ದಾಳಿಯಲ್ಲಿ ಲಂಕಾ ದಾಳಿಯ ಶಂಕಿತ ರೂವಾರಿ ಝಹ್ರಾನ್ ಬಲಿ! ಸಿರಿಸೇನಾ
Team Udayavani, Apr 26, 2019, 2:24 PM IST
ಕೊಲಂಬೋ:ಶ್ರೀಲಂಕಾದ ಸರಣಿ ಬಾಂಬ್ ದಾಳಿಯಲ್ಲಿ ದಾಳಿಯ ಶಂಕಿತ ರೂವಾರಿ, ಮೂಲಭೂತವಾದಿ ನಾಯಕ ಝಹ್ರಾನ್ ಸಾವನ್ನಪ್ಪಿರುವುದಾಗಿ ಶ್ರೀಲಂಕಾ ಅಧ್ಯಕ್ಷ ಶುಕ್ರವಾರ ಖಚಿತಪಡಿಸಿದ್ದಾರೆ.
ಗುಪ್ತಚರ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಈಸ್ಟರ್ ಭಾನುವಾರದಂದು ಶಾಂಗ್ರಿ ಲಾ ಹೋಟೆಲ್ ಮೇಲಿನ ದಾಳಿಯಲ್ಲಿ ಝಹ್ರಾನ್ ಹಾಶೀಂ ಬಲಿಯಾಗಿದ್ದಾನೆ ಎಂದು ತಿಳಿಸಿರುವುದಾಗಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲಾ ಸಿರಿಸೇನಾ ಸುದ್ದಿಗಾರರ ಜೊತೆ ಮಾತನಾಡುತ್ತ ವಿವರಿಸಿದ್ದಾರೆ.
ಝಹ್ರಾನ್ ಹಾಶೀಂ ಸ್ಥಳೀಯ ಮೂಲಭೂತವಾದಿ ಗುಂಪಿನ ನಾಯಕನಾಗಿದ್ದ ಎಂದು ವರದಿ ಹೇಳಿದೆ. ಹೋಟೆಲ್ ಮೇಲಿನ ದಾಳಿಯ ಕುರಿತು ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುವ ವೇಳೆ ಹಾಶೀಂ ಬಲಿಯಾಗಿರುವುದು ಬೆಳಕಿಗೆ ಬಂದಿರುವುದಾಗಿ ಮಿಲಿಟರಿ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
300ಕ್ಕೂ ಅಧಿಕ ಜನರನ್ನು ಬಲಿತೆಗೆದುಕೊಂಡಿದ್ದ ಭೀಕರ ದಾಳಿಯ ಬಳಿಕ ಐಸಿಸ್ ಉಗ್ರಗಾಮಿ ಸಂಘಟನೆ ಹೊಣೆ ಹೊತ್ತು ಬಿಡುಗಡೆ ಮಾಡಿದ್ದ ವೀಡಿಯೋದಲ್ಲಿ ಹಾಶೀಂ ಕಾಣಿಸಿಕೊಂಡಿದ್ದ. ಆದರೆ ದಾಳಿ ನಡೆದ ನಂತರ ಹಾಶೀಂ ಎಲ್ಲಿದ್ದಾನೆ ಎಂಬುದು ಪತ್ತೆಯಾಗಿರಲಿಲ್ಲವಾಗಿತ್ತು. ಇದೀಗ ಹೋಟೆಲ್ ಸಿಸಿಟಿವಿ ಪರಿಶೀಲನೆ ವೇಳೆ ಹಾಶೀಂ ಸಾವನ್ನಪ್ಪಿರುವುದು ಖಚಿತವಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್