ಏನಿದು ಬಿಜೆಪಿ ಚಿಂತನಾ ಸಭೆಯ ಹಕೀಕತ್?
ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ವರ್ಷ ಪೂರೈಸುವ ಹೊಸ್ತಿಲಲ್ಲೇ..
Team Udayavani, Jul 14, 2022, 3:42 PM IST
ಬೆಂಗಳೂರು : ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ವರ್ಷ ಪೂರೈಸುವ ಹೊಸ್ತಿಲಲ್ಲೇ ಬಿಜೆಪಿ ಆಯೋಜಿಸಿರುವ ಚಿಂತನಾ ಸಭೆ ಈಗ ತೀವ್ರ ಕುತೂಹಲ ಸೃಷ್ಟಿಸಿದೆ.
ಬೆಂಗಳೂರು ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಚಿಂತನಾಸಭೆ ನಡೆಯಲಿದೆ. ಜುಲೈ 15, 16 ರಂದು ಈ ಸಭೆ ನಡೆಯಲಿದ್ದು, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಲಿದ್ದಾರೆ.
ವಿಶೇಷವೆಂದರೆ ಈ ಸಭೆಯ ವಿಚಾರದಲ್ಲಿ ಪಕ್ಷದ ಎಲ್ಲ ಅಧಿಕೃತ ವೇದಿಕೆಗಳು ಮಗುಮ್ಮಾಗಿವೆ. ಮಾಧ್ಯಮಗಳಿಗೆ ಆಹ್ವಾನವಿಲ್ಲದಿರುವುದರ ಜತೆಗೆ ಸಭೆಯ ಸ್ವರೂಪದ ಬಗ್ಗೆಯೂ ಸ್ಪಷ್ಟತೆ ಇಲ್ಲ.
ಚುನಾವಣಾ ವರ್ಷದಲ್ಲಿ ಸಚಿವರ ಮೌಲ್ಯಮಾಪನ ಮಾಡುವುದಕ್ಕೆ ಈ ಸಭೆ ವೇದಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.ಇದರ ಜತೆಗೆ ಮೂಲ ಬಿಜೆಪಿ ಸಚಿವರ ಜತೆಗೆ ಪ್ರತ್ಯೇಕ ಸಭೆ ಹಾಗೂ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸರಕಾರಕ್ಕೆ ಇನ್ನಷ್ಟು ವೇಗೋತ್ಕರ್ಷ ನೀಡುವುದಕ್ಕಾಗಿ ಚಿಂತನಾ ಬೈಠಕ್ ಕರೆಯಲಾಗಿದೆ ಎಂದೂ ಬಿಜೆಪಿ ಮೂಲಗಳು ಹೇಳುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
Delhi Liquor Scam:ತಿಹಾರ್ ಜೈಲಿನೊಳಗೆ ಬಿಆರ್ ಎಸ್ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ
Liquor Policy Case: ಅರವಿಂದ ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ
Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್ ಕದತಟ್ಟಿದ ಕೇಜ್ರಿವಾಲ್