ಇರಾನ್‌ಗೆ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಈ ಕೆಟ್ಟ ದಾರಿಯಲ್ಲಿ ಸಾಗಬೇಕೇ, ಬೇಡವೇ ಎಂಬುದನ್ನು ರಷ್ಯಾ ನಿರ್ಧರಿಸಬೇಕು ಎಂದಿದ್ದಾರೆ. 

ಸಿರಿಯಾದಲ್ಲಿ ಇತ್ತೀಚಿನ ದಾಳಿ ನಮ್ಮ ಗಮನಕ್ಕೆ ಬಂದಿದೆ. ಸನ್ನಿವೇಶವನ್ನು ಭಾರತ ಗಮನಿಸುತ್ತಿದೆ. ರಾಸಾಯನಿಕ ದಾಳಿ ನಡೆದಿದೆ ಎಂದಾದರೆ ಇದು ಅಕ್ಷಮ್ಯ. ಒಪಿಸಿಡಬ್ಲೂ ಈ ಬಗ್ಗೆ ವಾಸ್ತವಾಂಶವನ್ನು ಆಧರಿಸಿ ತನಿಖೆ ನಡೆಸುತ್ತದೆ ಎಂದು ನಾವು ಭಾವಿಸಿದ್ದೇವೆ.
ರವೀಶ್‌ ಕುಮಾರ್‌, ವಿದೇಶಾಂಗ ವ್ಯವಹಾರ ಖಾತೆ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.