ಕೊತ್ವಾಲ್ ರಾಮಚಂದ್ರನನ್ನು ಬಳಸಿ ಮೇಲೆ ಬಂದ ಡಿಕೆಶಿ: ಆರಗ
ಶ್ರೀಕಿಯಂಥರನ್ನು ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರೇ ನನ್ನ ಬಳಿ ದೂರಿದ್ದಾರೆ.
Team Udayavani, Nov 20, 2021, 11:24 AM IST
ರಾಯಚೂರು: ಹುಚ್ಚು ಹಿಡಿದವರಿಗೆ ಇಡೀ ಪ್ರಪಂಚವೇ ಹುಚ್ಚು ಹಿಡಿದಂತೆ ಕಾಣಿಸುತ್ತದೆ. ಅದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ನಮ್ಮ ಬಗ್ಗೆ ಅಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.
ಸಿರವಾರ ಪಟ್ಟಣದಲ್ಲಿ ನಡೆದ ಜನ ಸ್ವರಾಜ್ ಯಾತ್ರೆಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕೊತ್ವಾಲ್ ರಾಮಚಂದ್ರ ಅಂಥವರನ್ನು ಬಳಸಿಕೊಂಡು ಮೇಲೆ ಬಂದವರು. ಆದರೆ, ನಾವು ಜನರಿಂದ ಬೆಳೆದು ಬಂದಿದ್ದೇವೆ. ಜಲಿಯನ್ ವಾಲಾಬಾಗ್ ಎಂದು ಶುದ್ಧವಾಗಿ ಮಾತನಾಡಲು ತೊದಲುವ ಅವರು ಏನು ಮಾತನಾಡುತ್ತಾರೋ ತಿಳಿಯುವುದಿಲ್ಲ. ತಾಕತ್ತಿದ್ದರೆ ಬಿಟ್ ಕಾಯಿನ್ ಬಗ್ಗೆ ಕಾಂಗ್ರೆಸ್ ನವರು ಒಂದೇ ಒಂದು ದೂರು ಕೊಡಿಸಲಿ.
ಆರೋಪಿ ಶ್ರೀಕಿ ವಿರುದ್ಧ ಕೆಫೆ ಗಲಾಟೆ ಪ್ರಕರಣದಲ್ಲಿ 2018ರಲ್ಲಿ ಚಾರ್ಚ್ಶೀಟ್ ಸಲ್ಲಿಸಿದಾಗ ಅ ಧಿಕಾರದಲ್ಲಿದ್ದ ಕಾಂಗ್ರೆಸ್ ಏಕೆ ಬಂಧಿಸಲಿಲ್ಲ. ಆಗ ಏಕೆ ವಿಚಾರಣೆ ಮಾಡಲಿಲ್ಲ. ಈಗ ಬಹಳ ಜೋರಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರೇ ಆಗ ಐಟಿ ಬಿಟಿ ಸಚಿವರಾಗಿದ್ದರು. ಶ್ರೀಕಿಯನ್ನು ಯಾರ್ಯಾರು ಬಳಸಿ ಕೊಂಡಿದ್ದಾರೆ ಎಂಬುದನ್ನು ತಿಳಿಸಲಿ ಎಂದರು.
ಆನ್ಲೈನ್ನಲ್ಲಿ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಎಲ್ಲ ಮತಗಳು ಒಂದೇ ಕಡೆಯಾಗಿದ್ದವು. ಇದರ ಹಿಂದೆ ಏನೋ ತಂತ್ರಗಾರಿಕೆ ನಡೆದಿದ್ದು, ಶ್ರೀಕಿಯಂಥರನ್ನು ಬಳಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರೇ ನನ್ನ ಬಳಿ ದೂರಿದ್ದಾರೆ. ಶ್ರೀಕಿಯನ್ನು ಕಾಂಗ್ರೆಸ್ ನಾಯಕನ ಪುತ್ರನೇ ಲಕ್ಷ ಲಕ್ಷ ಕೊಟ್ಟು ಫೈವ್ ಸ್ಟಾರ್ ಹೋಟೆಲ್ನಲ್ಲಿಟ್ಟಿದ್ದರು. ಶ್ರೀಕಿ ಮೂಲಕ ತಮ್ಮ ಕೆಲಸ ಮಾಡಿಕೊಂಡಿದ್ದಾರೆ. ಅವರು ದೂರು ಕೊಟ್ಟರೆ ಸಮಗ್ರ ತನಿಖೆ ನಡೆಸಿ ಎಲ್ಲ ವಿಚಾರ ಬಹಿರಂಗ ಪಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ನೇಪಾಳ ಮೇಯರ್ ಪುತ್ರಿ, ಓಶೋ ಅನುಯಾಯಿ ಗೋವಾದಲ್ಲಿ ನಾಪತ್ತೆ
Sikkim Poll:ಸಿಎಂ ತಮಾಂಗ್ 2 ಕ್ಷೇತ್ರಗಳಲ್ಲಿ ಸ್ಪರ್ಧೆ,ಪತ್ನಿ ಮಾಜಿ ಸಿಎಂ ವಿರುದ್ಧ ಕಣಕ್ಕೆ
BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು
BJP ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟಿದ್ದಾರೆ: ಜಗದೀಶ ಶೆಟ್ಟರ್ ಹರ್ಷ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್