ಲಡಾಖ್‌ನಲ್ಲಿ ಚೀನ ನಡೆ ಮೇಲೆ ಅಮೆರಿಕ ನಿಗಾ


Team Udayavani, Jun 3, 2020, 8:27 AM IST

ಲಡಾಖ್‌ನಲ್ಲಿ ಚೀನ ನಡೆ ಮೇಲೆ ಅಮೆರಿಕ ನಿಗಾ

ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಭಾರತದ ಗಡಿಯಲ್ಲಿನ ಚೀನ ಸೇನೆಯ ತಂಟೆಗಳನ್ನು ಅಮೆರಿಕ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. “ಭಾರತದ ಎಲ್‌ಎಸಿಯ ಉತ್ತರ ಭಾಗದತ್ತ ಚೀನ ಹೆಚ್ಚು ಸೈನಿಕರನ್ನು ನಿಯೋಜಿಸಿದೆ. ಸರ್ವಾಧಿಕಾರಿ ಆಡಳಿತ ಮಾತ್ರ ಇಂಥ ವರ್ತನೆ ಪ್ರದರ್ಶಿಸುತ್ತದೆ’ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ, ಚೀನಕ್ಕೆ ಚಾಟಿ ಬೀಸಿದ್ದಾರೆ. “ಭಾರತದ ಜತೆಗಿನ ಗಡಿಸಂಬಂಧ ಸ್ಥಿರವಾಗಿದೆ. ನಮ್ಮ ನಡುವೆ ಯಾರ ಮಧ್ಯಪ್ರವೇಶವೂ ಬೇಡ’ ಎಂದು ಚೀನ ಹೇಳಿಕೊಂಡ ಬೆನ್ನಲ್ಲೇ, ಅಮೆರಿಕ ಉನ್ನತ ಮಟ್ಟದ ಅಧಿಕಾರಿಗಳು, ಸಂಸದರು ಭಾರತದ ಪರ ಬ್ಯಾಟಿಂಗ್‌ ಮಾಡುತ್ತಿದ್ದಾರೆ.

“ವುಹಾನ್‌ನಲ್ಲಿ ಆರಂಭಗೊಂಡ ಕೋವಿಡ್ ಸೋಂಕಿನ ಬಗ್ಗೆ ಇಡೀ ವಿಶ್ವ ತಿರುಗಿಬಿದ್ದಿದೆ. ಕೊರೊನಾ ಬಿಕ್ಕಟನ್ನು ಮರೆಮಾಚಲು ಚೀನ ಈಗ ಗಡಿನಾಟಕ ಆಡುತ್ತಿದೆ. ಹಾಂಕಾಂಗ್‌ ಜನರ ಸ್ವಾತಂತ್ರ್ಯ ದಮನಕ್ಕೂ ಕೈಹಾಕಿದೆ’ ಎಂದು ಹೇಳಿದ್ದಾರೆ. “ಇವು ಚೀನದ ವರ್ತನೆಯ ಎರಡು ತುಣುಕುಗಳಷ್ಟೇ. ಬೌದ್ಧಿಕ ಆಸ್ತಿ ಕದಿಯುವುದು, ದಕ್ಷಿಣಾ ಚೀನ ಸಮುದ್ರದಲ್ಲಿ ಮಿಲಿಟರಿ ಶಕ್ತಿ ಹೆಚ್ಚಿಸುವ ಅದರ ಕುತಂತ್ರಗಳು ಇನ್ನೂ ಬೇಕಾ ದಷ್ಟಿವೆ. ಕಳೆದ 6 ತಿಂಗಳಿಂದ ಚೀನ ಮಿಲಿಟರಿ ವರ್ತನೆಗಳನ್ನು ನೋಡುತ್ತಲೇ ಬಂದಿದ್ದೇವೆ’ ಎಂದು ಕಿಡಿಕಾರಿದ್ದಾರೆ.

ನೆರೆ ರಾಷ್ಟ್ರವನ್ನು ಹೆದರಿಸುವಿರೇಕೆ?: ನೆರೆ ಹೊರೆಯ ದೇಶಗಳನ್ನು ಬೆದರಿಸುವ ಚೀನ ಬುದ್ಧಿಗೆ ಅಮೆರಿಕದ ಸಂಸದ ಈಲಿಯಟ್‌ ಎಂಗೆಲ್‌ ಛೀಮಾರಿ ಹಾಕಿದ್ದಾರೆ. “ಗಡಿ ಸಮಸ್ಯೆ ವಿಚಾರದಲ್ಲಿ ಚೀನ ಆಕ್ರಮಣಕಾರಿ ಬುದ್ಧಿ ಬಿಟ್ಟು, ರಾಜ ತಾಂತ್ರಿಕ ಹಾದಿಯಲ್ಲಿ ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

ಕೊಂಚ ತಗ್ಗಿದ ಟೆನ್ಷನ್‌
ಲಡಾಖ್‌ ಗಡಿಯಲ್ಲಿ ಕಳೆದ 3 ವಾರಗಳಿಗೆ ಹೋಲಿಸಿದರೆ ಉದ್ವಿಗ್ನತೆ ಕೊಂಚ ತಗ್ಗಿದೆ. ಆದರೆ, ಗಲ್ವಾನ್‌ ನದಿಯ ತೀರದಲ್ಲಿ ಉಭಯ ರಾಷ್ಟ್ರಗಳ ಸೈನಿಕರು ಜಮಾವಣೆ ಆಗಿದ್ದರೂ ಯಾವುದೇ ಪ್ರಚೋದನೆಗಳು ಕಂಡುಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ. ಗಡಿ ವಾತಾವರಣ ಸಹಜ ಸ್ಥಿತಿಗೆ ಮರಳಲು ಕೆಲವು ವಾರ ಅಥವಾ ತಿಂಗಳು ಕಾಲಾವಕಾಶ ಬೇಕಾಗಬ ಹುದು. ರಾಜತಾಂತ್ರಿಕ ಮಟ್ಟದಲ್ಲಿ ಗಡಿ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ರಾಷ್ಟ್ರಗಳ ಮುಖಂಡರು ಯತ್ನಿಸುತ್ತಿದ್ದಾರೆ. ಸಂಘರ್ಷದಿಂದ ಗಡಿ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎನ್ನುವುದು ಸೈನಿಕರಿಗೂ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.