ಪಶ್ಚಿಮಬಂಗಾಳ: ಮತಗಟ್ಟೆ ಬಳಿ ಮತದಾರನಿಗೆ ಗುಂಡಿಕ್ಕಿ ಹತ್ಯೆ, ಬಿಜೆಪಿ-ಟಿಎಂಸಿ ಘರ್ಷಣೆ
ಬಿಜೆಪಿ ಕಾರ್ಯಕರ್ತರೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
Team Udayavani, Apr 10, 2021, 11:48 AM IST
ಕೋಲ್ಕತಾ:ಪಶ್ಚಿಮ ಬಂಗಾಳದ 44 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ(ಏ.10) ನಾಲ್ಕನೇ ಹಂತದ ಮತದಾನ ನಡೆಯುತ್ತಿದ್ದು, ಏತನ್ಮಧ್ಯೆ ಮತಗಟ್ಟೆ ಬಳಿ ಮತದಾರರನೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಕೂಚ್ ಬೆಹರ್ ನಲ್ಲಿ ನಡೆದಿದೆ.
ಕೂಚ್ ಬೆಹರ್ ಮತಗಟ್ಟೆ ಹೊರಭಾಗದಲ್ಲಿ ಮೊದಲ ಬಾರಿ ಮತಚಲಾಯಿಸಲು ಆಗಮಿಸಿದ್ದ ಯುವಕನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಚುನಾವಣಾ ಆಯೋಗ ಸೂಚಿಸಿದೆ.
ಮೃತ ಯುವಕನನ್ನು ಆನಂದ್ ಬರ್ಮನ್ (18ವರ್ಷ) ಎಂದು ಗುರುತಿಸಲಾಗಿದೆ. ಈತ ತಮ್ಮ ಪಕ್ಷದ ಬೆಂಬಲಿಗೆ ಎಂದು ಭಾರತೀಯ ಜನತಾ ಪಕ್ಷ ಹೇಳಿದೆ. ಆದರೆ ಮತದಾರರನ್ನು ಬಿಜೆಪಿ ಕಾರ್ಯಕರ್ತರೇ ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.
ಘಟನೆಯ ಬೆನ್ನಲ್ಲೇ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಜಿಲ್ಲೆಯ ಇತರ ಭಾಗಗಳಲ್ಲಿಯೂ ಉದ್ವಿಗ್ನ ಪರಿಸ್ಥಿತಿ ತಲೆದೋರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ