ಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ: ಫಲಾನುಭವಿಗಳೊಂದಿಗೆ ಮೋದಿ ಸಂವಾದ
Team Udayavani, Oct 21, 2021, 2:18 PM IST
ಪಣಜಿ: ಆತ್ಮ ನಿರ್ಭರ ಭಾರತ್ ಸ್ವಯಂಪೂರ್ಣ ಗೋವಾ ಈ ಸಂಕಲ್ಪದ ಅಡಿಯಲ್ಲಿ ಕಳೆದ ವರ್ಷ ಲಾಭ ಪಡೆದ ಜನತೆಯ ಬಳಿ ಮಾಹಿತಿ ಪಡೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಗೋವಾದ ಸ್ವಯಂಸೇವಕರು ಮತ್ತು ಜನತೆಯೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮ ಎಲ್ಲ ಪಂಚಾಯತಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನತೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದ್ದಾರೆ.
ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪ್ರಮೋದ ಸಾವಂತ್-ಪ್ರಧಾನಿ ನರೇಂದ್ರ ಮೋದಿಯವರು ಅಂದು 7 ಜನರೊಂದಿಗೆ ಸಂವಾದ ನಡೆಸಲಿದ್ದಾರೆ. ಒಬ್ಬ ಸ್ವಯಂಪೂರ್ಣ ಮಿತ್ರ ಹಾಗೂ ಈ ಯೋಜನೆಗಳ ಲಾಭಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ:ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ
2020 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಅಭಿಯಾನವನ್ನು ಆರಂಭಿಸಿದ ನಂತರ ರಾಜ್ಯದಲ್ಲಿನ 191 ಪಂಚಾಯತಿಗಳಲ್ಲಿ ಹಾಗೂ 14 ಪಾಲಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳನ್ನು ಸ್ವಯಂಪೂರ್ಣ ಮಿತ್ರ ಎಂದು ನಿಯುಕ್ತಿಗೊಳಿಸಲಾಗಿದೆ. 12 ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.