ಅಲ್ಪ ಸಂಖ್ಯಾತರ ಮತ ಒಡೆಯಲು ಬಿಜೆಪಿ ಬೆಂಬಲಿತ ಹೊಸ ಪಕ್ಷ ಹುಟ್ಟಿಕೊಂಡಿದೆ : ಮಮತಾ
Team Udayavani, Mar 25, 2021, 5:16 PM IST
ಪಥರಾಪ್ರತಿಮ/ ಪಶ್ಚಿಮ ಬಂಗಾಳ : ವಿಧಾನ ಸಭೆ ಚುನಾವಣೆಯಲ್ಲಿ ಅಲ್ಪ ಸಂಖ್ಯಾತರ ಮತಗಳನ್ನು ಒಡೆಯಲು ಹೊಸ ಪಕ್ಷವನ್ನು ಬಿಜೆಪಿ ಬೆಂಬಲಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ ನ ನಾಯಕಿ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಚುನಾವಣಾ ಮತ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹೊಸ ಪಕ್ಷವೊಂದು ಚುನಾವಣೆಯಲ್ಲಿ ಕುತಂತ್ರ ಮಾಡುವುದಕ್ಕೆ ಬಿಜೆಪಿಯಿಂದ ಹಣದ ಸಹಾಯವನ್ನು ಪಡೆದಿದೆ ಎಂದು ಯಾರ ಮತ್ತು ಯಾವ ಪಕ್ಷದ ಹೆಸರನ್ನು ಉಲ್ಲೇಖಿಸದೇ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಓದಿ : ಸಿಎಂ ಕಾರಂತ ಬಡಾವಣೆ ಕೈಬಿಡುವ ಭರವಸೆ ನೀಡಿಲ್ಲ : ವಿಶ್ವನಾಥ್ ಸ್ಪಷ್ಟನೆ
ಅಲ್ಪ ಸಂಖ್ಯಾತರ ಮತವನ್ನು ಒಡೆಯುವ ಉದ್ದೇಶದಿಂದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಬೆಂಬಲಿತ ಹೊಸದೊಂದು ಪಕ್ಷ ರಾಜ್ಯದಲ್ಲಿ ಹುಟ್ಟಿಕೊಂಡಿದೆ. ಆ ಬಿಜೆಪಿ ಬೆಂಬಲಿತ ಪಕ್ಷದ ಅಭ್ಯರ್ಥಿಗಳಿಗೆ ದಯವಿಟ್ಟು ಮತ ಚಲಾವಣೆ ಮಾಡಬೇಡಿ ಎಂದು ಮಮತಾ ಜನರನ್ನು ಕೇಳಿಕೊಂಡಿದ್ದಾರೆ.
ಸಿಪಿಐ(ಎಮ್) ಹಾಗೂ ಕಾಂಗ್ರೆಸ್ ನ್ನು ಕೂಡ ತರಾಟೆಗೆ ತೆಗೆದುಕೊಂಡ ಮಮತಾ, ಆ ಎರಡು ಪಕ್ಷಗಳು ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡಿವೆ ಎಂದಿದ್ದಾರೆ.
ತೃಣಮೂಲ ಕಾಂಗ್ರೆಸ್ ಮಾತ್ರ ರಾಜ್ಯದಲ್ಲಿ ಸಿಎಎ ಮತ್ತು ಎನ್ ಪಿ ಆರ್ ಅನುಷ್ಠಾನವನ್ನು ತಡೆಯುವಲ್ಲಿ ಕಾರ್ಯ ನಿರ್ವಹಿಸುತ್ತದೆ. ಸಮಾಜದಲ್ಲಿನ ಎಲ್ಲಾ ಸಮುದಾಯಗಳಲ್ಲಿ ಸೌಹಾರ್ದತೆಯನ್ನು ತರಲು ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
ಓದಿ : ಕಂಠ ಪೂರ್ತಿ ಕುಡಿಸಿ ತನ್ನ ತಂದೆಯನ್ನೇ ಜೀವಂತವಾಗಿ ಸುಟ್ಟು ಹಾಕಿದ ಮಹಿಳೆ. ಕಾರಣವೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ