ಪಾಕ್ – ಚೀನಾ ಹೆಸರು ಹೇಳಲು ಮೋದಿಗೆ ಭಯವೇಕೆ ? ಕಾಂಗ್ರೆಸ್ ಪ್ರಶ್ನೆ
Team Udayavani, Sep 26, 2021, 2:56 PM IST
ಬೆಂಗಳೂರು: ಶನಿವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಟೀಕಿಸಿದೆ. ಮೋದಿಯವರಿಗೆ ಪಾಕ್ ಮತ್ತು ಚೀನಾ ಹೆಸರು ಹೇಳಲು ಏಕೆ ಭಯ ಎಂದು ಪ್ರಶ್ನಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, “ಹಿಂದಿನಂತೆಯೇ ಈಗಲೂ ವಿಶ್ವಸಂಸ್ಥೆಯ ತಮ್ಮ ಭಾಷಣದಲ್ಲಿ ಪಾಕಿಸ್ತಾನ, ಚೀನಾದ ಹೆಸರು ಹೇಳಲು 56 ಇಂಚಿನ ಎದೆಯವರು ಭಯಪಟ್ಟಿದ್ದಾರೆ. ಪಾಕ್ನ ಭಯೋತ್ಪಾದನೆಗೆ ಕುಮ್ಮಕ್ಕು ಹಾಗೂ ಚೀನಾದ ಅತಿಕ್ರಮಣವನ್ನು ಜಾಗತಿಕ ವೇದಿಕೆಯಲ್ಲಿ ನೇರವಾಗಿ ಪ್ರಸ್ತಾಪಿಸಲು ಹಿಂಜರಿದಿದ್ದಾರೆ. ಪ್ರಧಾನಿ ಮೋದಿಯವರಿಗೆ ಪಾಕ್, ಚೀನಾದ ಹೆಸರು ಹೇಳಲು ಏಕೆ ಅಷ್ಟು ಭಯ? ಎಂದು ಕೇಳಿದೆ.
ಹಿಂದಿನಂತೆಯೇ ಈಗಲೂ ವಿಶ್ವಸಂಸ್ಥೆಯ ತಮ್ಮ ಭಾಷಣದಲ್ಲಿ ಪಾಕಿಸ್ತಾನ, ಚೀನಾದ ಹೆಸರು ಹೇಳಲು 56 ಇಂಚಿನ ಎದೆಯವರು ಭಯಪಟ್ಟಿದ್ದಾರೆ.
ಪಾಕ್ನ ಭಯೋತ್ಪಾದನೆಗೆ ಕುಮ್ಮಕ್ಕು ಹಾಗೂ ಚೀನಾದ ಅತಿಕ್ರಮಣವನ್ನು ಜಾಗತಿಕ ವೇದಿಕೆಯಲ್ಲಿ ನೇರವಾಗಿ ಪ್ರಸ್ತಾಪಿಸಲು ಹಿಂಜರಿದಿದ್ದಾರೆ.@narendramodi ಅವರಿಗೆ ಪಾಕ್, ಚೀನಾದ ಹೆಸರು ಹೇಳಲು ಏಕೆ ಅಷ್ಟು ಭಯ?!
— Karnataka Congress (@INCKarnataka) September 26, 2021
ಇನ್ನು ಶನಿವಾರ ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಭಯೋತ್ಪಾದನೆ ವಿಷಯವನ್ನುಂಟುಕೊಂಡು ಪಾಕ್ ಹಾಗೂ ಚೀನಾ ದೇಶಗಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು. ಭಯೋತ್ಪಾದನೆ ರಾಜಕೀಯ ಅಸ್ತ್ರವಾಗಿ ಬಳಸಬಾರದು. ‘ಉಗ್ರ’ ಪೋಷಕ ರಾಷ್ಟ್ರಗಳು ಅದರಿಂದ ತೊಂದರೆ ಎದುರಿಸಲಿವೆ ಎಂದು ಪಾಕ್ ಹೆಸರು ಹೇಳದೆ ಚಾಟಿ ಬೀಸಿದರು.
ತಮ್ಮ ಭಾಷಣದಲ್ಲಿ ಚೀನಾ ವಿರುದ್ಧವೂ ಹರಿಹಾಯ್ದಿರುವ ಮೋದಿ, ವಿಸ್ತರಣಾವಾದ ನಡೆಸುತ್ತಿರುವ ಚೀನಾಗೂ ಮೋದಿ ಪರೋಕ್ಷವಾಗಿ ಕುಟುಕಿದರು. ಆದರೆ, ಈ ಬಾರಿ ನೆಲದ ಮೇಲಿನ ವಿಸ್ತರಣಾವಾದ ಕ್ಕಿಂತ ಹೆಚ್ಚಾಗಿ ಸಮುದ್ರದಲ್ಲಿನ ಅದರ ವಿಸ್ತರಣಾವಾದದತ್ತ ಗಮನಕೊಟ್ಟರು. ಸಮುದ್ರಗಳು ಎಂದರೆ ನಮ್ಮ ಹಿರಿಮೆ ಇದ್ದಂತೆ. ಯಾವುದೇ ಕಾರಣಕ್ಕೂ ಈ ಸಮುದ್ರಗಳನ್ನು ದುರ್ಬಳಕೆಯಾಗಲು ಬಿಡಬಾರದು ಎಂದು ಮೋದಿ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್