ಹಾರುವ “ಕುದುರೆ”ಗಳಿಗೆ ಸ್ಥಳ ಬಿಡಲು ಬಿಜೆಪಿಯಿಂದಲೇ ಓಪನ್ ಆಫರ್

20 ಹಾಲಿ ಶಾಸಕರಿಗೆ ಟಿಕೆಟ್ ನಕಾರ, ಹೋಗುವುದಿದ್ದರೆ ಹೋಗಿ ಬಿಡಿ ಎಂದ ಕೇಸರಿ ಪಡೆ

Team Udayavani, Jan 15, 2022, 6:26 PM IST

BJP FLAG

ಲಕ್ನೋ :ಇತರೆ ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಪಕ್ಷಾಂತರದಿಂದ ಬಿಜೆಪಿ ತತ್ತರಿಸಿದೆ ಎಂಬ ರಾಜಕೀಯ ವ್ಯಾಖ್ಯಾನವನ್ನೇ ತಲೆಕೆಳಗೆ ಮಾಡಲು ಹೊರಟಿರುವ ಕೇಸರಿ ಪಡೆ, “ಹಾರುವ ಕುದುರೆ’’ಗಳಿಗೆ ಹೆಬ್ಬಾಗಿಲತ್ತ ಬೆರಳು ತೋರಿಸಿದೆ.

ಫೆ.೧೦ರಿಂದ ಆರಂಭಗೊಳುವ ಮೊದಲ ಎರಡು ಹಂತದ ಮತದಾನ ನಡೆಯುವ 107  ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ ಹಾಲಿ ಶಾಸಕರ ಪೈಕಿ 20  ಜನರಿಗೆ ಟಿಕೆಟ್ ನಿರಾಕರಿಸಿದೆ. ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಈ ಶಾಸಕರು ಟಿಕೆಟ್ ನಿರಾಕರಿಸಿದರೆ ಮೌರ್ಯ ಹಾದಿ ಹಿಡಿಯುತ್ತೇವೆ ಎಂದು ಪರೋಕ್ಷ ಎಚ್ಚರಿಕೆಯನ್ನು ರವಾನಿಸಿದ್ದರು. ಆದರೆ ಇದ್ಯಾವುದಕ್ಕೂ ಬಗ್ಗದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 20 ಜನರಿಗೆ ಟಿಕೆಟ್ ನಿರಾಕರಿಸಿದ್ದಾರೆ. ತನ್ಮೂಲಕ ಚುನಾವಣೆಯ ಹೊಸ್ತಿಲಲ್ಲಿ ಪಕ್ಷಾಂತರದ ಬೆದರಿಕೆ ಹಾಕಿದರೆ ತಾವು ಸೈರಿಸುವುದಿಲ್ಲ ಎಂಬ ಕಟ್ಟೆಚ್ಚರ ರವಾನಿಸಿದ್ದಾರೆ.

ಈಗಾಗಲೇ ಅಭ್ಯರ್ಥಿಗಳ ಹೆಸರು ಪ್ರಕಟಗೊಂಡಿರುವ ೧೦೭ ಕ್ಷೇತ್ರಗಳ ಪೈಕಿ ಬಿಜೆಪಿ ೨೦೧೭ರಲ್ಲಿ ೮೩ ಕಡೆ ವಿಜಯ ಸಾಧಿಸಿತ್ತು. ಗೆದ್ದವರ ಪೈಕಿ ೬೩ ಜನರು ಮಾತ್ರ ಟಿಕೆಟ್ ಭದ್ರ ಪಡಿಸಿಕೊಂಡಿದ್ದು, ೨೦ ಹೊಸಮುಖಗಳನ್ನು ಪರಿಚಯಿಸಲಾಗಿದೆ. ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳ ಪೈಕಿಯೂ ಹೊಸ ಮುಖಗಳಿವೆ. ಈ ಮೂಲಕ ಚುನಾವಣೆಗೆ ಚಲನಶೀಲತೆಯ ಭಾಷ್ಯ ಬರೆಯುವುದಕ್ಕೆ ಬಿಜೆಪಿ ಮುಂದಾಗಿದೆ.

ಮೌರ್ಯ ತುಟ್ಟಿಯಾಗುವರೇ ? 
ಈಗಾಗಲೇ ಪಕ್ಷ ತೊರೆದಿರುವ ಸ್ವಾಮಿ ಪ್ರಸಾದ್ ಮೌರ್ಯ ವಿಚಾರದಲ್ಲಿ ಬಿಜೆಪಿ ಬೇರೆಯದೇ ಆದ ಲೆಕ್ಕಾಚಾರ ಹೊಂದಿದೆ. ಯಾದವೇತರ ರಾಜಕಾರಣದಲ್ಲಿ ಇತರೆ ಹಿಂದುಳಿದ ವರ್ಗವನ್ನು ಪ್ರತಿನಿಧಿಸುವ ಮೌರ್ಯರು ಉತ್ತರಪ್ರದೇಶದಲ್ಲಿ ನಿರ್ಣಾಯಕರೇನೋ ಸರಿ, ಆದರೆ ಆ ಪರ್ಯಾಯ ರಾಜಕಾರಣದ ಪ್ರತಿನಿಧಿ ಹಾಲಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೊರತು ಸ್ವಾಮಿ ಪ್ರಸಾದ್ ಅಲ್ಲ.

ಭ್ರಷ್ಟಾಚಾರ ಹಾಗೂ ಸ್ವಜನಪಕ್ಷಪಾತದ ವಿಚಾರದಲ್ಲಿ ಸ್ವಾಮಿ ಪ್ರಸಾದ್ ಮೌರ್ಯ ಮುಲಾಯಂ ಸಿಂಗ್ ಯಾದವ್‌ಗೆ ಸರಿಸಮಾನರು ಎಂಬ ವ್ಯಾಖ್ಯಾನ ಬಿಜೆಪಿಯಿಂದ ಈ ಕೇಳಿ ಬರುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮೌರ್ಯ ಪುತ್ರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ ಗೆಲ್ಲಿಸಲಾಗಿತ್ತು. ಈಗ ತಮ್ಮ ಪುತ್ರನಿಗೂ ಅವರು ಟಿಕೆಟ್ ಬಯಸಿದ್ದರು. ಇದನ್ನು ನಿರಾಕರಿಸಿದಕ್ಕಾಗಿ ಪಕ್ಷ ತೊರೆದಿದ್ದಾರೆಯೇ ವಿನಾ ಬೇರೆ ಯಾವುದೇ ಸೈದ್ಧಾಂತಿಕ ಕಾರಣವನ್ನು ಸ್ವಾಮಿ ಪ್ರಸಾದ್ ಹೊಂದಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದೆ. ಹೀಗಾಗಿ ಇತರೆ ಹಿಂದುಳಿದ ವರ್ಗದ ಮೇಲೆ ಬಿಗಿ ಹಿಡಿತ ಹೊಂದಿರುವ ಕೇಶವ ಪ್ರಸಾದ್ ಮೌರ್ಯ ಅವರನ್ನು ಯೋಗಿ ಆದಿತ್ಯನಾಥ್ ಬಲವಾಗಿ ನಂಬಿಕೊಂಡಿದ್ದಾರೆ.

ಲಾಲ್ ಟೋಪಿ
ಇದೆಲ್ಲದರ ಮಧ್ಯೆ ಚುನಾವಣಾ ಹೊಸ್ತಿಲಲ್ಲಿ ಬಿಎಸ್ಪಿಯ ಆಪ್ತ ಅತ್ತರು ವ್ಯಾಪಾರಿಗಳ ಮೇಲೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ದೊರೆತ ಅಪಾ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪ್ರಕರಣ ಈ ಚುನಾವಣೆಯಲ್ಲಿ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ. “ಲಾಲ್ ಟೋಪಿ” (ಸಮಾಜವಾದಿಗಳ) ಗಳ ಬಗ್ಗೆ ಈ ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ನಿರಂತರ ಟೀಕೆ ಈಗ ಉತ್ತರ ಪ್ರದೇಶದಲ್ಲಿ ಚುನಾವಣಾ ಲಾವಣಿ ಸ್ವರೂಪ ಪಡೆದುಕೊಳ್ಳುತ್ತಿದೆ.

ಸಮಾಜವಾದಿ, ಬಹುಜನ ಸಮಾಜ, ಕಾಂಗ್ರೆಸ್ ಪಕ್ಷಗಳು ಈ ಬಾರಿ ಯಾದವರು, ಠಾಕೂರರು ಹಾಗೂ ಮೇಲುವರ್ಗದ ಓಲೈಕೆಗೆ ಅತಿಯಾಗಿ ಇಳಿದಿರುವುದರಿಂದ ಬಿಜೆಪಿ ಇತರೆ ಹಿಂದುಳಿದ ವರ್ಗ ಹಾಗೂ ದಲಿತ ಮತಗಳ ಮೇಲೆ ಹೆಚ್ಚು ಕಣ್ಣಿಟ್ಟಿದೆ. ತೆರೆಮರೆಯಲ್ಲಿ ಸಂಘಪರಿವಾರದ ತಂತ್ರಗಾರಿಕೆಯೂ ನಡೆಯುತ್ತಿದ್ದು, “ಸುಲಭಕ್ಕೆ ಬಿಡುವುದಿಲ್ಲ’’ ಎಂಬ ಸಂದೇಶವನ್ನು ಬಿಜೆಪಿ ರವಾನಿಸುತ್ತಿದೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.