ಗೋವಾದಲ್ಲಿ ಬಿಜೆಪಿಗೆ ವೈದ್ಯರು,ಇಂಜಿನಿಯರ್ ಗಳು ಬಲ ತುಂಬಲಿದ್ದಾರೆ: ತಾನಾವಡೆ
Team Udayavani, Apr 29, 2022, 5:05 PM IST
ಪಣಜಿ: ಪಕ್ಷವನ್ನು ಇನ್ನೂ ಬಲಪಡಿಸಲು ಗೋವಾದಲ್ಲಿ ಹಲವು ವೈದ್ಯರು,ಇಂಜಿನಿಯರ್ ಗಳು , ಹಲವು ಜನ ಸೇವಾ ನಿವೃತ್ತ ಅಧಿಕಾರಿಗಳು ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಹೇಳಿದ್ದಾರೆ.
ದಕ್ಷಿಣ ಗೋವಾದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹೃದಯರೋಗ ತಜ್ಞ ಡಾ. ಮಿಲಿಂದ ದೇಸಾಯಿ ಬಿಜೆಪಿ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಗಣೇಶ ಗಾಂವಕರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಉಪಸ್ಥಿತರಿದ್ದರು.
ವಿವಿಧ ಗಣ್ಯರು ಬಿಜೆಪಿ ಸೇರಲು ಉತ್ಸುಕರಾಗಿದ್ದಾರೆ. ಡಾ.ದೇಸಾಯಿ ರವರನ್ನು ಶೀಘ್ರದಲ್ಲಿಯೇ ಬಿಜೆಪಿ ವೈದ್ಯರ ಸೆಲ್ಗೆ ಸೇರಿಸಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇದೆ. ಇದರಿಂದಾಗಿ ಈಗ ಬಿಜೆಪಿ ಸೇರುತ್ತಿರುವವರು ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸುವ ಉದ್ದೇಶವನ್ನಿಟ್ಟುಕೊಂಡು ಬಿಜೆಪಿ ಸೇರುತ್ತಿಲ್ಲ ಎಂದು ತಾನಾವಡೆ ಹೇಳಿದರು.
ಬಿಜೆಪಿ ಸೇರ್ಪಡೆಯಾದ ಡಾ. ಮಿಲಿಂದ ದೇಸಾಯಿ ಮಾತಾಡಿ, ಆಸ್ಪತ್ರೆಯ ಮಾಲೀಕನಾದ ನನಗೆ ಜನರ ಹಾಗೂ ರಾಜಕಾರಣಿಗಳ ನೆರವು ಬೇಕು. ವೈದ್ಯಕೀಯ ಶಿಭಿರಗಳನ್ನು ಆಯೋಜಿಸುವ ಮೂಲಕ ನಾನು ಸಮಾಜಕ್ಕೆ ನನ್ನ ಕೊಡುಗೆ ನೀಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ