ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ : ಪಾಕ್‌ಗೆ ಕಮಲಾ  ತಾಕೀತು


Team Udayavani, Sep 25, 2021, 7:00 AM IST

ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ : ಪಾಕ್‌ಗೆ ಕಮಲಾ  ತಾಕೀತು

ವಾಷಿಂಗ್ಟನ್: ಜಗತ್ತಿನಾದ್ಯಂತ ಪ್ರಜಾಸತ್ತೆಗೆ  ಎದುರಾಗಿರುವ ಅಪಾಯ, ಉಗ್ರರಿಗೆ ಪಾಕಿಸ್ಥಾನದ ಆಶ್ರಯ, ಅಫ್ಘಾನಿಸ್ಥಾನದ ಪರಿಸ್ಥಿತಿ, ಭಾರತ-ಅಮೆರಿಕ ವ್ಯೂಹಾತ್ಮಕ ಪಾಲುದಾರಿಕೆ…

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಉಪಾಧ್ಯಕ್ಷೆ, ಭಾರತೀಯ ಮೂಲದ ಕಮಲಾ ಹ್ಯಾರಿಸ್‌ ಅವರೊಂದಿಗೆ ನಡೆಸಿದ ದ್ವಿಪಕ್ಷೀಯ ಮಾತುಕತೆ ವೇಳೆ ಪ್ರಸ್ತಾವವಾದ  ವಿಚಾರಗಳಿವು.

ಎರಡೂ ದೇಶಗಳ ಹಿತಾಸಕ್ತಿಗೆ ಸಂಬಂಧ ಹೊಂದಿರುವ ಜಾಗತಿಕ ವಿಚಾರಗಳ ಕುರಿತು ಇಬ್ಬರೂ ಶ್ವೇತಭವನದಲ್ಲಿ ಸುದೀರ್ಘ‌ ಮಾತುಕತೆ ನಡೆಸಿದ್ದಾರೆ. ಮೋದಿ ಜತೆಗಿನ ಚೊಚ್ಚಲ ಭೇಟಿ ವೇಳೆ “ಭಯೋತ್ಪಾದನೆಯಲ್ಲಿ ಪಾಕಿಸ್ಥಾನದ ಪಾತ್ರ’ದ ಕುರಿತು ಸ್ವಯಂಪ್ರೇರಿತರಾಗಿ ಮಾತನಾಡಿದ ಕಮಲಾ, “ಪಾಕಿಸ್ಥಾನವು ಹಲವು ಉಗ್ರ ಸಂಘಟನೆಗಳಿಗೆ ಆಶ್ರಯ ತಾಣವಾಗಿದ್ದು, ಆ ಸಂಘಟನೆಗಳಿಂದ ಭಾರತ ಮತ್ತು ಅಮೆರಿಕದ ಭದ್ರತೆಗೆ ಅಪಾಯವಾಗದಂತೆ ಕೂಡಲೇ ಅವುಗಳ ವಿರುದ್ಧ ಪಾಕಿಸ್ಥಾನವು ಕ್ರಮ ಕೈಗೊಳ್ಳಬೇಕು’ ಎಂದು ಪಾಕ್‌ಗೆ ತಾಕೀತು ಮಾಡಿದ್ದಾರೆ.

ಪ್ರಜಾಸತ್ತೆಗೆ ಅಪಾಯ: ಜಗತ್ತಿನಾದ್ಯಂತ ಇರುವ ಪ್ರಜಾಸತ್ತೆಗಳಿಗೆ ಅಪಾಯ ಎದುರಾಗಿರುವ ಕುರಿತು ಪ್ರಸ್ತಾಪಿಸಿದ ಕಮಲಾ, ನಾವು ನಮ್ಮ ನಮ್ಮ ದೇಶಗಳಲ್ಲಿ ಪ್ರಜಾಸತ್ತಾತ್ಮಕ ತತ್ವಗಳು ಹಾಗೂ ಸಂಸ್ಥೆಗಳನ್ನು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ದೇಶದ ನಾಗರಿಕರ ಹಿತದೃಷ್ಟಿಯಿಂದ ಪ್ರಜಾಪ್ರಭುತ್ವಗಳನ್ನು ಬಲಿಷ್ಠಗೊಳಿಸಬೇಕಾದ ಅನಿವಾರ್ಯತೆಯಿದೆ ಎಂದೂ ಹೇಳಿದ್ದಾರೆ.

ಆಸ್ಟ್ರೇಲಿಯಾ, ಜಪಾನ್ ಪಿಎಂಗಳೊಂದಿಗೆ ಚರ್ಚೆ: ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು  ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌ ಮತ್ತು ಜಪಾನ್‌ ಪ್ರಧಾನಿ ಯೊಶಿಹಿಡೆ ಸುಗಾ ಅವರೊಂದಿಗೂ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ವಿಶ್ವಾಸಾರ್ಹ ಬಾಂಧವ್ಯ, ತಂತ್ರಜ್ಞಾನಗಳ ವಿನಿಮಯ, ಉತ್ಪಾದನೆ ಮತ್ತು ಕೌಶಲಾಭಿವೃದ್ಧಿಯಲ್ಲಿ ಹೊಸ ಪಾಲುದಾರಿಕೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ.

ಭಾರತ ನಿಮಗಾಗಿ ಕಾಯುತ್ತಿದೆ… :

ಕಮಲಾ ಅವರು “ಜಗತ್ತಿನ ಅನೇಕರಿಗೆ ಸ್ಫೂರ್ತಿಯ ಸೆಲೆ’ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ದ್ವಿಪಕ್ಷೀಯ ಮಾತುಕತೆ ಬಳಿಕ ನಡೆದ ಜಂಟಿ ಸುದ್ದಿಗೋಷ್ಠಿಯ ವೇಳೆ ಮೋದಿ ಈ ಮಾತುಗಳನ್ನಾಡಿದ್ದಾರೆ. “ನೀವು ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಐತಿಹಾಸಿಕ ವಿಚಾರ. ಅಧ್ಯಕ್ಷ ಬೈಡೆನ್‌ ಹಾಗೂ ನಿಮ್ಮ ನಾಯಕತ್ವದಡಿ ಭಾರತ ಮತ್ತು ಅಮೆರಿಕದ ಸಂಬಂಧವು ಇನ್ನಷ್ಟು ಎತ್ತರಕ್ಕೇರಲಿ ಎಂದು ನಾನು ಬಯಸುತ್ತೇನೆ’ ಎಂದೂ ಮೋದಿ ಹೇಳಿದ್ದಾರೆ. ಜತೆಗೆ “ಭಾರತವು ನಿಮ್ಮನ್ನು ಸ್ವಾಗತಿಸಲು ಕಾಯುತ್ತಿದೆ. ನೀವು ಮತ್ತು ನಿಮ್ಮ ಪತಿ ಡಗ್ಲಾಸ್‌ ಎಮೊØàಫ್ ಅವರು ಭಾರತಕ್ಕೆ ಭೇಟಿ ನೀಡಬೇಕೆಂದು ನಾನು ಈ ಮೂಲಕ ಆಮಂತ್ರಿಸುತ್ತಿದ್ದೇನೆ’ ಎಂದೂ ಮೋದಿ ಹೇಳಿದ್ದಾರೆ.

ಕಮಲಾ, ಮಾರಿಸನ್, ಸುಗಾಗೆ ಮೋದಿ ವಿಶೇಷ ಗಿಫ್ಟ್ :

ಪ್ರಧಾನಿ ಮೋದಿ ಅವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್‌ ಮಾರಿಸನ್‌, ಜಪಾನ್‌ ಪ್ರಧಾನಿ ಯೋಶಿಹಿಡೆ ಸುಗಾ ಅವರಿಗೆ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಕಮಲಾ ಅವರ ತಾತ ಪಿ.ವಿ. ಗೋಪಾಲನ್‌ ಅವರು ಭಾರತ ಸರಕಾರದ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಅವರಿಗೆ ಸಂಬಂಧಿಸಿದ ಹಳೆಯ ನೋಟಿಫಿಕೇಶನ್‌ನ ಪ್ರತಿಯನ್ನು ಮರದ ಕೆತ್ತನೆಯುಳ್ಳ ಫ್ರೆàಮ್‌ಗೆ ಅಳವಡಿಸಿ ವಿಶೇಷ ಸ್ಮರಣಿಕೆಯನ್ನಾಗಿಸಿ ಕಮಲಾರಿಗೆ ಗಿಫ್ಟ್ ಕೊಟ್ಟಿದ್ದಾರೆ ಮೋದಿ. ಅದರ ಜತೆಗೆ “ಗುಲಾಬಿ ಮೀನಕಾರಿ ಚೆಸ್‌ ಸೆಟ್‌’ ಅನ್ನೂ ಉಡುಗೊರೆಯನ್ನಾಗಿ ನೀಡಿದ್ದಾರೆ. ಇನ್ನು, ಆಸ್ಟ್ರೇಲಿಯಾ ಪ್ರಧಾನಿ ಮಾರಿಸನ್‌ಗೆ ಜಗತ್ತಿನ ಅತಿ ಪುರಾತನ ನಗರಗಳಲ್ಲಿ ಒಂದಾದ ಕಾಶಿಯ ವೈಭವವನ್ನು ಪ್ರತಿಬಿಂಬಿಸುವ ಬೆಳ್ಳಿಯ ಗುಲಾಬಿ ಮೀನಕಾರಿ ನೌಕೆಯ ಪ್ರತಿಕೃತಿಯನ್ನು ನೀಡಲಾಗಿದೆ. ಜಪಾನ್‌ ಪ್ರಧಾನಿ ಸುಗಾ ಅವರಿಗೆ ಚಂದನದ ಬುದ್ಧನ ಪ್ರತಿಮೆಯನ್ನು ಮೋದಿ ಉಡುಗೊರೆಯಾಗಿ ನೀಡಿದ್ದಾರೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.