![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನೀವು ಅಮೆರಿಕದಲ್ಲಿ ಜನಿಸಿಲ್ಲವೇ? ಹೊಸ ಕಾಯ್ದೆ ಜಾರಿಗೆ ತರಲು ಚಿಂತನೆ!
Team Udayavani, Oct 30, 2018, 6:47 PM IST
![trump.jpg](https://www.udayavani.com/wp-content/uploads/2018/10/30/trump.jpg)
ವಾಷಿಂಗ್ಟನ್:ಅಮೆರಿಕದ ನೆಲದಲ್ಲಿ ಜನಿಸಿದ ಮಕ್ಕಳಿಗೆ ಹಾಗೂ ಅಕ್ರಮ ವಲಸಿಗ ನಿವಾಸಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಫ್, ಅಮೆರಿಕದಲ್ಲಿ ಜನಿಸಿದವರಿಗೆ ಮಾತ್ರ ದೇಶದ ಪ್ರಜೆ ಎಂಬ ಹಕ್ಕನ್ನು ನೀಡುವ ಕಾನೂನು ಜಾರಿಗೆ ತರುವ ಚಿಂತನೆಯಲ್ಲಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಅಮೆರಿಕದ ಪ್ರಸ್ತುತ ಕಾಯ್ದೆ ಪ್ರಕಾರ, ಬೇರೆ ದೇಶದ ಮಕ್ಕಳು, ಅಕ್ರಮ ವಲಸಿಗರು ಯಾರೇ ಆಗಿರಲಿ ಅವರು ಸ್ವಯಂ ಆಗಿ ಅಮೆರಿಕದ ಪ್ರಜೆಯಾಗುವ ಹಕ್ಕನ್ನು ಪಡೆಯುತ್ತಾರೆ. ಆದರೆ ಟ್ರಂಫ್ ಇದೀಗ ಸ್ವಯಂ ಘೋಷಿತ ಅಮೆರಿಕ ಪ್ರಜೆ ಎಂದುಕೊಳ್ಳುವವರಿಗೆ ಮತ್ತು ಅಕ್ರಮ ವಲಸಿಗರಿಗೆ ಕಡಿವಾಣ ಹಾಕಲು ಮುಂದಾಗಿರುವುದಾಗಿ ವರದಿ ಹೇಳಿದೆ.
ಯಾವುದೇ ದೇಶದ ಮಗು ಇರಲಿ ಅದು ಇಲ್ಲಿ ಬೆಳೆಯುತ್ತಾ ದೇಶದ ನಾಗರಿಕ ಹಕ್ಕು ಮತ್ತು ಎಲ್ಲಾ ಸೌಲಭ್ಯ ಪಡೆದುಕೊಳ್ಳುವ ಅವಕಾಶ ಇರುವ ಜಗತ್ತಿನ ಒಂದೇ ಒಂದು ದೇಶವೆಂದರೆ ಅದು ಅಮೆರಿಕ ಮಾತ್ರ ಎಂದು ಟ್ರಂಫ್ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಇದು ನಿಜಕ್ಕೂ ತುಂಬಾ ಹಾಸ್ಯಾಸ್ಪದ ವಿಚಾರ. ಇದಕ್ಕೆ ಅಂತ್ಯ ಹಾಡಲೇಬೇಕಿದೆ ಎಂದು ಹೇಳಿದ್ದಾರೆ. ಪ್ರತಿವರ್ಷ ವಿಸಿಟಿಂಗ್ ವೀಸಾದಲ್ಲಿ ಬಂದ ಸಾವಿರಾರು ಮಕ್ಕಳ ಪೋಷಕರು ಅಮೆರಿಕದ ಪ್ರಜೆಗಳಾಗುತ್ತಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.