ಯುದ್ಧದಲ್ಲಿ ಗೆಲುವು ನಮ್ಮದೇ: ಉಕ್ರೇನ್‌, ರಷ್ಯಾ ವಿಶ್ವಾಸ

ಯುದ್ಧಕ್ಕೆ ವರ್ಷ ಪೂರ್ಣಗೊಂಡ ಹಿನ್ನೆಲೆ ನಾಗರಿಕರನ್ನು ಉದ್ದೇಶಿಸಿ ಪುಟಿನ್‌, ಝೆಲೆನ್‌ಸ್ಕಿ ಭಾಷಣ

Team Udayavani, Feb 25, 2023, 7:35 AM IST

ಯುದ್ಧದಲ್ಲಿ ಗೆಲುವು ನಮ್ಮದೇ: ಉಕ್ರೇನ್‌, ರಷ್ಯಾ ವಿಶ್ವಾಸ

ಮಾಸ್ಕೊ: ರಷ್ಯಾ-ಉಕ್ರೇನ್‌ ಯುದ್ಧ ಆರಂಭವಾಗಿ ಶುಕ್ರವಾರಕ್ಕೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ತಮ್ಮ ತಮ್ಮ ದೇಶದ ನಾಗರಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಯುದ್ಧದಲ್ಲಿ ಗೆಲುವು ತಮ್ಮದೇ ಎಂದು ಉಭಯ ನಾಯಕರು ಘೋಷಿಸಿದ್ದಾರೆ.

ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ, ಕಳೆದ ಒಂದು ವರ್ಷದಿಂದ ರಷ್ಯಾ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಉಕ್ರೇನ್‌ ಯೋಧರ ಧೈರ್ಯ ಹಾಗೂ ನಾಗರಿಕರ ಸಹಕಾರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. “ಕಳೆದ ವರ್ಷ ಫೆ.24ರಂದು ಉಕ್ರೇನ್‌ ನಾಗರಿಕರಾದ ನಾವೆಲ್ಲರೂ ನಮ್ಮ ರಾಷ್ಟ್ರ ಧ್ವಜವನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಿದೆವು. ಓಡಿ ಹೋಗದೇ, ನಿಂತು ಎದುರಿಸಿದೆವು. ವಿರೋಧಿಸಿದೆವು ಮತ್ತು ಹೋರಾ ಡಿದೆವು. ಇದು ನೋವು, ದುಃಖ, ನಂಬಿಕೆ ಮತ್ತು ಏಕತೆಯ ವರ್ಷವಾಗಿತ್ತು. ಈ ವರ್ಷ ನಾವು ಅಜೇಯರಾಗಿ ಉಳಿದೆವು. 2023ರಲ್ಲಿ ನಾವು ಈ ಯುದ್ಧದಲ್ಲಿ ಜಯಶೀಲರಾಗಲಿದ್ದೇವೆ,’ ಎಂದು ಅವರು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಇನ್ನೊಂದೆಡೆ ರಷ್ಯಾ ಅಧ್ಯಕ್ಷ ಪುಟಿನ್‌ ಮಾತನಾಡಿ, ಉಕ್ರೇನ್‌ ವಿರುದ್ಧ ರಷ್ಯಾ ಗೆಲುವು ಶತಃಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. “ಅಗತ್ಯಬಿದ್ದರೆ ರಷ್ಯಾ ಸೇನೆಯು ಪೋಲೆಂಡ್‌ ಗಡಿಯವರೆಗೆ ಉಕ್ರೇನ್‌ ಅನ್ನು ಹಿಮ್ಮೆಟ್ಟಿಸಲಿದೆ. ಉಕ್ರೇನ್‌ ವಿರುದ್ಧ ವಿಶೇಷ ಮಿಲಿಟರಿ ಕಾರ್ಯಾ ಚರಣೆಯ ಉದ್ದೇಶಗಳನ್ನು ಸಾಧಿಸುವುದು ಅಗತ್ಯ,’ ಎಂದು ರಷ್ಯಾ ಮಾಜಿ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್‌ ಹೇಳಿದ್ದಾರೆ.

ನೀಲಿ-ಹಳದಿ ಲೈಟಿಂಗ್‌: ಯುದ್ಧಕ್ಕೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಪ್ಯಾರಿಸ್‌ನ ಐಫೆಲ್‌ ಟವರ್‌, ಬೆಲ್ಜಿಯಂನ ಬ್ರುಸೆಲ್ಸ್‌ನಲ್ಲಿ ಐರೋಪ್ಯ ಒಕ್ಕೂಟದ ಕಟ್ಟಡಗಳು ಮತ್ತು ಸಂಸತ್‌ ಅನ್ನು ಉಕ್ರೇನ್‌ ರಾಷ್ಟ್ರ ಧ್ವಜದ ಬಣ್ಣವಾದ ನೀಲಿ ಮತ್ತ ಹಳದಿ ಬಣ್ಣದ ಲೈಟಿಂಗ್‌ನಿಂದ ಆಲಂಕರಿಸಲಾಗಿತ್ತು.

ಮಹಾತ್ಮ ಗಾಂಧಿ ಸಂದೇಶ ಪಾಲಿಸಿ
ಉಕ್ರೇನ್‌-ರಷ್ಯಾ ಯುದ್ಧಕ್ಕೆ ಒಂದು ವರ್ಷದ ಸಂದರ್ಭದಲ್ಲೇ ವಿಶ್ವಸಂಸ್ಥೆಯಲ್ಲಿ ಭಾರತ, ಮಹಾತ್ಮ ಗಾಂಧಿ ಅವರು ಕುರಿತು “ಗಾಂಧಿಯನ್‌ ಟ್ರಸ್ಟಿಶಿಪ್‌: ಮಿಷನ್‌ ಲೈಫ್ ಆ್ಯಂಡ್‌ ಹ್ಯೂಮನ್‌ ಫ್ಲೋರಿಶಿಂಗ್‌’ ಎಂಬ ಉನ್ನತ ಮಟ್ಟದ ಸಂವಾದ ಏರ್ಪಡಿಸಿತ್ತು. ಇಂದಿನ ದಿನದಲ್ಲಿ ರಾಷ್ಟ್ರಗಳು ಮಹಾತ್ಮ ಗಾಂಧಿ ಅವರ ಶಾಂತಿ, ನಂಬಿಕೆಯ ಉನ್ನತ ಆರ್ದಶಗಳನ್ನು ಪಾಲಿಸಬೇಕು ಎಂಬ ಸಂದೇಶ ಸಾರಲಾಯಿತು. ಇನ್ನೊಂದೆಡೆ, ಉಕ್ರೇನ್‌ ಯುದ್ಧ ಖಂಡಿಸಿ, ರಷ್ಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಈ ವೇಳೆ ಭಾರತ ಹಿಂದಿನಂತೆ ತಟಸ್ಥವಾಗಿ ಉಳಿಯಿತು.

ಭಾರತ ಮೂಲದ ಬಾಲಕ ಸಹಾಯಹಸ್ತ
ರಷ್ಯಾ ಯುದ್ಧದಿಂದಾಗಿ ಸಾವಿರಾರು ಉಕ್ರೇನ್‌ ನಿರಾಶ್ರಿತರು ಪೋಲೆಂಡ್‌ಗೆ ತೆರಳಿ ಅಲ್ಲಿ ನೆಲೆಸಿದ್ದಾರೆ. ಇವರ ಸಹಾಯಕ್ಕಾಗಿ ಭಾರತ ಮೂಲದ 10 ವರ್ಷದ ಬಾಲಕ, ತನ್ನ ಪೋಷಕರೊಂದಿಗೆ ಪೋಲೆಂಡ್‌ಗೆ ಭೇಟಿ ನೀಡಿ, ಅಲ್ಲಿರುವ ಉಕ್ರೇನ್‌ ಮಕ್ಕಳಿಗೆ ಪುಸ್ತಕಗಳು ಹಾಗೂ ಇತೆರೆ ಸ್ಟೇಷನರಿ ವಸ್ತುಗಳನ್ನು ತಲುಪಿಸಿದ್ದಾನೆ. ಇಂಗ್ಲೆಂಡ್‌ನ‌ ಬೋಲ್ಟನ್‌ ನಿವಾಸಿಯಾಗಿರುವ ಮಿಲನ್‌ ಪೌಲ್‌ ಕುಮಾರ್‌ ಇದಕ್ಕಾಗಿ ಸಾರ್ವಜನಿಕರಿಂದ ಪುಸ್ತಕಗಳನ್ನು ಸಂಗ್ರಹಿಸಿ, ಪೋಲೆಂಡ್‌ನ‌ ಕ್ರಾಕೋವ್‌ ನಗರಕ್ಕೆ ಬಂದು ಹಂಚಿದ್ದಾನೆ.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.