Udupi;ಪುತ್ತಿಗೆ ಮಠಾಧೀಶರ ಪರ್ಯಾಯೋತ್ಸವದ ಚಪ್ಪರ ಮುಹೂರ್ತ
Team Udayavani, Dec 20, 2023, 4:38 PM IST
ಉಡುಪಿ : ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಬುಧವಾರ (ಡಿ.20) ಬೆಳಗ್ಗೆ 7.45 ರ ಶುಭ ಘಳಿಗೆಯಲ್ಲಿ ನಡೆಯಿತು.
ರಾಘವೇಂದ್ರ ಕೊಡಂಚ ಅವರ ಪೌರೋಹಿತ್ಯದಲ್ಲಿ, ಚಪ್ಪರ ನಿರ್ವಹಣೆಯ ರಾಜೇಶ್ , ಮುಚ್ಚೂರು ರಾಮಚಂದ್ರ ಭಟ್, ನಾಗರಾಜ್ಉಪಾಧ್ಯ, ಮಠದ ಮೇಸ್ತ್ರಿ ಪದ್ಮನಾಭ ರವರಿಗೆ ಕಾರ್ಯ ನಿರ್ವಹಣೆಯ ಮುಹೂರ್ತ ಪ್ರಸಾದ ನೀಡಲಾಯಿತು.
ಸಮಿತಿಯ ಕಾರ್ಯಾಧ್ಯಕ್ಷರಾದ ರಘುಪತಿ ಭಟ್ ಅವರು ಪರ್ಯಾಯ ಪ್ರಚಾರ ವಾಹನ ಸ್ಟಿಕ್ಕರ್ಸ್ ಗಳನ್ನು ಬಿಡುಗಡೆ ಮಾಡಿದರು. ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ಕೋಶಾಧಿಕಾರಿ ರಂಜನ್ ಕಲ್ಕೂರ್ , ಕಾರ್ಯದರ್ಶಿ ರಾಘವೇಂದ್ರ ಕಿಣಿ, ಸಮಿತಿಯ ಪದಾಧಿಕಾರಿಗಳಾದ ಗುರುರಾಜ ಉಪಾಧ್ಯ, ವಿಷ್ಣುಮೂರ್ತಿ ಉಪಾಧ್ಯ, ರವೀಂದ್ರ ಆಚಾರ್ಯ, ರಘುಪತಿ ರಾವ್, ಹಯವದನ ಭಟ್, ರಾಮ ಕೊಡಂಚ , ನಾಗರಾಜ ರಾವ್, ರಾಮಚಂದ್ರ ಸನಿಲ್, ಸುಮಿತ್ರಾ ಕೆರೆಮಠ, ಅಮಿತ ಕ್ರಮಧಾರಿ, ಸರೋಜಾ, ಗೀತಾ ಮೊದಲಾದವರು ಉಪಸ್ಥಿತರಿದ್ದರು. ಪುತ್ತಿಗೆ ಮಠದ ರಮೇಶ್ ಭಟ್ ಕೆ. ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು.