Shoe ನೆಕ್ಕಲು ಒತ್ತಾಯಿಸಿದ ಆರೋಪ; ಕಾಂಗ್ರೆಸ್ ಶಾಸಕನ ವಿರುದ್ಧ ಎಫ್ಐಆರ್
ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್ಐಆರ್
Team Udayavani, Aug 11, 2023, 6:29 PM IST
ಜೈಪುರ: ದಲಿತ ವ್ಯಕ್ತಿಯೊಬ್ಬನಿಗೆ ಶೂ ನೆಕ್ಕುವಂತೆ ಒತ್ತಾಯಿಸಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಗೋಪಾಲ್ ಮೀನಾ ಮತ್ತು ಐವರು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಪೊಲೀಸರು ತಮ್ಮ ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ ನಂತರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ರಾಜಸ್ಥಾನದ ಜಾಮ್ವಾ ರಾಮ್ಗಢ ಶಾಸಕ ಆರೋಪಗಳನ್ನು ತಳ್ಳಿಹಾಕಿದ್ದು, ಆಸ್ತಿ ಸಂಬಂಧಿತ ವಿವಾದದಿಂದಾಗಿ ನನ್ನ ವಿರುದ್ಧ ನಕಲಿ ಆರೋಪಗಳನ್ನು ಮಾಡಲಾಗಿದೆ. ಇದು ನನ್ನ ಮೇಲೆ ಒತ್ತಡ ಹೇರುವ ತಂತ್ರವಾಗಿದೆ. ಅಕ್ರಮ ಭೂಮಿ ಒತ್ತುವರಿ ವಿಚಾರದಲ್ಲಿ ನನಗೆ ಸಹಾಯ ಮಾಡಬೇಕೆಂದು ಕೆಲವರು ಬಯಸುತ್ತಿದ್ದಾರೆ. ಈ ಪ್ರಕರಣವನ್ನು ದಾಖಲಿಸಿದ ವ್ಯಕ್ತಿ ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.
ಜೂನ್ 30 ರಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಎತ್ತಿಕೊಂಡು ಶಾಸಕರ ಶೂ ನೆಕ್ಕಲು ಒತ್ತಾಯಿಸಿದ ಸ್ಥಳಕ್ಕೆ ಕರೆದೊಯ್ದ ಘಟನೆಯ ನಂತರ ಸರ್ಕಲ್ ಆಫೀಸರ್ ಶಿವಕುಮಾರ್ ಭಾರದ್ವಾಜ್ ತನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ದೂರುದಾರ ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ