ಚಂಪಾವತ್ ನಲ್ಲಿ ಸಿಎಂ ಧಾಮಿ ಪರ ಸಿಎಂ ಯೋಗಿ ಭರ್ಜರಿ ಪ್ರಚಾರ
ಜನರ ಕನಸುಗಳನ್ನು ನನಸಾಗಿಸಲು ಬಿಜೆಪಿ ಅಗತ್ಯ
Team Udayavani, May 28, 2022, 3:17 PM IST
ಚಂಪಾವತ್ : ಮೇ 31 ರಂದು ಚಂಪಾವತ್ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಪರವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ತನಕ್ಪುರ ನಗರದಲ್ಲಿ ರೋಡ್ ಶೋ ನಡೆಸಿದರು.
”ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಬಿಜೆಪಿ ಸರಕಾರವು ಉತ್ತರಾಖಂಡ ರಾಜ್ಯದಲ್ಲಿ ಅಭಿವೃದ್ಧಿಯ ಮಾದರಿಯನ್ನು ನೀಡಿದೆ. ಉತ್ತರಾಖಂಡದ ಜನರ ಕನಸುಗಳನ್ನು ನನಸಾಗಿಸಲು ಬಿಜೆಪಿ ಅಗತ್ಯ, ಪುಷ್ಕರ್ ಸಿಂಗ್ ಧಾಮಿ ಅವರಂತಹ ಯುವಕರು ಅಗತ್ಯ” ಎಂದು ಆದಿತ್ಯನಾಥ್ ಹೇಳಿದರು.
”ಚಂಪಾವತ್ನ ಪುಣ್ಯಭೂಮಿಯಲ್ಲಿ ನೆರೆದಿರುವ ಈ ಜನಸಮೂಹವು ರಾಷ್ಟ್ರೀಯತೆ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಹಾಡುತ್ತಿದೆ.ಇಲ್ಲಿನ ಪ್ರತಿ ಮತಗಟ್ಟೆಯಲ್ಲೂ ಕಮಲದ ಹೂವು ಅರಳುವುದು ಖಚಿತ.ನನ್ನ ಚಂಪಾವತ್ ಜನರಿಗೆ ಧನ್ಯವಾದಗಳು” ಎಂದು ಯೋಗಿ ಹೇಳಿದರು.
ಫೆಬ್ರವರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಖತಿಮಾ ಕ್ಷೇತ್ರದಲ್ಲಿ ಧಾಮಿ ಅವರು ಸೋತಿದ್ದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಶಾಸಕ ಕೈಲಾಶ್ ಗೆಹ್ಟೋರಿ ಅವರು ವಿಧಾನಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆಗೆ ದಾರಿ ಮಾಡಿಕೊಟ್ಟಿದ್ದರು.
70 ಸದಸ್ಯ ಬಲದ ಉತ್ತರಾಖಂಡದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗಳಿಸುವ ಮೂಲಕ ಸತತ ಎರಡನೇ ಅವಧಿಗೆ ಜನಾದೇಶ ಪಡೆದಿತ್ತು. ಸೋತರೂ ಸಿಎಂ ಸ್ಥಾನಕ್ಕೆ ಧಾಮಿಯವರನ್ನೇ ಅವಿರೋಧವಾಗಿ ಬಿಜೆಪಿ ಆಯ್ಕೆ ಮಾಡಿತ್ತು.
ಜೂನ್ 3 ರಂದು ಮತ ಎಣಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ