ಅಮೆರಿಕದ ನಗರಗಳಲ್ಲಿ ಈಗ ಯುದ್ಧದ ಛಾಯೆ!

ಪ್ರಮುಖ ನಗರಗಳಲ್ಲಿ ನ್ಯಾಷನಲ್‌ ಗಾರ್ಡ್‌ಗಳ ಭದ್ರತೆ

Team Udayavani, Jun 4, 2020, 8:27 AM IST

ಅಮೆರಿಕದ ನಗರಗಳಲ್ಲಿ ಈಗ ಯುದ್ಧದ ಛಾಯೆ!

ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ಮುಂಭಾಗದಲ್ಲಿ ಜಾರ್ಜ್‌ ಫ್ಲಾಯ್ಡ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.

ವಾಷಿಂಗ್ಟನ್‌: ವಿವಿಧ ನಗರಗಳ ಪ್ರಮುಖ ಜಂಕ್ಷನ್‌ಗಳಲ್ಲಿ ಬಂದು ನಿಂತ ಯುದ್ಧ ವಾಹನಗಳು, ರಸ್ತೆಗಳಲ್ಲಿ ಸಾಲಾಗಿ ಸಾಗುವ ರಕ್ಷಣಾ ಸಿಬಂದಿ ಹೊತ್ತ ಟ್ರಕ್‌ಗಳು, ಬೀದಿ ಬೀದಿಗೂ ಬಂದಿಳಿದ ಶಸ್ತ್ರ ಸಜ್ಜಿತ ನ್ಯಾಷನಲ್‌ ಗಾರ್ಡ್‌ ಸಿಬ್ಬಂದಿ… ಇದು ಅಮೆರಿಕದ ಹಲವು ನಗರಗಳಲ್ಲಿ ಮಂಗಳವಾರ ಕಂಡು ಬಂದ ದೃಶ್ಯ.

ಜಾರ್ಜ್‌ ಫ್ಲಾಯ್ಡ ಸಾವಿನ ಬಳಿಕ ಮೇ 25ರಿಂದ ಅಮೆರಿಕದಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆಯ ಪರಿಣಾಮವಿದು. ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವಂತೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಕರೆ ಕೊಟ್ಟ ಬೆನ್ನಲ್ಲೇ ಮಿನ್ನಿಯಾಪೊಲೀಸ್‌, ಲಾಸ್‌ ಎಂಜಲೀಸ್‌ ಮತ್ತಿತರ ನಗರಗಳಲ್ಲಿ ನ್ಯಾಷನಲ್‌ ಗಾರ್ಡ್‌ ಸಿಬ್ಬಂದಿ ಮೂಲಕ ವಿಶೇಷ ಭದ್ರತೆ ಒದಗಿಸಲಾಗಿದೆ. ಈ ನಡುವೆ ನ್ಯೂಯಾರ್ಕ್‌ ನಗರದಲ್ಲಿ ಪ್ರತಿಭಟನಾ ಕಾರರು ಮತ್ತು ಪೊಲೀಸರ ನಡುವಿನ ಸಂಘರ್ಷ ಮುಂದುವರಿದಿದೆ. ಮಂಗಳವಾರ ಸಂಜೆ ಕೂಡ ಸಾವಿರಾರು ಪ್ರತಿಭಟನಾಕಾರರು ಫ್ಲಾಯ್ಡ ಹತ್ಯೆ ಖಂಡಿಸಿ ಬೀದಿಗಿಳಿದರು. ವಿಶೇಷ ಭದ್ರತೆ ನಡುವೆಯೂ ಲಾಸ್‌ ಎಂಜಲೀಸ್‌, ಫಿಲಡೆಲ್ಫಿಯಾ, ಅಟ್ಲಾಂಟ ಮತ್ತು ಸೀಟೆಲ್‌ ನಗರಗಳಲ್ಲಿ ದೊಡ್ಡ ಮಟ್ಟದ ಜಾಥಾ ಮತ್ತು ಪ್ರತಿಭಟನಾ ರ್ಯಾಲಿಗಳು ನಡೆದವು. ಯುಎಸ್‌ ಕ್ಯಾಪಿಟಲ್‌ ಕಟ್ಟಡದ ಎದುರು ಸೇರಿದ ಪ್ರತಿಭಟನಾಕಾರರು, ರಾತ್ರಿಯಾದರೂ ಅಲ್ಲಿಂದ ಕದಲಲಿಲ್ಲ. ನ್ಯಾಷನಲ್‌ ಗಾರ್ಡ್‌ ಮಾತ್ರವಲ್ಲ ಟ್ರಂಪ್‌ ಹೇಳಿದಂತೆ ಅಮೆರಿಕದ ಸೇನೆಯನ್ನೇ ಕರೆತಂದರೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಡಳಿತಕ್ಕೆ ಸಂದೇಶ ರವಾನಿಸಿದರು.

ಸೇನೆ ನಿಯೋಜನೆ ಇಲ್ಲ: ಪ್ರತಿಭಟನೆ ಶಾಂತವಾಗದ ರಾಜ್ಯಗಳಲ್ಲಿ ಸೇನೆ ನಿಯೋಜಿಸುವುದಾಗಿ ಬೆದರಿಕೆ ಹಾಕಿದ್ದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಒಂದೇ ದಿನದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಮƒದು ಧೋರಣೆ ತಳೆದಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಈ ವಾರ ಲಭ್ಯವಾಗಿರುವ ವರದಿಯಂತೆ ರಾಜ್ಯಗಳು ಪರಿಸ್ಥಿತಿ ತಿಳಿಗೊಳಿಸಲು ಕ್ರಮ ವಹಿಸಿವೆ ಎಂದಿರುವ ಶ್ವೇತ ಭವನದ ಅಧಿಕಾರಿಗಳು, ಹಿಂಸಾತ್ಮಕ ಪ್ರತಿಭಟನೆ ಹತ್ತಿಕ್ಕುವ ಉದ್ದೇಶದಿಂದ ಅಧ್ಯಕ್ಷರು ಖಾರವಾಗಿ ಹೇಳಿಕೆ ನೀಡಿದ್ದರು ಎಂದಿದ್ದಾರೆ.

ಹೀರೋ ಆದ ಭಾರತೀಯ
ಫ್ಲಾಯ್ಡ ಹತ್ಯೆ ಖಂಡಿಸಿ ಪ್ರತಿಭಟಿಸುತ್ತಿದ್ದ 70ಕ್ಕೂ ಅಧಿಕ ಪ್ರತಿಭಟನಾಕಾರರಿಗೆ ತನ್ನ ಮನೆಯಲ್ಲಿ ಆಶ್ರಯ ನೀಡುವ ಮೂಲಕ ಭಾರತ ಮೂಲದ ಅಮೆರಿಕ ಪ್ರಜೆಯೊಬ್ಬರು ಪ್ರತಿಭಟನಕಾರರ ಪಾಲಿಗೆ ಹೀರೋ ಆಗಿ ಹೊರಹೊಮ್ಮಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡು ಬಂದ ಪ್ರತಿಭಟನಾಕಾರರಿಗೆ ರಾಹುಲ್‌ ದುಬೆ ಎಂಬವರು ತಮ್ಮ ಮನೆಯಲ್ಲಿ ಆಶ್ರಯ ನೀಡಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.