ವೀಸಾ ನೀತಿ ಉಲ್ಲಂಘನೆ: ಟಿಸಿಎಸ್‌, ಇನ್ಫೋಸಿಸ್‌ ವಿರುದ್ಧ ಅಮೆರಿಕ ಕಿಡಿ


Team Udayavani, Apr 24, 2017, 11:01 AM IST

24-PTI-8.jpg

ವಾಷಿಂಗ್ಟನ್‌: ಎಚ್‌-1ಬಿ ವೀಸಾ ವಿಚಾರಕ್ಕೆ ಸಂಬಂಧಿಸಿ ಭಾರತದ ಐಟಿ ದಿಗ್ಗಜರಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಮತ್ತು ಇನ್ಫೋಸಿಸ್‌ ಕಂಪೆನಿಗಳ ವಿರುದ್ಧ ಅಮೆರಿಕ ಗಂಭೀರ ಆರೋಪ ಮಾಡಿದೆ. ಈ ಎರಡೂ ಕಂಪೆನಿಗಳು ಲಾಟರಿ ಪ್ರಕ್ರಿಯೆಯಲ್ಲಿ ಕಾನೂನು ಬಾಹಿರವಾಗಿ ಹೆಚ್ಚುವರಿ ಟಿಕೆಟ್‌ಗಳನ್ನು ಹಾಕಿ ಹೆಚ್ಚೆಚ್ಚು ವೀಸಾ ಪಡೆಯುವ ಹುನ್ನಾರ ನಡೆಸಿವೆ ಎನ್ನುವುದು ಅಮೆರಿಕದ ಆರೋಪ. ಈ ಹಿನ್ನೆಲೆಯಲ್ಲಿ ಇದೀಗ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತ “ಅರ್ಹತೆ  ಆಧಾರಿತ ವಲಸೆ ನೀತಿ’ ಜಾರಿಗೆ ಮುಂದಾಗಿದೆ.

ಎಚ್‌-1 ಬಿ ವೀಸಾ ವಿಚಾರದಲ್ಲಿ ಕಳೆದ ವಾರ ಶ್ವೇತಭವನದ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ನೂತನ ವೀಸಾ ನೀತಿ ಜಾರಿಯ ಬಳಿಕ ಬೇಡಿಕೆ ಸಾಕಷ್ಟು ಹೆಚ್ಚುತ್ತಿದೆ. ಭಾರಿ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ಕಾರಣ ಲಾಟರಿ ಪ್ರಕ್ರಿಯೆ ಮೂಲಕ ನಿರ್ಧರಿಸಲು ಅತ್ಯಾಧುನಿಕ ಆ್ಯಪ್‌ ಅಭಿವೃದ್ಧಿಪಡಿಸಲಾಧಿಗುತ್ತಿದೆ ಎಂದು ಅಧಿಕೃತವಾಗಿಯೇ ಹೇಳಿದ್ದರು.

ಇದೀಗ ವೈಟ್‌ಹೌಸ್‌ ಹಿರಿಯ ಅಧಿಕಾರಿಯೊಬ್ಬರು, ಎಚ್‌-1ಬಿ ವೀಸಾ ಪಡೆದುಕೊಳ್ಳಲಿಕ್ಕಾಗಿ ಟಾಟಾ, ಇನ್ಫೋಸಿಸ್‌, ಕಾಗ್ನೆ„ಝೆಂಟ್‌ ಕಂಪೆನಿಗಳು ಹೆಚೆಚ್ಚು ಟಿಕೆಟ್‌ಗಳನ್ನು ಹಾಕಿವೆ. ಹೆಚ್ಚು ವೀಸಾಗಳಿಗಾಗಿ ಬೇಡಿಕೆ ಇಟ್ಟಿವೆ ಎಂದಿದ್ದಾರೆ. ಎಚ್‌-1ಬಿ ವೀಸಾಗಾಗಿ ಮುಗಿಬಿದ್ದಿರುವ ಭಾರತದ ಈ ಕಂಪೆನಿಗಳ ಸಿಬಂದಿ ಅಮೆರಿಕದಲ್ಲಿ ವರ್ಷಕ್ಕೆ ಅಂದಾಜು 38.79 ಲಕ್ಷ ರೂ.ನಿಂದ 42.02 ಲಕ್ಷ ರೂ. ವೇತನ ಪಡೆದುಕೊಳ್ಳುಧಿತ್ತಾರೆ. ಇನ್ನು ಸಿಲಿಕಾನ್‌ವ್ಯಾಲಿ ಸಾಫ್ಟ್ ವೇರ್‌ ಎಂಜಿನಿಯರ್‌ಗಳು ಹೆಚ್ಚಾ ಕಡಿಮೆ 96.97 ಲಕ್ಷ ರೂ. ವೇತನ ಪಡೆದುಕೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

38 ಭಾರತೀಯರು ವಶಕ್ಕೆ: ಏತನ್ಮಧ್ಯೆ, ವೀಸಾ ಅವಧಿ ಮುಗಿದರೂ ಅಲ್ಲೇ ಇದ್ದ ಹಾಗೂ ಅಕ್ರಮವಾಗಿ ಕೆಲಸ ಮಾಡುತ್ತಿದ್ದ 38 ಮಂದಿ ಭಾರತೀಯರನ್ನು ಬ್ರಿಟನ್‌ನ ವಲಸೆ ಅಧಿಕಾರಿಗಳು ರವಿವಾರ ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ 9 ಮಂದಿ ಮಹಿಳೆಯರೂ ಸೇರಿದ್ದಾರೆ. ಲೈಸೆಸ್ಟರ್‌ನ ಉಡುಪು ತಯಾರಿಕಾ ಕಂಪೆನಿ ಮೇಲೆ ದಾಳಿ ನಡೆಸಿ, ಇವರನ್ನು ವಶಕ್ಕೆ ಪಡೆಯಲಾಗಿದೆ.

ಟಿಸಿಎಸ್‌ನಿಂದ 11,500 ಮಂದಿ ಸ್ಥಳೀಯರ ನೇಮಕ
ಎಚ್‌-1ಬಿ ವೀಸಾ ಸಮಸ್ಯೆಯಿಂದ ಪಾರಾಗಲು ಟಿಸಿಎಸ್‌ 2016-17ನೇ ಸಾಲಿನಲ್ಲಿ ದೇಶದಿಂದಾಚೆ ಬರೋಬ್ಬರಿ 11,500 ಮಂದಿಯನ್ನು  ನೇಮಕ ಮಾಡಿಕೊಂಡಿದೆ. ಸ್ಥಳೀಯರ ಉದ್ಯೋಗಕ್ಕೆ ಆದ್ಯತೆ ನೀಡಬೇಕೆಂದು ಸರಕಾರ ಹೇಳಿರುವ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಬಿ-ಸ್ಕೂಲ್‌ ಮತ್ತು ಎಂಜಿನಿಯರಿಂಗ್‌ ಪದವೀಧರರನ್ನೇ ಹೆಚ್ಚಾಗಿ ನೇಮಕ ಮಾಡಲಾಗಿದೆ. 

11,500 ಜನರನ್ನು ಅಮೆರಿಕದಲ್ಲಿ ನೇಮಕ ಮಾಡಿಕೊಂಡಿದ್ದೇವೆ. ಕ್ಯಾಂಪಸ್‌ಗಳಿಂದ ಎಂಜಿನಿಯರ್‌ಗಳನ್ನು ಹಾಗೂ ಅಮೆರಿಕದ ಪ್ರಮುಖ 10 ಉದ್ಯಮ ತರಬೇತಿ ಶಾಲೆಗಳಿಂದ ಅನೇಕರನ್ನು ನೇಮಕ ಮಾಡಿಕೊಂಡಿದ್ದೇವೆ.
ರಾಜೇಶ್‌ ಗೋಪಿನಾಥನ್‌, ಟಿಸಿಎಸ್‌ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.