Video: 3,000 ಲೀಟರ್ ಮದ್ಯವನ್ನು ಕಾಬೂಲ್ ಕಾಲುವೆಗೆ ಸುರಿದ ತಾಲಿಬಾನ್
ಮೂವರು ಡೀಲರ್ ಗಳನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ತಾಲಿಬಾನ್ ಪ್ರಕಟಣೆಯಲ್ಲಿ ತಿಳಿಸಿದೆ.
Team Udayavani, Jan 3, 2022, 12:55 PM IST
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಮದ್ಯ ಮಾರಾಟವನ್ನು ಬಂದ್ ಮಾಡಿಸುವ ನಿಟ್ಟಿನಲ್ಲಿ ಕಾರ್ಯಾಚರಣೆಗಿಳಿದ ಅಫ್ಘಾನ್ ನ ಗುಪ್ತಚರ ಇಲಾಖೆ ಅಧಿಕಾರಿಗಳು ಭಾನುವಾರ ಬರೋಬ್ಬರಿ ಮೂರು ಸಾವಿರ ಲೀಟರ್ ಮದ್ಯವನ್ನು ಕಾಬೂಲ್ ಕಾಲುವೆಗೆ ಸುರಿದ ಘಟನೆ ಭಾನುವಾರ (ಜನವರಿ 02) ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಇಂದಿನಿಂದ ಜೋಹಾನ್ಸ್ ಬರ್ಗ್ ಟೆಸ್ಟ್: ವಿರಾಟ್ ಪಂದ್ಯದಿಂದ ಔಟ್, ರಾಹುಲ್ ನೂತನ ನಾಯಕ
ರಾಜಧಾನಿಯಲ್ಲಿ ದಾಳಿ ನಡೆಸಿದ ವೇಳೆ ವಶಪಡಿಸಿಕೊಂಡಿದ್ದ ಆಲ್ಕೋಹಾಲ್ ಬ್ಯಾರೆಲ್ ಗಳನ್ನು ತಾಲಿಬಾನ್ ಆಡಳಿತದ ಗುಪ್ತಚರ ಇಲಾಖೆಯ ಏಜೆಂಟ್ಸ್ ಗಳು ಕಾಲುವೆಗೆ ಸುರಿಯುತ್ತಿರುವ ವಿಡಿಯೋ ಫೂಟೇಜ್ ಅನ್ನು ಜಿಡಿಐ(ಜನರಲ್ ಡೈರೆಕ್ಟೋರೇಟ್ ಆಫ್ ಇಂಟೆಲಿಜೆನ್ಸ್) ಬಿಡುಗಡೆಗೊಳಿಸಿದ್ದಾರೆ.
د ا.ا.ا د استخباراتو لوی ریاست ځانګړې عملیاتي قطعې د یو لړ مؤثقو کشفي معلومات پر اساس د کابل ښار کارته چهار سیمه کې درې تنه شراب پلورونکي له شاوخوا درې زره لېتره شرابو/الکولو سره یو ځای ونیول.
نیول شوي شراب له منځه یوړل شول او شراب پلورونکي عدلي او قضايي ارګانونو ته وسپارل شول. pic.twitter.com/qD7D5ZIsuL— د استخباراتو لوی ریاست-GDI (@GDI1415) January 1, 2022
ಮುಸ್ಲಿಮರು ಮದ್ಯವನ್ನು ತಯಾರಿಸುವುದರಿಂದ ಮತ್ತು ಮಾರಾಟ ಮಾಡುವ ಕೆಲಸದಿಂದ ದೂರವಿರಬೇಕು ಎಂದು ಧಾರ್ಮಿಕ ಮುಖಂಡರೊಬ್ಬರು ತಿಳಿಸಿದ್ದಾರೆ. ಆದರೆ ಯಾವಾಗ ದಾಳಿ ನಡೆಸಲಾಯಿತು, ಯಾವಾಗ ಮದ್ಯವನ್ನು ಕಾಲುವೆಗೆ ಸುರಿದು ಹರಿಬಿಡಲಾಯ್ತು ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಕಾರ್ಯಾಚರಣೆ ವೇಳೆ ಮೂವರು ಡೀಲರ್ ಗಳನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ತಾಲಿಬಾನ್ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತ್ತು. ಆದರೆ ತಾಲಿಬಾನ್ ಸರ್ಕಾರ ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ