‘ದೂಸ್ರಿ ಬಾರ್ ಡಬಲ್ ಎಂಜಿನ್ ಕಿ ಸರ್ಕಾರ್’ : ಕಾಂಗ್ರೆಸ್ ಗೆ ಪರೋಕ್ಷವಾಗಿ ಕುಟುಕಿದ ಮೋದಿ
Team Udayavani, Mar 21, 2021, 1:56 PM IST
ಬೊಕಾಖಾಟ್ : ಅಸ್ಸಾಂ ನಲ್ಲಿ ಮತ್ತೆ ಬಿಜೆಪಿ ಸರ್ಕಾರ ತನ್ನ ಆಡಳಿತವನ್ನು ಮುಂದುವರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಸ್ಸಾಂ ನ ಬೊಕಾಖಾಟ್ ನಲ್ಲಿ ನಡೆದ ವಿಧಾನಸಭಾ ಚುನವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರದಾನಿ ಮೋದಿ, ಈಗಾಗಲೇ ನಿರ್ಧಾರವಾಗಿದೆ, ಅಸ್ಸಾಂ ನಲ್ಲಿ ಎರಡನೇ ಬಾರಿ ಬಿಜೆಪಿ ಅಧಿಕಾರ ಹಿಡಿಯಲಿದೆ, ‘ದೂಸ್ರಿ ಬಾರ್ ಬಿಜೆಪಿ ಸರ್ಕಾರ್’, ‘ದೂಸ್ರಿ ಬಾರ್ ಎನ್ ಡಿ ಎ ಸರ್ಕಾರ್’, ‘ದೂಸ್ರಿ ಬಾರ್ ಡಬಲ್ ಎಂಜಿನ್ ಕಿ ಸರ್ಕಾರ್’ ಎಂದು ಪರೋಕ್ಷವಾಗಿ ಕಾಂಗ್ರೆಸ್ ಗೆ ಚಾಟಿ ಏಟು ನೀಡಿದ್ದಾರೆ.
ಓದಿ : 100 ಕೋಟಿ ಲಂಚ ಆರೋಪ : ಗೃಹ ಮಂತ್ರಿ ಸ್ಥಾನದಿಂದ ಅನಿಲ್ ದೇಶ್ ಮುಖ್ ಔಟ್..?
ಇನ್ನು, ಅಸ್ಸಾಂ ನಲ್ಲಿ ಪರಿಸರ ಸಂರಕ್ಷಣೆಗಾಗಿ ಬಿಜೆಪಿ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಮೋದಿ ಮಾತನಾಡಿದರು.
ಖಡ್ಗಮೃಗ ಬೇಟೆಗಾರರನ್ನು ಎನ್ ಡಿ ಎ ಸರ್ಕಾರ ಜೈಲಲ್ಲಿರಿಸಿದೆ. ನಾವು ಅಸ್ಸಾಂ ನ ಪ್ರಾಣಿ ಪಕ್ಷಿಗಳ ಸಂರಕ್ಷಣೆಯ ಜೊತೆಗೆ, ಜನರಿಗೆ ಬೇಕಾದ ಸೌಲಭ್ಯಗಳನ್ನು ಕೂಡ ಒದಗಿಸಿದ್ದೇವೆ ಎಂದು ಹೇಳಿದ್ದಾರೆ.
ಅಸ್ಸಾಂ ನಲ್ಲಿ ಬಿಜೆಪಿ ಆಡಳಿತದಲ್ಲಿ ಅರಣ್ಯ ವ್ಯಾಪ್ತಿಗೆ ಸಂಬಂಧಪಟ್ಟಂತೆ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾದದ್ದನ್ನು ನಾವು ಕಾಣಬಹುದು. ಇದು ಪ್ರವಾಸೋದ್ಯಮಕ್ಕೆ ಹಾಗೂ ಆರ್ಥಿಕ ಚಟುವಟಿಕೆಗೆ ಪ್ರೋತ್ಸಾಹವನ್ನು ನೀಡಿದೆ. ನೈಸರ್ಗಿಕ, ಆದ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಪಾರಂಪರಿಕ ಪ್ರವಾಸೋದ್ಯಮಗಳಲ್ಲಿ ಭಾರತವನ್ನು ಪ್ರಮುಖ ರಾಷ್ಟ್ರಗಳಲ್ಲಿ ಸೇರಿಸಬೇಕೆಂದು ನಾವು ಬಯಸುತ್ತೇವೆ. ಅಸ್ಸಾಂ ಈ ಎಲ್ಲಾ ಗುಣ ಲಕ್ಷಣವನ್ನು ಹೊಂದಿದೆ. ಎನ್ ಡಿ ಎ ಸರ್ಕಾರದ ಅಡಿಯಲ್ಲಿ ಅಸ್ಸಾಂ ಉನ್ನತ ಮಟ್ಟಕ್ಕೆರುತ್ತಿದೆ ಎಂದು ಪ್ರಧಾನಿ ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು, ಕಾಂಗ್ರೆಸ್ ನನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಕೇಂದ್ರದಲ್ಲಿ ಹಾಗೂ ಅಸ್ಸಾಂ ನಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಭ್ರಷ್ಟಾಚಾರ ಎಗ್ಗಿಲ್ಲದೆ ನಡೆಯುತ್ತಿತ್ತು. ಕಾಂಗ್ರೆಸ್ ಅಂದರೆ ಅಸ್ಥಿರತೆ ಹಾಗೂ ಭ್ರಷ್ಟಾಚಾರವೆಂದು ನೀವು ನೆನಪಿನಲ್ಲಿಟ್ಟುಕೊಳ್ಳಬೇಕು. ಒಳ್ಳೆಯದನ್ನು ಮಾಡುವುದಕ್ಕೆ ಅವರಲ್ಲಿ ಯಾವುದೇ ಒಳ್ಳೆಯ ದೃಷ್ಟಿ ಮತ್ತು ಉದ್ದೇಶ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಓದಿ : ಬೇಕಿದ್ದರೆ ನಳಿನ್ ಕಟೀಲ್ ಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ