ಪಾಕಿಸ್ತಾನ ನೀಡಿದ ಗೋಧಿ ತಿನ್ನಲು ಯೋಗ್ಯವಲ್ಲ,ಭಾರತದ ಗೋಧಿ ಉತ್ತಮವಾಗಿದೆ: ತಾಲಿಬಾನ್ ಅಧಿಕಾರಿ
Team Udayavani, Mar 5, 2022, 12:06 PM IST
ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಕಳಪೆ ಗುಣಮಟ್ಟದ ಗೋಧಿಯನ್ನು ದಾನ ಮಾಡಿದೆ ಎಂಬ ಆರೋಪ ಕೇಳಿಬಂದಿದ್ದು, ಟ್ವಿಟರ್ ನಲ್ಲಿ ಮಾತಿನ ಸಮರಕ್ಕೆ ಕಾರಣವಾಗಿದೆ.
ತಾಲಿಬಾನ್ ಅಧಿಕಾರಿಯೊಬ್ಬರು ಭಾರತ ಕಳುಹಿಸಿದ ಗೋಧಿಯ ಗುಣಮಟ್ಟವನ್ನು ಶ್ಲಾಘಿಸುವಾಗ ಕಳಪೆ ಗುಣಮಟ್ಟದ ಗೋಧಿಯನ್ನು ದಾನ ಮಾಡಿದ್ದಕ್ಕಾಗಿ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಗೋಧಿಯ ಗುಣಮಟ್ಟದ ಬಗ್ಗೆ ತಾಲಿಬಾನ್ ಅಧಿಕಾರಿಯೊಬ್ಬರು ದೂರುತ್ತಿರುವುದನ್ನು ತೋರಿಸುವ ವೀಡಿಯೊದೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಅಗಿದೆ.
“ಅಫ್ಘಾನ್ ಜನರಿಗೆ ನಿಮ್ಮ ನಿರಂತರ ಬೆಂಬಲಕ್ಕಾಗಿ ಭಾರತಕ್ಕೆ ಧನ್ಯವಾದಗಳು. ನಮ್ಮ ಸಾರ್ವಜನಿಕ ಸ್ನೇಹಿ ಸಂಬಂಧಗಳು ಶಾಶ್ವತವಾಗಿರುತ್ತವೆ. ಜೈ ಹಿಂದ್” ಎಂದು ಹಮ್ದುಲ್ಲಾ ಅರ್ಬಾಬ್ ಟ್ವೀಟ್ ಮಾಡಿದ್ದಾರೆ.
“ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ನೀಡಿದ ಗೋಧಿ ಸವೆದು ಹಾಳಾಗಿವೆ, ಅದನ್ನು ಬಳಸಲು ಯೋಗ್ಯವಾಗಿಲ್ಲ. ಭಾರತ ಯಾವಾಗಲೂ ಅಫ್ಘಾನಿಸ್ತಾನಕ್ಕೆ ಸಹಾಯ ಮಾಡಿದೆ” ಎಂದು ನಜೀಬ್ ಫರ್ಹೋಡಿಸ್ ಎಂಬವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಝಪೊರಿಝಿಯಾ ಪರಮಾಣು ಸ್ಥಾವರದ ಮೇಲೆ ಮತ್ತೆ ಉಕ್ರೇನ್ ನಿಯಂತ್ರಣ; ಆಸ್ಪತ್ರೆ ಮೇಲೆ ರಷ್ಯಾ ದಾಳಿ!
ಆದರೆ ಪಾಕಿಸ್ಥಾನದಿಂದ ಬಂದ ಗೋಧಿಯ ಗುಣಮಟ್ಟದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್ ಅಧಿಕಾರಿಯನ್ನು ಹುದ್ಧೆಯಿಂದ ವಜಾ ಮಾಡಲಾಗಿದೆ. ಮಾನವೀಯ ನೆಲೆಯಲ್ಲಿ ಕಳೆದ ತಿಂಗಳಿನಿಂದ ಭಾರತವು ಅಫ್ಘಾನಿಸ್ಥಾನಕ್ಕೆ ಗೋಧಿಯನ್ನು ಕಳುಹಿಸುತ್ತಿದೆ. ಭಾರತವು ಅಫ್ಘಾನಿಸ್ಥಾನಕ್ಕೆ 50,000 ಮೆಟ್ರಿಕ್ ಟನ್ ಗೋಧಿಯನ್ನು ಅಫ್ಗಾನಿಸ್ಥಾನದ ನೆರವಿಗೆ ಕಳುಹಿಸಲಿದೆ. 2000 ಮೆಟ್ರಿಕ್ ಟನ್ ಗೋಧಿಯನ್ನು ಹೊತ್ತ ಭಾರತದ ಪಡೆ ಗುರುವಾರ ಅಮೃತಸರದ ಅಟ್ಟಾರಿಯಿಂದ ಅಫ್ಘಾನಿಸ್ತಾನದ ಜಲಾಲಾಬಾದ್ಗೆ ಹೊರಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್