ಭಾರತದೊಂದಿಗೆ ನಮಗೆ ಯುದ್ಧ ಬೇಕಿಲ್ಲ; ಮಾತುಕತೆ ಬೇಕು: ಪಾಕ್
Team Udayavani, Sep 29, 2018, 12:22 PM IST
ಇಸ್ಲಾಮಾಬಾದ್ : ”ಭಾರತ – ಪಾಕ್ ನಡುವಿನ ಸಂಘರ್ಷಕ್ಕೆ ಯುದ್ಧ ವು ಒಂದು ಪರಿಹಾರವೇ ಅಲ್ಲ, ಶಾಂತಿಯುತ ಮಾತುಕತೆಯಲ್ಲೇ ಪರಿಹಾರವನ್ನು ಕಾಣಬೇಕಿದೆ” ಎಂದು ಪಾಕ್ ವಿದೇಶ ಸಚಿವ ಶಾ ಮಹಮೂದ್ ಕುರೇಶಿ ಹೇಳಿದ್ದಾರೆ.
ಅಲ್ ಜಜೀರಾ ವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು “ಪರಸ್ಪರ ನೆರೆಹೊರೆಯ ಭಾರತ, ಪಾಕಿಸ್ಥಾನ ಅಣುಶಕ್ತ ರಾಷ್ಟ್ರಗಳಾಗಿವೆ. ಇವುಗಳ ನಡುವಿನ ಬಿಕ್ಕಟ್ಟು, ಸಂಘರ್ಷಕ್ಕೆ ಯುದ್ಧದಲ್ಲಿ ಯಾವುದೇ ಪರಿಹಾರವಿಲ್ಲ. ಇದನ್ನು ಉಭಯತರೂ ಮನಗಾಣುವುದರಲ್ಲೇ ವಿವೇಕವಿದೆ. ಅಂತೆಯೇ ನಾವು ಮಾತುಕತೆಗೆ ಸಿದ್ಧರಾಗಿದ್ದೇವೆ. ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ಬಿಟ್ಟರೆ ನಮಗೆ ಬೇರೆ ಆಯ್ಕೆಯೇ ಇಲ್ಲ’ ಎಂದು ಹೇಳಿದರು.
ಇಮ್ರಾನ್ ಖಾನ್ ನೇತೃತ್ವದ ನೂತನ ಪಾಕ್ ಸರಕಾರ ಭಾರತದೊಂದಿಗೆ ಉತ್ತಮ ಸಂಬಂಧ ಹೊಂದಲು ಬಯಸಿದೆ.ಈ ದಿಶೆಯಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಇಟ್ಟರೆ ಪಾಕಿಸ್ಥಾನ ಎರಡು ಹೆಜ್ಜೆ ಮುಂದೆ ಇಡಲು ಸಿದ್ಧವಿದೆ ಎಂದು ಇಮ್ರಾನ್ ಖಾನ್ ಈಗಾಗಲೇ ಭಾರತಕ್ಕೆ ತಿಳಿಸಿದ್ದಾರೆ. ಮಾತ್ರವಲ್ಲದೆ ಭಾರತದೊಂದಿಗೆ ರಚನಾತ್ಮಕ, ಶಾಂತಿಯುತ ಮಾತುಕತೆ ನಡೆಸುವ ಇಚ್ಛೆಯನ್ನು ತಾನು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ ಪ್ರಕಟಿಸಿದ್ದಾರೆ ಎಂದು ಕುರೇಶಿ ಹೇಳಿದರು.
ಇದೇ ವೇಳೆ ಕುರೇಶಿ ಅವರು ಭಾರತ ಮತ್ತು ಪಾಕಿಸ್ಥಾನದ ನಡುವಿನ ಮೂಲಭೂತ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸಲು ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಬೇಕೆಂದೂ ಅಲ್ ಜಜೀರಾ ಸಂದರ್ಶನದಲ್ಲಿ ಹೇಳಿದರು.
ಕಾಶ್ಮೀರ ಜನರ ಇಚ್ಛಾನುಸಾರ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸುವಂತೆ ಅವರು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಅವರನ್ನು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!