Russia ಯುರೋಪಿನ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಎಂದ ಪುಟಿನ್!

ಪ್ರತಿ ಕಡೆಯಿಂದ ಒತ್ತಡ... ನಮ್ಮ ಕತ್ತು ಹಿಸುಕಲಾಗುತ್ತಿದೆ..ಆದರೂ...

Team Udayavani, Jan 12, 2024, 3:58 PM IST

putin (2)

ಮಾಸ್ಕೋ: ”ಎಲ್ಲಾ ರೀತಿಯ ಒತ್ತಡದ ನಡುವೆಯೂ ರಷ್ಯಾ ಯುರೋಪಿನ ಪ್ರಮುಖ ಆರ್ಥಿಕತೆಯಾಗಿ ಹೊರಹೊಮ್ಮಿದೆ ಮತ್ತು ಈಗ ಕೊಳ್ಳುವ ಸಾಮರ್ಥ್ಯದ ಸಮಾನತೆಯ ವಿಷಯದಲ್ಲಿ ಜಾಗತಿಕವಾಗಿ ಐದನೇ ಸ್ಥಾನವನ್ನು ಹೊಂದಿದೆ” ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿಕೊಂಡಿದ್ದಾರೆ.

ವಾಣಿಜ್ಯೋದ್ಯಮಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಪುಟಿನ್, “ನಮ್ಮ ಕತ್ತು ಹಿಸುಕಲಾಗುತ್ತಿದೆ ಮತ್ತು ಪ್ರತಿ ಕಡೆಯಿಂದ ಒತ್ತಡ ಹೇರಲಾಗುತ್ತಿದೆ ಎಂದು ತೋರುತ್ತದೆ, ಆದರೆ ಇನ್ನೂ, ನಾವು ಯುರೋಪಿನ ಅತಿದೊಡ್ಡ ಆರ್ಥಿಕತೆಯಾಗಿ ಉಳಿದಿದ್ದೇವೆ” ಎಂದು ಹೇಳಿದ್ದಾರೆ.

“ನಾವು ಜರ್ಮನಿಯನ್ನು ಹಿಂದಿಕ್ಕಿ ವಿಶ್ವದ ಐದನೇ ಸ್ಥಾನಕ್ಕೆ ಏರಿದ್ದೇವೆ, ಚೀನಾ, ಯುಎಸ್, ಭಾರತ, ಜಪಾನ್ ಮತ್ತು ರಷ್ಯಾ ಮುಂಚೂಣಿಯಲ್ಲಿದ್ದು, ನಾವು ಯುರೋಪ್ ನಲ್ಲಿ ನಾವೇ ನಂಬರ್ ಒನ್ ಎಂದು ಹೇಳಿದ್ದಾರೆ.

ತಲಾ ಸೂಚಕವನ್ನು ಸುಧಾರಿಸಲು ನಿರಂತರ ಪ್ರಯತ್ನಗಳ ಅಗತ್ಯವನ್ನು ಪುಟಿನ್ ಒಪ್ಪಿಕೊಂಡಿದ್ದು, ಖರೀದಿ ಸಾಮರ್ಥ್ಯದ ಸಮಾನತೆಯ ವಿಷಯದಲ್ಲಿ ನಾವು ಯುರೋಪ್ ನ ಎಲ್ಲಾ ದೇಶಗಳನ್ನು ಮೀರಿಸಿದರೂ, ತಲಾವಾರು ಆಧಾರದ ಮೇಲೆ ಇನ್ನೂ ಕೆಲಸ ಮಾಡಬೇಕಾಗಿದೆ” ಎಂದಿದ್ದಾರೆ.

ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದ ನಿರ್ಬಂಧಗಳ ಕಾರಣದಿಂದಾಗಿ, ಕೇಂದ್ರ ಬ್ಯಾಂಕ್ ಹೊಂದಿರುವ ತನ್ನ ವಿದೇಶಿ ವಿನಿಮಯ ಮೀಸಲುಗಳ ಗಮನಾರ್ಹ ಭಾಗವನ್ನು ಪ್ರವೇಶಿಸುವ ಸವಾಲುಗಳನ್ನು ರಷ್ಯಾ ಎದುರಿಸಿದ್ದು, ವರದಿಗಳ ಪ್ರಕಾರ 2023 ರಲ್ಲಿ ರೂಬಲ್ ಮೌಲ್ಯದಲ್ಲಿ 30% ರಷ್ಟು ಕುಸಿತಕ್ಕೆ ಕಾರಣವಾಗಿದೆ.

“ರಷ್ಯಾ ದೀರ್ಘಕಾಲದವರೆಗೆ, ದಶಕಗಳಿಂದ ನಿರ್ಬಂಧಗಳ ಆಡಳಿತದಲ್ಲಿ ವಾಸಿಸುತ್ತಿದ್ದು, ನಾವು ಅದಕ್ಕೆ ಸಾಕಷ್ಟು ಹೊಂದಿಕೊಂಡಿದ್ದೇವೆ, ಆದ್ದರಿಂದ ಐದರಿಂದ 10 ವರ್ಷಗಳವರೆಗೆ ಅಂತಹ ನಿರ್ಬಂಧಗಳ ಸಮಯದ ಪರಿಧಿಗಳು ನಮ್ಮನ್ನು ಹೆದರಿಸುವುದಿಲ್ಲ” ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

2022 ಫೆಬ್ರವರಿಯಲ್ಲಿಉಕ್ರೇನ್ ನೊಂದಿಗೆ ಪ್ರಾರಂಭವಾದ ಯುದ್ಧವು ರಷ್ಯಾಕ್ಕೆ ತೀವ್ರವಾದ ಪರಿಣಾಮಗಳನ್ನು ಬೀರುವಂತಹ ಸಮಗ್ರ ನಿರ್ಬಂಧಗಳ ಜಾರಿಗೆ ತರಲು ಯುರೋಪಿಯನ್ ಒಕ್ಕೂಟವನ್ನು ಪ್ರೇರೇಪಿಸಿತ್ತು. EU 11 ನಿರ್ಬಂಧಗಳ ಪ್ಯಾಕೇಜ್‌ಗಳನ್ನು ಪರಿಚಯಿಸಿದ್ದು, ವರದಿಗಳ ಪ್ರಕಾರ ನಿರ್ಬಂಧಗಳು ವರ್ಷಗಳವರೆಗೆ ಇರಬಹುದೆಂದು ಅಧಿಕಾರಿಗಳು ಹೇಳಿದ್ದಾರೆ.

ಉಕ್ರೇನ್ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ನಡೆಸುತ್ತಿರುವುದು “ಅಪ್ರಚೋದಿತ ಆಕ್ರಮಣಕಾರಿ ಯುದ್ಧ” ಎಂದು ಹೇಳಿವೆ. ಪಾಶ್ಚಿಮಾತ್ಯ ಶಕ್ತಿಗಳು ರಷ್ಯಾದ ಭದ್ರತೆಯನ್ನು ದುರ್ಬಲಗೊಳಿಸಲು ಉಕ್ರೇನ್ ಅನ್ನು ಬಳಸಿಕೊಳ್ಳುತ್ತಿವೆ ಎಂದು ರಷ್ಯಾ ವಾದಿಸುತ್ತಲೇ ಬಂದಿದೆ. ನಿರ್ಬಂಧಗಳು ತನ್ನ ದೇಶೀಯ ಆರ್ಥಿಕತೆ ಮತ್ತು ಕೈಗಾರಿಕಾ ಉತ್ಪಾದನೆಯನ್ನು ಉತ್ತೇಜಿಸಿದೆ ಎಂದು ಕ್ರೆಮ್ಲಿನ್ ಹೇಳಿದೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.