ದುಬೈ ಕನ್ನಡಿಗರಿಂದ ಡಾ.ಸುಧಾಮೂರ್ತಿಗೆ ಕನ್ನಡ ರತ್ನ ಪ್ರಶಸ್ತಿ


Team Udayavani, Oct 31, 2019, 4:47 PM IST

Kannadigaru

ಬೆಂಗಳೂರು: ದುಬೈನಲ್ಲಿ ವಾಸವಾಗಿರುವ ಅನಿವಾಸಿ ಕನ್ನಡಿಗರು ನೀಡುವ ಕನ್ನಡ ರತ್ನ ಪ್ರಶಸ್ತಿಗೆ ಈ ವರ್ಷ ಇನ್ಪೊಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾಜನರಾಗಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡಿಗರು ದುಬೈ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಕರ್ನಾಟಕದ ನಾಡ ಹಬ್ಬ 64 ನೇ ‘ಕನ್ನಡ ರಾಜ್ಯೋತ್ಸವ’ ವನ್ನು ದುಬೈನಲ್ಲಿರುವ ಕನ್ನಡಿಗರು ಈ ಬಾರಿ ನವೆಂಬರ್ 08 ರಂದು ಆಚರಿಸುತ್ತಿದ್ದು, ಇದು 16ನೇ ದುಬೈ ಕನ್ನಡ ರಾಜ್ಯೋತ್ಸವವಾಗಿದ್ದು ಈ ಬಾರಿ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ಕನ್ನಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ನವೆಂಬರ್ 08ರಂದು ಸಂಜೆ 4.30 ಗಂಟೆಗೆ ದುಬೈ ಮೇದಾನ್ ನಾದ್ ಅಲ್ ಶೀಬಾದಲ್ಲಿರುವ ಹಾರ್ಟ್ ಲ್ಯಾಂಡ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಕನ್ನಡಿಗರು ಒಟ್ಟುಗೂಡಿ ನಾಡಹಬ್ಬ ಆಚರಿಸಲಿದ್ದು ಇದೇ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರಿಗೆ 2019ನೇ ಸಾಲಿನ ‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ದುಬೈನಲ್ಲಿ ಭಾರತದ ರಾಯಭಾರಿ ವಿಪುಲ್ ಅವರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಗಿಲ್ 1999ರ ಯುದ್ಧದಲ್ಲಿ ಸೆಣೆಸಿದ ಸೇನಾಧಿಕಾರಿ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಅತಿಥಿಗಳಾಗಿದ್ದಾರೆ. ಮುಸ್ತಾಫಾ ಮಹಮ್ಮದ್, ಉದ್ಯಮಿ ಹಾಗೂ ಕನ್ನಡಿಗರು ದುಬೈ ಪೋಷಕರು, ಫಾರ್ಚ್ಯೂನ್ ಹೋಟೆಲ್ಸ್ ಗ್ರೂಪಿನ ನಿರ್ವಾಕ ನಿರ್ದೇಶಕರಾದ ರವೀಶ್ ಗೌಡ , ದರ್ಶನಿ ಮಂಜುನಾಥ್ ನೃತ್ಯ ದಿಷಾ ಟ್ರಸ್ಟ್ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮವನ್ನು ಕನ್ನಡದ ಖ್ಯಾತ ರೇಡಿಯೊ ಮಿರ್ಚಿ ಹಾಗೂ ಕನ್ನಡ ಕೋಗಿಲೆ ನಿರೂಪಕಿಯಾದ ಆರ್ ಜೆ ಸಿರಿ ನೆರವೇಸಿಲ್ಲಿದ್ದಾರೆ. ಈ ಸಂದರ್ಭದಲ್ಲಿ ನೃತ್ಯ ದಿಷಾ ಟ್ರಸ್ಟ್ ಬೆಂಗಳೂರು ತಂಡದಿದ ಹಾಗೂ ಯುನೈಟೆಡ್ ಅರಬ್ ಎಮಿರೇಟಿನಲ್ಲಿ ನೆಲೆಸಿರುವ ಕನ್ನಡ ಶಾಲಾ ಮಕ್ಕಳು ನೃತ್ಯ, ಸಂಗೀತ ಹಾಗೂ ಮುಂತಾದ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ರಂಜಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದೆ ಎಂದು ಕನ್ನಡಿಗರು ದುಬೈ ಸಂಘದ ಮುಖ್ಯ ಸಂಚಾಲಕ ಮಲ್ಲಿಕಾರ್ಜುನ ಗೌಡ ಅವರು ತಿಳಿಸಿದ್ದಾರೆ. ಸಮಸ್ತ ಕನ್ನಡಿಗರು ಈ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಬೇಕಾಗಿ ಆಯೋಜಕರು ಕೋರಿದ್ದಾರೆ.

ಫಾರ್ಚೂನ್ ಗ್ರಾಂಡ್ ಹೋಟೆಲ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕನ್ನಡಿಗರು ದುಬೈ ಸಂಘದ ಮಾಜಿ ಅಧ್ಯಕ್ಷರುಗಳಾದ ವೀರೇಂದ್ರ ಬಾಬು, ಸದನ್ ದಾಸ್, ಉಮಾ ವಿದ್ಯಾಧರ್, ಹಾಗು ಕನ್ನಡಿಗರು ದುಬೈ ಸಮಿತಿ ಸದಸ್ಯರುಗಳಾದ ಅರುಣ್ ಕುಮಾರ್, ದೀಪಕ್ ಸೋಮಶೇಖರ್, ಚಂದ್ರಕಾಂತ್ ಗೌಡ, ವಿಜಯ ಶಿವರುದ್ರಪ್ಪ, ಮಮತಾ ರಾಘವೇಂದ್ರ, ಮಲ್ಲಿಕಾರ್ಜುನ ಅಂಗಡಿ, ಶ್ರೀನಿವಾಸ್ ಅರಸ್, ವೆಂಕಟರಮಣ ಕಾಮತ್, ರಫೀಕಲಿ ಕೊಡಗು, ವಿನೀತ್ ರಾಜ್, ಮಧು ಗೌಡ, ಚಂದ್ರಶೇಖರ್ ಪೂಜಾರಿ ಹಾಜರಿದ್ದರು.

ಇಲ್ಲಿನ ಇತರ ಸಂಘ ಸಂಸ್ಥೆಗಳ ಪ್ರಮುಖರಾದ ಸತೀಶ್ ಹೈನ್ದರ್, ಪ್ರಕಾಶ್ ಪಯ್ಯಾರ್, ಮನೋಹರ್ ಹೆಗಡೆ, ಸುಗಂಧ ರಾಜ್ ಬೇಕಲ್, ಸುಮೀಂದ್ರ ಹೇಮಾದ್ರಿ, ಆಶಾ ಲಕ್ಷ್ಮಿ, ಖಲೀಲ್ ರಹ್ಮಾನ್ ಉದಯ್ ನಂಜಪ್ಪ, ಬಾನು ಕುಮಾರ್, ನಾಗರಾಜ್ ರಾವ್ ಹಾಜರಿದ್ದರು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

99.jpg

ಗೋರೆಗಾಂವ್‌ ಕರ್ನಾಟಕ ಸಂಘ : ಕರ್ನಾಟಕ ರಾಜ್ಯೋತ್ಸವ ಆಚರಣೆ

01-Mum06a.jpg

ಕರ್ನಾಟಕ ಸಮಾಜ ಸೂರತ್‌:ಕರ್ನಾಟಕ ರಾಜ್ಯೋತ್ಸವ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.