ಯುದ್ಧಪೀಡಿತ ಉಕ್ರೇನ್ನಲ್ಲಿ ಈಗ ಭ್ರಷ್ಟಾಚಾರ: ಹಲವರ ಸರಣಿ ರಾಜೀನಾಮೆ
Team Udayavani, Jan 25, 2023, 7:37 PM IST
ಕೀವ್: ಸತತ 11 ತಿಂಗಳಿನಿಂದ ರಷ್ಯಾದ ಆಕ್ರಮಣವನ್ನು ಎದುರಿಸಿ ನಿಂತಿರುವ ಉಕ್ರೇನ್ಗೆ ಈಗ ಒಳಗಿಂದಲೇ ಶತ್ರುಗಳು ಎದುರಾಗಿದ್ದಾರೆ. ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಆ ದೇಶದ ಹಲವು ಅಧಿಕಾರಿಗಳು, ಸಚಿವರೂ ರಾಜೀನಾಮೆ ನೀಡಿದ್ದಾರೆ.
ಸಶಸ್ತ್ರ ಸೇನಾಪಡೆಗಳಿಗೆ ಆಹಾರ ಪೂರೈಕೆಯಲ್ಲಿ ನಡೆದಿರುವ ಹಗರಣ ಉಕ್ರೇನ್ಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಈಗಾಗಲೇ ರಷ್ಯಾ, ಉಕ್ರೇನ್ ತನ್ನದೆಂದು ಹೇಳಿಕೊಂಡು ಯುದ್ಧ ನಡೆಸುತ್ತಿದೆ.
ಇಂತಹ ಹೊತ್ತಿನಲ್ಲೇ ಭ್ರಷ್ಟಾಚಾರದ ಪ್ರಕರಣ ಬಯಲಾಗಿರುವುದು ರಷ್ಯಾಕ್ಕೆ ಪ್ರಬಲ ಅಸ್ತ್ರವನ್ನೇ ಕೊಟ್ಟಂತಾಗಿದೆ. ಮತ್ತೂಂದು ಕಡೆ ಉಕ್ರೇನ್ಗೆ ಆರ್ಥಿಕ, ಸೇನಾ ನೆರವು ನೀಡುತ್ತಿರುವ ಪಾಶ್ಚಾತ್ಯ ರಾಷ್ಟ್ರಗಳು ತಮ್ಮ ನೆರವಿಗೆ ಸರಿಯಾದ ಲೆಕ್ಕ ಕೊಡಬೇಕು ಎಂದು ಕೇಳಲು ಆರಂಭಿಸಿದ್ದಾರೆ. ಉಕ್ರೇನ್ಗೆ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ನೆರವು ನೀಡುತ್ತಿರುವ ಅಮೆರಿಕವೂ ಇದನ್ನೇ ಪುನರುಚ್ಚಿಸಿದೆ.
ಇದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿಗೆ ತೀವ್ರ ಇಕ್ಕಟ್ಟಿನ ಪರಿಸ್ಥಿತಿಯನ್ನುಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷೀಯ ಕಚೇರಿಯ ಉಪಾಧ್ಯಕ್ಷ ಕಿರಿಲೊ ಟೈಮೊಶೆಂಕೊ ಕೂಡ ರಾಜೀನಾಮೆ ನೀಡಿದ್ದಾರೆ. ಹಗರಣ ಬೆಳಕಿಗೆ ಬಂದ ನಂತರ ಮಂಗಳವಾರ ಹಲವರು ನೀಡಿದ್ದಾರೆ. ಆ ಪತ್ರಗಳನ್ನಿಟ್ಟುಕೊಂಡು ಉಕ್ರೇನ್ ಸರ್ಕಾರ ತಾನು ಪಾರದರ್ಶಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆಂದು ಬಿಂಬಿಸಿಕೊಳ್ಳುತ್ತಿದೆ. ಇದು ಎಷ್ಟರಮಟ್ಟಿಗೆ ಎಲ್ಲರನ್ನು ಸಮಾಧಾನಪಡಿಸುತ್ತದೆ ಕಾದು ನೋಡಬೇಕು. ಉಕ್ರೇನ್ನಲ್ಲಿನ ತೀವ್ರ ಭ್ರಷ್ಟಾಚಾರವನ್ನು ವಿರೋಧಿಸಿಯೇ ಝೆಲೆನ್ಸಿ$Rಗೆ 2019ರಲ್ಲಿ ಅಧಿಕಾರಕ್ಕೇರಿದ್ದರು ಎನ್ನುವುದು ಇಲ್ಲಿ ಗಮನಾರ್ಹ.
ಇದನ್ನೂ ಓದಿ: ಅದಾನಿ ಗ್ರೂಪ್ ವಿರುದ್ಧ ವಂಚನೆ ಆರೋಪ ಎಫೆಕ್ಟ್: ಷೇರುಪೇಟೆ ಸೆನ್ಸೆಕ್ಸ್ 773 ಅಂಕ ಕುಸಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು