ಜಗತ್ತಿನ ನೇತೃತ್ವ ವಹಿಸಲು ಅಮೆರಿಕ ಮತ್ತೆ ಸಿದ್ಧ: ಬೈಡೆನ್
Team Udayavani, Nov 26, 2020, 1:58 AM IST
ವಾಷಿಂಗ್ಟನ್/ಟೆಹರಾನ್: ಜಗತ್ತಿನ ನಾಯಕತ್ವ ವಹಿಸಲು ಅಮೆರಿಕ ಸಿದ್ಧವಿದೆ ಎಂದು ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. “ಅಮೆರಿಕ ಈಸ್ ಬ್ಯಾಕ್’ ಎಂದು ಹೇಳಿರುವ ಅವರು ತಮ್ಮ ನೇತೃತ್ವದ ಸರಕಾರ ಮತ್ತೆ ಜಗತ್ತಿನ ನಾಯಕತ್ವ ವಹಿಸಲು ಸಿದ್ಧವಿದೆ ಎಂದು ಹೇಳಿದ್ದಾರೆ. ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರಕಾರ ಹೊಂದಿರುವ ನಿರ್ಧಾರಗಳಲ್ಲಿ ಆಮೂಲಾಗ್ರ ಬದಲಾವಣೆಯಾಗುತ್ತದೆ ಎಂದು ಮತ್ತೂಮ್ಮೆ ಬೈಡೆನ್ ಸುಳಿವು ನೀಡಿದ್ದಾರೆ.
ಡೆಲವೇರ್ನಲ್ಲಿ ಮಾತನಾಡಿದ ಅವರು, ನಮ್ಮ ವೈರಿಗಳಿಂದ ಎದುರಾ ಗುವ ಸವಾಲು ಎದುರಿಸಲು ಸಿದ್ಧರಿ ದ್ದೇವೆ. ಜತೆಗೆ ಮಿತ್ರರನ್ನೂ ತಿರಸ್ಕರಿಸಲು ಸಿದ್ಧರಾಗಿಲ್ಲ. ಜತೆಗೆ ನಮ್ಮ ಮೌಲ್ಯಗಳನ್ನು ಎತ್ತಿ ಹಿಡಿಯಲೂ ಬದ್ಧವಾಗಿದ್ದೇವೆ ಎಂದು ಹೇಳಿದ್ದಾರೆ. ಜಗತ್ತಿನ ಹಲವು ನಾಯಕರು ಇದನ್ನೇ ಬಯಸುತ್ತಿದ್ದಾರೆ. ಫೆಸಿಫಿಕ್ನಿಂದ ಅಟ್ಲಾಂಟಿಕ್ ವರೆಗೆ ಮತ್ತು ಜಗತ್ತಿನಾದ್ಯಂತ ಇದೇ ಅಭಿಪ್ರಾ ಯವಿದೆ ಎಂದು ಬೈಡೆನ್ ಪ್ರತಿಪಾದಿ ಸಿದರು. ಇದೇ ಕಾರ್ಯಕ್ರಮದಲ್ಲಿ ತಮ್ಮ ನೇತೃತ್ವದ ಸಚಿವ ಸಂಪುಟದಲ್ಲಿ ಅಧಿಕಾರ ನಡೆಸಲಿರುವ ಆರು ಮಂದಿಯನ್ನೂ ಅವರು ಪರಿಚಯಿಸಿದರು. ಇಂಥ ಸಂಕಷ್ಟಮಯ ಸಂದರ್ಭದಲ್ಲಿ ಆಡಳಿತದ ಹೊಸ ತಂಡದ ಜತೆಗೆ ಭೇಟಿಯಾಗುವುದು ಮಹತ್ವ ಪಡೆದಿದೆ ಎಂದರು ಬೈಡೆನ್. ಮೈತ್ರಿ ರಾಷ್ಟ್ರಗಳ ಜತೆಗೆ ಹೊಸ ತಂಡದ ಜತೆಗೆ ಕೆಲಸ ಮಾಡುವ ವೇಳೆ ನಾನು ಹೊಂದಿರುವ ನಂಬುಗೆಯಂತೆ ಕೆಲಸ ಮಾಡಲಿದ್ದಾರೆ ಎಂಬ ನಂಬುಗೆ ಹೊಂದಿದ್ದೇನೆ ಎಂದು ಹೇಳಿದ್ದಾರೆ.
ಕೊನೆಗೂ ಕ್ಸಿ ಅಭಿನಂದನೆ
ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ಗೆ ಚೀನ ಅಧ್ಯಕ್ಷ ಜೋ ಬೈಡೆನ್ ಬುಧವಾರ ಅಭಿನಂದನೆ ಸಲ್ಲಿಸಿದ್ದಾರೆ. ಎರಡೂ ದೇಶಗಳ ನಡುವೆ ಮುಂದಿನ ದಿನಗಳಲ್ಲಿ ಸಂಘರ್ಷ ರಹಿತ ವಾತಾವರಣದಲ್ಲಿ ಬಾಂಧವ್ಯ ಇರುವಂತಾಗಲಿ ಎಂದು ಹಾರೈಸಿದ್ದಾರೆ. ಇದರಿಂದಾಗಿ ಎರಡೂ ದೇಶಗಳ ಜನರಿಗೆ ಅನುಕೂಲವಾಗಿಯೂ ಪರಿಣಮಿಸಲಿದೆ. ಚೀನ ಉಪಾಧ್ಯಕ್ಷ ವಾಂಗ್ ಕ್ವಿಶಾನ್ ಕೂಡ ನಿಯೋಜಿತ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರಿಗೆ ಅಭಿನಂದನೆಯ ಸಂದೇಶ ನೀಡಿದ್ದಾರೆ.
ರೊಹಾನಿಗೆ ವಿಶ್ವಾಸ:
ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ಇದ್ದ ಇರಾನ್ ಬಗೆಗಿನ ಅಮೆರಿಕದ ನಿಲುವನ್ನು ಬೈಡೆನ್ ಮುಂದುವರಿಸಲಿದ್ದಾರೆ ಎಂದು ಅಲ್ಲಿನ ಅಧ್ಯಕ್ಷ ಹಸನ್ ರೊಹಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2017 ಜ.20ರಿಂದ ಮೊದಲು ಅಂದರೆ ಬರಾಕ್ ಒಬಾಮ ಅವಧಿಯಲ್ಲಿ ಜಾರಿಯಾಗಿದ್ದ ಪರಮಾಣು ಒಪ್ಪಂದ ಮತ್ತೆ ಜಾರಿಯಾದರೆ ಎಲ್ಲಾ ಸಮಸ್ಯೆಗಳೂ ಬಗೆ ಹರಿಯುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ