ಕೇರಳ ‘ಲವ್ ಜಿಹಾದ್’, ‘ದೇಶ ವಿರೋಧಿ ಚಟುವಟಿಕೆ’ಗಳ ಕೇಂದ್ರ : ಸದಾನಂದ ಗೌಡ
Team Udayavani, Mar 22, 2021, 4:50 PM IST
ಕೇರಳ : ಭಾರತಿಯ ಜನತಾ ಪಕ್ಷ ಕೇರಳದಲ್ಲಿ ಅಧಿಕಾರಕ್ಕೆ ಬಂದರೆ, ಉತ್ತರ ಪ್ರದೇಶದ ಮಾದರಿಯಲ್ಲಿ ‘ಲವ್ ಜಿಹಾದ್’ ವಿರುದ್ಧ ಕಾನೂನು ತರಲಿದೆ ಎಂದು ಕೇಂದ್ರ ಸಚಿವ ಡಿ, ವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಡಿ ವಿ. ಸದಾನಂದ ಗೌಡ, ದೇವಳದ ಆಡಳಿತವನ್ನು ನಿರ್ವಹಿಸುವ ದೇವಸ್ವಂ ಮಂಡಳಿಗಳನ್ನು ಮತ್ತೆ ರಚಿಸುತ್ತೇವೆ. ದೇವಸ್ವಂ ಮಂಡಳಿಗಳನ್ನು ನಿಜವಾದ ಭಕ್ತರಿಗೆ ಹಸ್ತಾಂತರ ಮಾಡುತ್ತೇವೆ ಎಂದರು.
ಓದಿ : ದೇಶ್ ಮುಖ್ ಪ್ರಕರಣ : ನಿಷ್ಪಕ್ಷ ತನಿಖೆಯಾಗಲಿ : ಸುಪ್ರೀಂ ಗೆ ‘ಮಹಾ’ಮೈತ್ರಿ ಮನವಿ
ಈ ಎರಡು ಭರವಸೆಗಳು ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಪಕ್ಷದ ವಿಧಾನ ಸಭಾ ಪ್ರಣಾಳಿಕೆಯಲ್ಲಿ ಮುಖ್ಯ ಅಂಶಗಳಾಗಿರಲಿವೆ ಎಂದು ಅವರು ತಿಳಿಸಿದ್ದಾರೆ.
ಇನ್ನು, ಕೇರಳ ‘ಲವ್ ಜಿಹಾದ್’ ನ ಕೇಂದ್ರವಾಗಿ ಮಾರ್ಪಟ್ಟಿದೆ. ಕ್ರಿಶ್ಚಿಯನ್ ಸಮುದಾಯವನ್ನು ಇದು ಗುರಿಯಾಗಿಸಿಕೊಂಡು ಕಾರ್ಯ ನಿರ್ವಹಿಸುತ್ತಿದೆ. ಇಂತಹ ಚಟುವಟಿಕೆಗಳಿಗೆ ಸಿಪಿಐ(ಎಮ್) ಸರ್ಕಾರ ಬೆಂಬಲ ನೀಡುತ್ತಿದೆ ಎಂದು ಗೌಡ ಆರೋಪಿಸಿದ್ದಲ್ಲದೇ, ದೇವಸ್ವಂ ಸಿಪಿಐ(ಎಮ್) ನ ಕಾರ್ಯ ಚಟುವಟಿಕೆಗಳ ಕೇಂದ್ರಗಳಾಗಿತ್ತು. ದೇವಸ್ವಂ ಮಂಡಳಿಗಳನ್ನು ಈಗ ರದ್ದುಗೊಳಿಸಲಾಗಿದೆ. ನಮ್ಮ ಪಕ್ಷ ಕೇರಳದಲ್ಲಿ ಅಧಿಕಾರಕ್ಕೆ ಬಂದರೆ, ದೇವಸ್ವಂ ಮಂಡಳಿಗಳನ್ನು ಪುನರಚಿಸಿ, ನಿಜವಾದ ದೇವರ ಭಕ್ತರಿಗೆ ಅದರ ಉಸ್ತುವಾರಿಯನ್ನು ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ಸಿಪಿಐ ನ ಪ್ರಾಯೋಜಕತ್ವದಲ್ಲಿ ಕೇರಳ ‘ದೇಶ ವಿರೋಧಿ ಚಟುವಟಿಕೆಗಳ ಕೇಂದ್ರ’ವಾಗಿ ಮಾರ್ಪಟ್ಟಿದೆ. ಎಡ ಪಕ್ಷ ಕೇರಳದಲ್ಲಿ ಅಭಿವೃದ್ಧಿ ಕೆಲಸ ಮಾಡಲು ವಿಫಲವಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ವಾಧಿಕಾರ ಧೋರಣೆಯನ್ನು ಮಾಡುತ್ತಿದ್ದಾರೆ. ಪಾರದರ್ಶಕತೆಯನ್ನು ಉಳಿಸಿಕೊಳ್ಳುವಲ್ಲಿ ಅವರ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಸದಾನಂದ ಗೌಡ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್