ನಡುರಾತ್ರಿ ಫೋನ್ ಮಾಡಿ “ಎಚ್ಚರ ಇದ್ದೀರಾ’ ಎಂದು ಕೇಳಿದ್ದ ಪ್ರಧಾನಿ
2016ರಲ್ಲಿ ಪ್ರಧಾನಿ ಕರೆ ಮಾಡಿದ್ದನ್ನು ನೆನಪಿಸಿದ ಜೈಶಂಕರ್
Team Udayavani, Sep 24, 2022, 7:20 AM IST
ನ್ಯೂಯಾರ್ಕ್: “ಎಚ್ಚರವಾಗಿ ಇದ್ದೀರಾ?’ ಹೀಗೆಂದು ಪ್ರಧಾನಿ ಮೋದಿ 2016ರಲ್ಲಿ ತಮ್ಮನ್ನು ಪ್ರಶ್ನಿಸಿದ್ದ ಒಂದು ಘಟನೆಯನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್ ನೆನಪಿಸಿಕೊಂಡಿದ್ದಾರೆ.
ನ್ಯೂಯಾರ್ಕ್ನಲ್ಲಿ “ಮೋದಿ ಅಟ್ 20: ಡ್ರೀಮ್ಸ್ ಮೀಟ್ ಡೆಲಿವರಿ’ ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2016ರಲ್ಲಿ ಅಫ್ಘಾನಿಸ್ತಾನದ ಮಜಾರ್-ಇ-ಷರೀಫ್ನಲ್ಲಿ ಭಾರತೀಯ ದೂತಾವಾಸದಲ್ಲಿ ಬಾಂಬ್ ಸ್ಫೋಟ ನಡೆದಿದ್ದ ವೇಳೆ ಖುದ್ದು ಪ್ರಧಾನಿ ಮೋದಿಯವರೇ ಫೋನ್ ಮಾಡಿದ್ದರು. “ಎಚ್ಚರವಾಗಿ ಇದ್ದೀರಾ’ ಎನ್ನುವುದು ಪ್ರಧಾನಿಯವರ ಮೊದಲ ಪ್ರಶ್ನೆಯಾಗಿತ್ತು ಎಂದು ನೆನಪಿಸಿಕೊಂಡರು.
ಪ್ರಧಾನಿ ಮೋದಿಯವರು ಅದ್ಭುತ ನಾಯಕ ಎಂದು ಬಣ್ಣಿಸುವ ಸಂದರ್ಭದಲ್ಲಿ ಅವರು ಈ ಘಟನೆಯನ್ನು ಉಲ್ಲೇಖಿಸಿದ್ದಾರೆ. ಆ ಸಂದರ್ಭದಲ್ಲಿ ಜೈಶಂಕರ್ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು.
ದೂತಾವಾಸದ ಮೇಲೆ ನಡೆದ ದಾಳಿಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೆವು. ಆ ಸಂದರ್ಭದಲ್ಲಿ ಅಚ್ಚರಿ ಎಂಬಂತೆ ರಾತ್ರಿ 12.30ಕ್ಕೆ ಪ್ರಧಾನಿ ಫೋನ್ ಮಾಡಿ ಟಿವಿ ನೋಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಉತ್ತರಿಸಿ, ದಾಳಿಯ ವಿಚಾರ ಗೊತ್ತಾಗಿದೆ ಎಂದು ಅವರಿಗೆ ಮಾಹಿತಿ ನೀಡಿದೆ ಎಂದರು ವಿದೇಶಾಂಗ ಸಚಿವ.
ನನಗೇ ಫೋನ್ ಮಾಡಿ:
ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ 2-3 ಗಂಟೆ ಬೇಕಾಗುತ್ತದೆ. ಅದರ ಸಮಗ್ರ ಮಾಹಿತಿಯನ್ನು ಪ್ರಧಾನಿ ಕಚೇರಿಗೇ ನೀಡುವುದಾಗಿ ಅವರಿಗೆ ತಿಳಿಸಿದೆ. ಅದಕ್ಕೆ ಉತ್ತರಿಸಿದ ಪ್ರಧಾನಿ ಕಾರ್ಯಾಚರಣೆ ಮುಕ್ತಾಯಗೊಂಡಾಗ ಖುದ್ದು ತಮಗೇ ವರದಿ ಸಲ್ಲಿಸುವಂತೆ ಸೂಚಿಸಿದರು ಎಂದು ಜೈಶಂಕರ್ ನೆನಪಿಸಿಕೊಂಡರು. ಪ್ರಧಾನಿ ಮೋದಿ ದೇಶದ ಆಡಳಿತದ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಹೊಣೆಯನ್ನು ಹೊತ್ತಿದ್ದಾರೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ