ಎಚ್.ಡಿ.ರೇವಣ್ಣ ಕಟ್ಟಾ ಅಭಿಮಾನಿ ಬಿಜೆಪಿ ಸೇರ್ಪಡೆ
ಧಮಕಿ ಹಾಕಿ ಬಾಯಿ ಮುಚ್ಚಿಸುವಲ್ಲಿ ಮುಂದಾಗಿದ್ದು ಬಹುತೇಕ ಕಾರ್ಯಕರ್ತರ ಅನುಭವ ಇದೇ ಆಗಿದೆ.
Team Udayavani, Sep 1, 2021, 1:06 PM IST
ಹೊಳೆನರಸೀಪುರ: ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಜೆಡಿಎಸ್ ಮುಖಂಡ ಮಾಜಿ ಸಚಿವ ಹಾಗೂ ಶಾಸಕ ಎಚ್. ಡಿ.ರೇವಣ್ಣ ಅವರ ಕಟ್ಟ ಅಭಿಮಾನಿ, ಕೃಷಿ ಮಾರುಕಟ್ಟೆ ಮಾಜಿ ಉಪಾಧ್ಯಕ್ಷ ಎಂ.ಎನ್.ಸುರೇಶ್ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾರಗೋಡನಹಳ್ಳಿ ಮಾಯಣ್ಣ, ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಮತ್ತಿತರರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ತಾಲೂಕಿನ ಹುಲಿವಾಲ ಗ್ರಾಮದ ತೋಟದ ಮನೆಯೊಂದರಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಪಕ್ಷಕ್ಕೆ ಸೇರ್ಪಡೆಗೊಂಡ ಸುರೇಶ್ ಅವರು ಮಾತನಾಡಿ ತಾವು 40 ವರ್ಷಗಳಿಂದ ಜೆಡಿಎಸ್ ನಿಷ್ಟಾವಂತ ಕಾರ್ಯಕರ್ತರಾಗಿ ದುಡಿದಿದ್ದು ಪಕ್ಷ ಸಂಘಟನೆಗೆ ಜೆಡಿಎಸ್ ಮುಖಂಡರು ಬಳಸಿಕೊಂಡು ಸ್ಥಾನಮಾನ ನೀಡುವಲ್ಲಿ ತಾರತಮ್ಯವೆಸಗಿರುವುದು ತನ್ನ ಬೇಸರ ತಂದಿದೆ. ಹೀಗಾಗಿ ಜೆಡಿಎಸ್ ತೊರೆದು ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಸೇರ್ಪಡೆ ಆಗುತ್ತಿರುವುದಾಗಿ ತಿಳಿಸಿದರು. ಅಲ್ಲದೇ, ತಮ್ಮೊಂದಿಗೆ ನೂರಾರು ಮಂದಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ
ಆಗುತ್ತಿರುವುದಾಗಿ ತಿಳಿಸಿದರು.
ಬಿಜೆಪಿ ರಾಜ್ಯ ಸಮಿತಿ ಸದಸ್ಯ ಮಾಯಣ್ಣ ಮಾತನಾಡಿ, ಜೆಡಿಎಸ್ ಮುಖಂಡರು ಕಾರ್ಯಕರ್ತರನ್ನು ತಮ್ಮ ಏಳಿಗೆಗಾಗಿ ದುಡಿಸಿಕೊಂಡ ನಂತರ ದೂರ ಸರಿಸಿ ತಾರತಮ್ಯ ನಡೆಸುತ್ತಿದ್ದಾರೆ. ಇದನ್ನು ಪ್ರಶ್ನಿಸುವ ಕಾರ್ಯಕರ್ತನಿಗೆ ಧಮಕಿ ಹಾಕಿ ಬಾಯಿ ಮುಚ್ಚಿಸುವಲ್ಲಿ ಮುಂದಾಗಿದ್ದು ಬಹುತೇಕ ಕಾರ್ಯಕರ್ತರ ಅನುಭವ ಇದೇ ಆಗಿದೆ. ಇತ್ತೀಚಿಗೆ ಹಲವರು ಬಿಜೆಪಿಗೆ ಸೇರ್ಪಡೆ ಆಗುತ್ತಿರುವುದು ಶ್ಲಾಘನೀಯವೆಂದರು. ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಮಳಲಿ ನಾರಾಯಣ್, ಪ್ರಧಾನ ಕಾರ್ಯದರ್ಶಿ ಪ್ರಸನ್ನ, ತಾಲೂಕು ಮಟ್ಟದ ಬಿಜೆಪಿ ಮುಖಂಡರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ