ಬಿಜೆಪಿಯಿಂದ ಮತ್ತೆ ದೂರವಾಗುತ್ತಾ ಜೆಡಿಯು? ರಾಜಕೀಯ ವಲಯದಲ್ಲಿ ಚರ್ಚೆ


Team Udayavani, Aug 6, 2022, 3:23 PM IST

nitish-kumar

News and Image source : PTI

ಪಾಟ್ನಾ : ಬಿಜೆಪಿ ಮತ್ತು ಜೆಡಿಯು ನಡುವೆ ಮತ್ತೆ ಬಿರುಕು ಕಾಣಿಸಿಕೊಂಡಿದೆಯೇ ಎನ್ನುವ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಎದ್ದಿದ್ದು, ಇದಕ್ಕೆ ಬಿಹಾರ ರಾಜಕಾರಣದಲ್ಲಿ ನಡೆದ ಇತ್ತೀಚಿಗಿನ ಹಲವು ಬೆಳವಣಿಗೆಗಳು ಕಾರಣವಾಗಿವೆ.

ಜೆಡಿಯು ಮತ್ತೆ ಬಿಹಾರದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲು ಹವಣಿಸುತ್ತಿದ್ದು, ರಾಷ್ಟ್ರೀಯ ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅವರು ಕೆಲ ಮಾಧ್ಯಮಗಳಿಗೆ ನೀಡಿದ ಹೇಳಿಕೆ ಚರ್ಚೆಯ ಕೇಂದ್ರ ಬಿಂದುವಾಗಿದೆ. ”ನಮ್ಮ ಪಕ್ಷ ಸಾಮರ್ಥ್ಯವನ್ನು ಮತ್ತೆ ಹೆಚ್ಚಿಸಿಕೊಳ್ಳುವತ್ತ ಕೆಲಸ ಮಾಡುತ್ತಿದ್ದು, 2020 ರ ವಿಧಾನಸಭಾ ಚುನಾವಣೆಯಲ್ಲಿ ಪಿತೂರಿಯಿಂದಾಗಿ ನಾವು ಗೆಲ್ಲುವ ಅಭ್ಯರ್ಥಿಗಳ ಸಂಖ್ಯೆ ಕಡಿಮೆಯಾಯಿತು” ಎಂದು ಹೇಳಿಕೆ ನೀಡಿ ಬಿಜೆಪಿಗೆ ಶಾಕ್ ನೀಡಿದ್ದರು.

ಈ ಪ್ರಸ್ತಾಪವನ್ನು ಅವರು ಎಲ್ ಜೆಪಿ ನಾಯಕ ಚಿರಾಗ್ ಪಾಸ್ವಾನ್ ಅವರನ್ನು ಉಲ್ಲೇಖಿಸಿ ನೀಡಿದ್ದು, ಜೆಡಿಯು ಅಭ್ಯರ್ಥಿಗಳ ಎದುರು ಎಲ್ ಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಮತವಿಭಜನೆಗೆ ಕಾರಣವಾಗಿದ್ದರು.ಆ ಪೈಕಿ ಹೆಚ್ಚಿನವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿದ್ದರು. ಇದರಿಂದಾಗಿ ಐದು ವರ್ಷಗಳ ಹಿಂದೆ 71 ವಿಧಾನಸಭಾ ಸ್ಥಾನ ಗೆದ್ದಿದ್ದ ಜೆಡಿಯು 43 ಕ್ಕೆ ಇಳಿದಿತ್ತು. ರಾಷ್ಟ್ರಪತಿ ಚುನಾವಣೆಗೂ ಮುನ್ನ ಎನ್ ಡಿಎ ಸಭೆಗೆ ಚಿರಾಗ್ ಪಾಸ್ವಾನ್ ಅವರನ್ನು ಬಿಜೆಪಿ ಕರೆದಿತ್ತು.

ಜೆಡಿಯು ಉನ್ನತ ನಾಯಕನ ಹೇಳಿಕೆಗಳು ವಿಪಕ್ಷಗಳಿಗೆ ಟೀಕಾಸ್ತ್ರವಾಗಿದ್ದು, ಆರ್ ಜೆಡಿ ವಕ್ತಾರ ಮೃತ್ಯುಂಜಯ ತಿವಾರಿ ಈ ಬಗ್ಗೆ ಪ್ರತಿಕ್ರಿಯಿಸಿ, ”ಎನ್ ಡಿಎಯಲ್ಲಿ ಎಲ್ಲವೂ ಸರಿಯಿಲ್ಲ, ಈ ಮಳೆಗಾಲದಲ್ಲಿ ನೆರೆಯಲ್ಲಿ ಅವರ ಹಡಗು ಮುಳುಗಲಿದೆ” ಎಂದಿದ್ದಾರೆ.

”ಸಮಾಜವಾದಿ ಸಿದ್ದಂತದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಹಿಂದುತ್ವ ಪ್ರತಿಪಾದಕ ಪಕ್ಷ ಬಿಜೆಪಿಯೊಂದಿಗೆ ಹೊಂದಾಣಿಕೆ ಸಾಧ್ಯವಿಲ್ಲ” ಎಂದು ಮೃತ್ಯುಂಜಯ ತಿವಾರಿ ಹೇಳಿದ್ದಾರೆ.

”ಬಿಜೆಪಿಯೊಂದಿಗೆ ಆತ್ಮಸಾಕ್ಷಿಗೆ ಅನುಗುಣವಾಗಿ ಸ್ಪಷ್ಟವಾದ ಬಾಂಧವ್ಯ ಹೊಂದಿದ್ದು ಅನಗತ್ಯವಾದ ವಿಚಾರಗಳಿಂದ ದಿಗ್ಭ್ರಮೆಯಾಗುತ್ತಿದೆ” ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಹೇಳಿಕೆ ನೀಡಿದ್ದು, ”2024 ಮತ್ತು 2025 ರ ಚುನಾವಣೆ ಕುರಿತು ಈಗೇಕೆ ಚರ್ಚೆ ? ನಿತೀಶ್ ಕುಮಾರ್ ಅವರ ನಾಯಕತ್ವವನ್ನು ಎನ್ ಡಿಎ ಯಲ್ಲಿ ಯಾರೊಬ್ಬರೂ ಪ್ರಶ್ನಿಸುವವರಿಲ್ಲ” ಎಂದರು.

”1996 ರಿಂದ ಸಮತಾ ಪಕ್ಷವಿದ್ದ ವೇಳೆಯಲ್ಲೇ ಬಿಜೆಪಿ ನಿತೀಶ್ ಕುಮಾರ್ ಅವರೊಂದಿಗೆ ಮಿತ್ರತ್ವ ಹೊಂದಿತ್ತು. ಅವರ ಪಕ್ಷದಲ್ಲಿ ಇತರರು ಏನು ಹೇಳುತ್ತಾರೆ ಎನ್ನುವ ಕುರಿತು ನಾವು ಹೆಚ್ಚು ಯೋಚಿಸುವುದಿಲ್ಲ. ಬಿಜೆಪಿ ಯಾವಾಗಲೂ ನಿತೀಶ್ ಕುಮಾರ್ ಎನ್ ಡಿಎ ನಾಯಕ ಎಂದು ನಮ್ಮ ಪಕ್ಷ ಒಪ್ಪಿದೆ” ಎಂದು ಬಿಹಾರ ಬಿಜೆಪಿ ವಕ್ತಾರ ಪ್ರೇಮ್ ರಂಜನ್ ಪಟೇಲ್ ಹೇಳಿಕೆ ನೀಡಿದ್ದಾರೆ.

”ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟ ವಾದ ವೇಳೆ ನಮ್ಮ ಪಕ್ಷ ಕೊಟ್ಟ ಮಾತಿಗೆ ಬದ್ಧವಾಗಿ ನಡೆದುಕೊಂಡಿರುವುದನ್ನು ನೆನಪಿಸಿಕೊಳ್ಳಿ. ಯಾವ ಪಕ್ಷ ಎಷ್ಟು ಸ್ಥಾನ ಗೆದ್ದಿದೆ ಎನ್ನುವುದನ್ನು ನೋಡದೆ, ನಿತೀಶ್ ಅವರು ಸ್ಥಾನ ಬಿಡಲು ಸಿದ್ಧವಾಗಿದ್ದರೂ ಅವರನ್ನೇ ನಮ್ಮ ನಾಯಕ ಎಂದು ತೋರಿಸಿದ್ದೇವೆ” ಎಂದು ಪ್ರೇಮ್ ರಂಜನ್ ಪಟೇಲ್ ಹೇಳಿದರು.

”ರಾಷ್ಟ ಮಟ್ಟದಲ್ಲಿ ನರೇಂದ್ರ ಮೋದಿ ನಮ್ಮ ನಾಯಕ, ಬಿಹಾರ ದಲ್ಲಿ ನಿತೀಶ್ ನಮಗೆ ನಾಯಕ. ಅವರ ನೇತೃತ್ವದಲ್ಲಿ ಮೈತ್ರಿ ಮಾಡಿಕೊಂಡು ಮುಂದಿನ ಲೋಕಸಭಾ, ವಿಧಾನಸಭಾ ಚುನಾವಣೆಗಳನ್ನು ಎದುರಿಸುತ್ತೇವೆ” ಎಂದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.