ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

Team Udayavani, Jul 2, 2022, 4:39 PM IST

ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜುಲೈ ತಿಂಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹರಿದಾಡುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿವೆ.

ಇದನ್ನೂ ಓದಿ:ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

ಅಮರೀಂದರ್ ಸಿಂಗ್ ಅವರು ಲಂಡನ್ ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕೇಸರಿ ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ಕೆಲವು ವಾರಗಳ ನಂತರ ಕ್ಯಾಪ್ಟನ್ ಸಿಂಗ್ ಲಂಡನ್ ನಿಂದ ಪಂಜಾಬ್ ಗೆ ವಾಪಸ್ ಆದ ನಂತರ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಂದು ವೇಳೆ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಿದಲ್ಲಿ, ಸಿಂಗ್ ಪತ್ನಿ ಪ್ರಣೀತ್ ಕೌರ್ ನೇತೃತ್ವದಲ್ಲಿ ಪಕ್ಷದ ವಿಲೀನ ಪ್ರಕ್ರಿಯೆ ನಡೆಯಲಿದೆ. ಪಟಿಯಾಲಾ ಸಂಸದರಾಗಿರುವ ಕೌರ್ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಕುರಿತು ಜುಲೈ 5ರಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ. ಜುಲೈ 19 ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 20ರಂದು ನಾಮಪತ್ರ ಪರಿಶೀಲನೆ, ಜುಲೈ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ ಎರಡನೇ ವಾರದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಎನ್ ಡಿಎ ಮೈತ್ರಿಕೂಟ ಘೋಷಿಸಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

kupwara

Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.