ಮಂಡ್ಯದಲ್ಲಿ ಹೊಸ ಲೆಕ್ಕಾಚಾರ: ಬಿಜೆಪಿ ಸೇರಿದ ಡಾ.ಲಕ್ಷ್ಮೀ ಅಶ್ವಿನ್ ಗೌಡ
ನನ್ನ ತ್ಯಾಗಕ್ಕೆ ಸರಿಯಾದ ಅವಕಾಶ ಸಿಗಲಿಲ್ಲ: ತೆನೆ ಇಳಿಸಿದ ಡಾಕ್ಟರ್
Team Udayavani, May 7, 2022, 9:06 PM IST
ಬೆಂಗಳೂರು: ಜೆಡಿಎಸ್ ಸೇರಿ ರಾಜಕೀಯ ಭವಿಷ್ಯ ಕಟ್ಟಿಕೊಳ್ಳಬೇಕು ಎಂದು ಆಂತರಿಕ ಕಂದಾಯ ಸೇವೆಯ ಹುದ್ದೆಗೆ ರಾಜೀನಾಮೆ ನೀಡಿದ್ದ ಡಾ. ಲಕ್ಷ್ಮೀ ಅಶ್ವಿನ್ ಗೌಡ ಅವರು ಶನಿವಾರ ಬಿಜೆಪಿ ಸೇರಿದ್ದಾರೆ.
ಎಂಬಿಬಿಎಸ್ ಮುಗಿಸಿ ಅಧಿಕಾರಿಯಾಗಿರುವ ಲಕ್ಷ್ಮೀ ಅವರ ಮೇಲೆ ಬಿಜೆಪಿ ಹೊಸ ಭರವಸೆ ಇಟ್ಟಿದ್ದು, ಮಂಡ್ಯದಲ್ಲಿ ಪಕ್ಷವನ್ನು ಬಲಪಡಿಸಿಕೊಳ್ಳಲು ಹೊಸ ಲೆಕ್ಕಾಚಾರ ಹಾಕಿಕೊಂಡಿದೆ. ಒಂದೆಡೆ ಅಂಬರೀಷ್ ಅವರ ಅಲೆಯನ್ನು ಬಳಸಿಕೊಳ್ಳಲು ಮುಂದಾಗಿರುವ ಕಮಲ ಪಾಳಯ, ಪಕ್ಷೇತರ ಸಂಸದೆ ಸುಮಲತಾ ಅವರನ್ನು ಮತ್ತು ಪುತ್ರ ಅಭಿಷೇಕ್ ಅವರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ.
ಐಆರ್ ಎ ಎಸ್ ಮಾಡಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಜನಸೇವೆಯನ್ನು ಆಯ್ಕೆ ಮಾಡಿಕೊಂಡೆ. ಆದರೆ ನನ್ನ ತ್ಯಾಗಕ್ಕೆ ಸರಿಯಾದ ಅವಕಾಶ ಸಿಗಲಿಲ್ಲ. ಮಂಡ್ಯ ಜಿಲ್ಲೆಯನ್ನು ದೇಶದಲ್ಲೇ ಮಾದರಿ ಜಿಲ್ಲೆಯನ್ನಾಗಿಸಬೇಕು, ಇಲ್ಲಿನ ಬಡವರ, ಮಹಿಳೆಯರ, ಶೋಷಿತರ ಧ್ವನಿಯಾಗಿ ಕೆಲಸ ಮಾಡಬೇಕು ಅನ್ನುವ ಉದ್ದೇಶದಿಂದ ಬಿಜೆಪಿ ಪಕ್ಷವನ್ನು ಸೇರುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರಲಿ ಎಂದು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಜನಿ ಫೌಂಡೇಶನ್ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಲಕ್ಷ್ಮೀ ಅವರು ಚುನಾವಣೆಗೂ ಮುನ್ನ ಇನ್ನಷ್ಟು ಬಿರುಸಿನ ರಾಜಕೀಯ ಚಟುವಟಿಕೆ ನಡೆಸುವ ಸಾಧ್ಯತೆಗಳಿವೆ.
ಲಕ್ಷ್ಮೀ ಅವರು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಪ್ರಭಾವವಿರುವ ಮದ್ದೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಒಂದೊಮ್ಮೆ ಅಭಿಷೇಕ್ ಅವರು ಬಿಜೆಪಿಗೆ ಬಂದಲ್ಲಿ ಅವರೂ ಮದ್ದೂರು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದಲ್ಲಿ ಲೆಕ್ಕಾಚಾರಗಳು ಬದಲಾಗ ಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ