Vishwagita Paryaya ಎಲ್ಲೂರು ವಿಶ್ವೇಶ್ವರ ದೇವರ ಪರ್ಯಾಯ: ಪುತ್ತಿಗೆ ಶ್ರೀ

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನಕ್ಕೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ

Team Udayavani, Jan 11, 2024, 6:29 PM IST

1-sadsad

ಕಾಪು : ತಮ್ಮ ಚತುರ್ಥ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯವೆಂದು ಘೋಷಿಸಿದ್ದೇವೆ. ವಿಶ್ವ ಎಂದರೆ ಜಗತ್ತು, ಎಲ್ಲೂರಿನ ವಿಶ್ವನಾಥ ದೇವರು ಎಂಬ ಅರ್ಥವಿದೆ. ಎಲ್ಲೂರು ಎಂದರೆ ಎಲ್ಲರ ಊರು. ಹಾಗಾಗಿ ಇದು ಎಲ್ಲೂರು ವಿಶ್ವೇಶ್ವರ ದೇವರ ಪರ್ಯಾಯವಾಗಲಿದೆ. ತಮ್ಮ ಹಿಂದಿನ ಪರ್ಯಾಯಗಳನ್ನು ವಿಶ್ವನಾಥ ದೇವರು ಉತ್ತಮ ರೀತಿಯಲ್ಲಿ ನಡೆಸಿಕೊಟ್ಟಿದ್ದು ಚತುರ್ಥ ಪರ್ಯಾಯವನ್ನೂ ಅತ್ಯುತ್ತಮ ರೀತಿಯಲ್ಲಿ ನಡೆಸಿಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಭಾವೀ ಪರ್ಯಾಯ ಪೀಠಾಧಿಪತಿ ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಪರ್ಯಾಯ ಪೂರ್ವಭಾವಿಯಾಗಿ ಗುರುವಾರ ಮಹತೋಭಾರ ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವತಾ ಪ್ರಾರ್ಥನೆ ಸಲ್ಲಿಸಿ, 108 ಸೀಯಾಳವನ್ನು ಸಮರ್ಪಿಸಿ ಕ್ಷೇತ್ರದ ಆಡಳಿತ ಮಂಡಳಿ, ಗ್ರಾಮ ಸೀಮೆ ಮತ್ತು ಭಕ್ತರ ಗೌರವವನ್ನು ಸ್ವೀಕರಿಸಿ ಬಳಿಕ ಆಶೀರ್ವಚನ ನೀಡಿದರು.

ಶ್ರೀ ವಾದಿರಾಜರಿಗೆ ಬಾಗಿಲನ್ನು ತೆರೆದು ದರ್ಶನವನ್ನು ನೀಡಿದ ವಿಶ್ವನಾಥ ದೇವರು ಶ್ರೀ ಕೃಷ್ಣ ಮಠ ಪರಂಪರೆಯ ಪರ್ಯಾಯದ ವ್ಯವಸ್ಥೆಗೂ ಆಶೀರ್ವಚನ ನೀಡುತ್ತಿದ್ದಾರೆ. ಆಶ್ರಮ ಸ್ವೀಕಾರ ಸಂದರ್ಭ ವಿಶ್ವನಾಥ ದೇವರ ಅನುಗ್ರ ಪಡೆದೇ ಮುನ್ನಡೆದಿದ್ದು ಈಗ ನಮ್ಮ ಸನ್ಯಾಸ ಸ್ವೀಕಾರದ ಸುವರ್ಣ ವರ್ಷ ಸಂಭ್ರಮದಲ್ಲಿದ್ದೇವೆ. ಎಲ್ಲೂರಿನ ವಿಶ್ವನಾಥ ದೇವರು ಸ್ವರ್ಣಪ್ರಿಯನಾಗಿದ್ದು ಅವರ ಸನ್ನಿಧಾನದಲ್ಲಿ ತಮ್ಮ ಸನ್ಯಾಸ ಸ್ವೀಕಾರದ ಸುವರ್ಣ ವರ್ಷಾಚರಣೆಯ ನೆನಪಿಗಾಗಿ ಪಾರ್ಥಸಾರಥಿ ಕೃಷ್ಣನಿಗೆ ಸುವರ್ಣ ರಥ ಸಮರ್ಪಣೆಗೆ ಪೂರಕ ಪ್ರಾರ್ಥನೆ ಸಲ್ಲಿಸಲಾಗಿದೆ. ವಿಶ್ವಗೀತಾ ಪರ್ಯಾಯದ ಅವಧಿಯಲ್ಲಿ ಉಡುಪಿ ಕೃಷ್ಣನಿಗೆ ಕೋಟಿ ಗೀತಾ ಯಜ್ನ ಸಮರ್ಪಣೆಯ ಸಂಕಲ್ಪವಿದೆ. ಅದರ ಜತೆಗೆ ಎಲ್ಲ ಯೋಜನೆಗಳಿಗೂ ದೇವರ ಆಶೀರ್ವಾದ ಮತ್ತು ಮಠದ ಭಕ್ತರ ಸಹಕಾರದೊಂದಿಗೆ ಎಲ್ಲ ಯೋಜನೆಗಳನ್ನೂ ಸಮರ್ಪಿಸಿ ಮತ್ತೆ ಸನ್ನಿಧಾನಕ್ಕೆ ಬರುತ್ತೇವೆ ಎಂದರು.

ದೇಗುಲದ ತಂತ್ರಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿ ಮತ್ತು ಅರ್ಚಕ ವೇ| ಮೂ| ವೆಂಕಟೇಶ ಭಟ್ ನೇತೃತ್ವದಲ್ಲಿ ಸ್ವಾಮೀಜಿಯವರನ್ನು ಸ್ವಾಗತಿಸಿ, ಪಾದಪೂಜೆ ನೆರವೇರಿಸಲಾಯಿತು.

ಪವಿತ್ರಪಾಣಿ ಕೆ. ಎಲ್. ಕುಂಡಂತಾಯ, ದೇಗುಲದ ಕಾರ್ಯ ನಿರ್ವಹಣಾಽಕಾರಿ ರಾಜಗೋಪಾಲ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣಾಕರ ಶೆಟ್ಟಿ ಕಳತ್ತೂರು, ಮಾಜಿ ಆಡಳಿತ ಮೊಕ್ತೇಸರ ವೈ. ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಸದಸ್ಯರಾದ ಜೆನ್ನಿ ನರಸಿಂಹ ಭಟ್, ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದೇವರಾಜ ರಾವ್ ನಡಿಮನೆ, ಎಲ್ಲೂರು ಗ್ರಾ.ಪಂ. ಅಧ್ಯಕ್ಷ ರವಿರಾಜ ರಾವ್, ಪ್ರಮುಖರಾದ ಕೇಂಜ ಭಾರ್ಗವ ತಂತ್ರಿ, ಜೆನ್ನಿ ಅನಂತಪದ್ಮನಾಭ ಭಟ್, ಸದಾಶಿವ ಶೆಟ್ಟಿ ಎಲ್ಲೂರುಗುತ್ತು, ನಿರಂಜನ್ ಶೆಟ್ಟಿ, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ನಯೇಶ್ ಪಿ. ಶೆಟ್ಟಿ, ಸದಾಶಿವ ಶೆಟ್ಟಿ ಎಲ್ಲೂರು, ಎಲ್ಲೂರು ಯುವಕ ಮಂಡಲದ ಅಧ್ಯಕ್ಷ ಸುಕೇಶ್ ಸುವರ್ಣ, ಶ್ರೀ ಪುತ್ತಿಗೆ ಮಠದ ನಾಗರಾಜ ಆಚಾರ್ಯ, ಪ್ರಸನ್ನ ಆಚಾರ್ಯ, ರತೀಶ್ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.